Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 10:19 - ಕನ್ನಡ ಸತ್ಯವೇದವು J.V. (BSI)

19 ಆಮೇಲೆ ಆ ಪುರುಷನು ನನಗೆ - ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು ಎಂದು ಹೇಳಿದನು. ಅವನು ಆ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು - ಎನ್ನೊಡೆಯನೇ, ಮಾತಾಡು; ನನ್ನನ್ನು ಬಲಗೊಳಿಸಿದ್ದೀ ಎಂದರಿಕೆಮಾಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಆತನು “ದಾನಿಯೇಲನೇ, ಭಯಪಡಬೇಡ. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ಸಮಾಧಾನ ತಂದುಕೊ. ಈಗ ನೀನು ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಆತನು ನನ್ನೊಂದಿಗೆ ಮಾತನಾಡಿದ ಮೇಲೆ ನನಗೆ ಬಲಬಂದಿತು. ಆಗ ನಾನು, “ಸ್ವಾಮೀ, ನೀವು ನನಗೆ ಬಲವನ್ನು ನೀಡಿದಿರಿ. ಈಗ ನೀವು ಮಾತನಾಡಬಹುದು” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 10:19
29 ತಿಳಿವುಗಳ ಹೋಲಿಕೆ  

ಭಯಭ್ರಾಂತಹೃದಯರಿಗೆ - ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ದೈವಿಕ ಪ್ರತಿಫಲವನ್ನು ಕೊಡುವದಕ್ಕೂ ಬರುವನು; ತಾನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಹೇಳಿರಿ.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ ಎಂದು ಹೇಳಿದನು.


ಆದರೆ ಯೆಹೋವನು ಅವನಿಗೆ - ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವದಿಲ್ಲ ಅಂದನು.


ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು (ದೇವರಿಗೆ) ಅತಿಪ್ರಿಯ; ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು - ಹೆದರಬೇಡ, ನಾನು ಮೊದಲನೆಯವನೂ ಕಡೆಯವನೂ ಸದಾ ಜೀವಿಸುವವನೂ ಆಗಿದ್ದೇನೆ.


ಅದಕ್ಕಾತನು - ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ಬಲವು ಪೂರ್ಣಸಾಧಕವಾಗುತ್ತದೆ ಎಂದು ನನಗೆ ಹೇಳಿದ್ದಾನೆ. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲಸಿಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾವಸ್ಥೆಗಳ ವಿಷಯದಲ್ಲಿಯೇ ಬಹುಸಂತೋಷವಾಗಿ ಹೆಚ್ಚಳಪಡುವೆನು.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ಯೇಸು ತನ್ನ ತಾಯಿಯನ್ನೂ ಹತ್ತರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತಾಯಿಗೆ - ಅಮ್ಮಾ, ಇಗೋ ನಿನ್ನ ಮಗನು ಎಂದು ಹೇಳಿದನು.


ಪೇತ್ರನು ತಿರುಗಿಕೊಂಡು ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವದನ್ನು ಕಂಡನು. ಆ ಶಿಷ್ಯನು ಊಟದಲ್ಲಿ ಯೇಸುವಿನ ಎದೆಯ ಕಡೆಗೆ ಬಾಗಿ - ಸ್ವಾಮೀ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದವನೇ.


ಯೆಹೂದ್ಯರು ನೋಡಿ - ಆಹಾ, ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದನು ಅಂದುಕೊಂಡರು.


ಮಾರ್ಥಳಲ್ಲಿಯೂ ಆಕೆಯ ತಂಗಿಯಲ್ಲಿಯೂ ಲಾಜರನಲ್ಲಿಯೂ ಯೇಸುವಿಗೆ ಪ್ರೀತಿ ಇತ್ತು.


ಹೀಗಿರಲಾಗಿ ಅವನ ಅಕ್ಕಂದಿರು - ಸ್ವಾಮೀ, ನಿನ್ನ ಪ್ರಿಯ ವಿುತ್ರನು ಅಸ್ವಸ್ಥನಾಗಿದ್ದಾನೆ ಎಂಬದಾಗಿ ಯೇಸುವಿನ ಬಳಿಗೆ ಹೇಳಿಕಳುಹಿಸಿದರು.


ಎಚ್ಚರವಾಗಿರಿ, ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ.


ಯೆಹೋವನು ಇಂತೆನ್ನುತ್ತಾನೆ - ಜೆರುಬ್ಬಾಬೆಲನೇ, ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ; ಇದು ಯೆಹೋವನ ನುಡಿ; ನಾನು ನಿಮ್ಮೊಂದಿಗೆ ಇದ್ದೇನೆಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!


ಮನುಷ್ಯಸದೃಶ್ಯನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು.


ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.


ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿದ ಮೇಲೆ ನಿಮ್ಮ ಹೆಸರು ಹರಕೆಯ ಮಾತಾಗಿ ಸಲ್ಲುವದು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು