Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 1:9 - ಕನ್ನಡ ಸತ್ಯವೇದವು J.V. (BSI)

9 ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಂಚುಕಿಯರ ನಾಯಕನು ದಾನಿಯೇಲನ ಮೇಲೆ ಕನಿಕರ ಮತ್ತು ದಯೆತೋರುವಂತೆ ದೇವರು ಅನುಗ್ರಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ಅಶ್ಪೆನಜನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ದೇವರು ದಾನಿಯೇಲನ ಮೇಲೆ ಕಂಚುಕಿಯರ ಯಜಮಾನನ ದಯೆ, ಕನಿಕರ ತೋರುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 1:9
14 ತಿಳಿವುಗಳ ಹೋಲಿಕೆ  

ಆದರೂ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕೃಪೆಯನ್ನಿಟ್ಟು ಅವನಿಗೆ ಸೆರೆಯಜಮಾನನ ಬಳಿಯಲ್ಲಿ ದಯೆದೊರಕುವಂತೆ ಮಾಡಿದನು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ ಅವನ ಶತ್ರುಗಳನ್ನೂ ವಿುತ್ರರನ್ನಾಗಿ ಮಾಡುವನು.


ಅವರನ್ನು ಸೆರೆಯೊಯ್ದವರಲ್ಲಿ ಅವರ ಮೇಲೆ ದಯೆಹುಟ್ಟಿಸಿದನು.


ಕಬ್ಬಿಣ ಕರಗಿಸುವ ಕುಲಿಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು


ಆಗ ಅರಸನು ನನ್ನನ್ನು - ನಿನ್ನ ಅಪೇಕ್ಷೆಯೇನು ಎಂದು ಕೇಳಿದನು. ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ ಅರಸನಿಗೆ - ರಾಜರ ಚಿತ್ತವಿರುವದಾದರೆ ಮತ್ತು


ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.


ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.


ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.


ಅವನು ಯಾಕೋಬನಿಗೆ - ಇನ್ನು ಮೇಲೆ ನೀನು ಯಾಕೋಬನೆನ್ನಿಸಿಕೊಳ್ಳುವದಿಲ್ಲ; ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದ್ದರಿಂದ ನಿನಗೆ ಇಸ್ರಾಯೇಲೆಂದು ಹೆಸರುಂಟಾಗುವದು ಎಂದು ಹೇಳಿದನು.


ಇಂಥವರ ಬಾಯೆಂಬ ಕತ್ತಿಯಿಂದಲೂ ಬಲಿಷ್ಠರ ಕೈಯಿಂದಲೂ ದಿಕ್ಕಿಲ್ಲದವರನ್ನು ರಕ್ಷಿಸುತ್ತಾನೆ.


ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವದು, ಅನ್ಯಾಯವು ಬಾಯಿಮುಚ್ಚಿಕೊಳ್ಳುವದು.


ಆ ವಿಜ್ಞಾಪನೆಯನ್ನು ಕೇಳಿ ಕಂಚುಕಿಯರ ಅಧ್ಯಕ್ಷನು ದಾನಿಯೇಲನಿಗೆ - ನಿಮಗೆ ಆಹಾರಪಾನಗಳನ್ನು ಏರ್ಪಡಿಸಿದ ನನ್ನ ಒಡೆಯನಾದ ರಾಜನು ನಿಮ್ಮಂತೆ ಆರಿಸಲ್ಪಟ್ಟ ಯುವಕರ ಮುಖಕ್ಕಿಂತ ನಿಮ್ಮ ಮುಖವು ಬಾಡಿರುವದನ್ನು ನೋಡುವನೆಂದು ಭಯಪಡುತ್ತೇನೆ; ರಾಜನು ನನ್ನ ತಲೆಯನ್ನು ತೆಗಿಸಲು ಕಾರಣರಾದೀರಿ ಎಂದು ಹೇಳಿದನು.


ಹೇಗೈಯು ಆಕೆಯನ್ನು ಮೆಚ್ಚಿ ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನ ದ್ರವ್ಯಗಳನ್ನೂ ಭೋಜನಾಂಶವನ್ನೂ ಆರಿಸಿದ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಬೇಗನೆ ಏರ್ಪಡಿಸಿ ಆಕೆಯನ್ನೂ ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮಭಾಗದಲ್ಲಿರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು