Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:15 - ಕನ್ನಡ ಸತ್ಯವೇದವು J.V. (BSI)

15 ಉತ್ತರರಾಜನು ಬಂದು ದಿಬ್ಬಹಾಕಿ ಕೋಟೆಕೊತ್ತಲದ ಪಟ್ಟಣವನ್ನು ಹಿಡಿಯುವನು; ದಕ್ಷಿಣದ ಭುಜಬಲವು ನಿಲ್ಲದು, ಅಲ್ಲಿನ ಮಹಾವೀರರು ತಡೆಯಲಾರರು, ಎದುರಿಸುವ ಯಾವ ಶಕ್ತಿಯೂ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಉತ್ತರ ದಿಕ್ಕಿನ ರಾಜನು ಬಂದು ದಿಬ್ಬ ಹಾಕಿ, ಕೋಟೆ ಕೊತ್ತಲದ ಪಟ್ಟಣವನ್ನು ಹಿಡಿಯುವನು; ದಕ್ಷಿಣದ ಭುಜಬಲವು ನಿಲ್ಲದು, ಅಲ್ಲಿನ ಮಹಾವೀರರು ತಡೆಯಲಾರರು, ಎದುರಿಸುವ ಯಾವ ಶಕ್ತಿಯೂ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಉತ್ತರರಾಜನು ಬಂದು, ಮುತ್ತಿಗೆಹಾಕಿ, ಕೋಟೆಕೊತ್ತಲದ ನಗರವನ್ನು ಹಿಡಿಯುವನು. ದಕ್ಷಿಣದ ಭುಜಬಲವು ಅವನನ್ನು ನಿಲ್ಲಿಸಲಾರದು. ಅಲ್ಲಿನ ಮಹಾವೀರರು ತಡೆಯಲಾರರು. ಎದುರಿಸುವ ಯಾವ ಶಕ್ತಿಯೂ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಮೇಲೆ ಉತ್ತರದ ರಾಜನು ಬಂದು ಗೋಡೆಗಳಿಗೆ ದಿಬ್ಬಹಾಕಿ ಒಂದು ಭದ್ರವಾದ ನಗರವನ್ನು ವಶಪಡಿಸಿಕೊಳ್ಳುವನು. ದಕ್ಷಿಣದವರಲ್ಲಿ ಹೋರಾಡುವ ಶಕ್ತಿ ಇರುವದಿಲ್ಲ. ದಕ್ಷಿಣ ಸೈನ್ಯದ ಉತ್ತಮ ಸೈನಿಕರೂ ಕೂಡ ಉತ್ತರದ ಸೈನ್ಯವನ್ನು ತಡೆದು ನಿಲ್ಲಿಸಲು ಸಮರ್ಥರಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ, ದಿಬ್ಬವನ್ನು ಕೆಡವಿ, ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವನು. ದಕ್ಷಿಣದ ಭುಜಬಲವಾದರೂ ಅವನು ಆಯ್ದುಕೊಂಡ ಜನರಾದರೂ ಎದುರಿಸಿ ನಿಲ್ಲುವುದಕ್ಕೆ ಅಶಕ್ತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:15
11 ತಿಳಿವುಗಳ ಹೋಲಿಕೆ  

ಫರೋಹನೂ ಅವನ ಮಹಾಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹುಜನರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಹಾಕಿ ಬುರುಜುಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗದು.


ಸೇನಾಧೀಶ್ವರನಾದ ಯೆಹೋವನು ಹೀಗೆ ಹೇಳಿದ್ದಾನೆ - ಸುತ್ತಣ ಮರಗಳನ್ನು ಕಡಿದುಬಿಡಿರಿ, ಯೆರೂಸಲೇವಿುನೆದುರಿಗೆ ದಿಬ್ಬ ಹಾಕಿರಿ; ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದೋಚಾಟವೇ ತುಂಬಿದೆ.


ಆ ನಕ್ಷೆಯ ಸುತ್ತುಮುತ್ತಲು ದಿಬ್ಬಹಾಕಿ ಒಡ್ಡುಕಟ್ಟಿ ಪಾಳೆಯಗಳನ್ನು ಮಾಡಿ ಭಿತ್ತಿಭೇದಕಯಂತ್ರಗಳನ್ನು ನಿಲ್ಲಿಸಿ ಅದನ್ನು ಮುತ್ತು.


ಕೆಲವು ವರುಷಗಳ ಮೇಲೆ ಅವರು ಸೇರಿಕೊಳ್ಳುವರು; ದಕ್ಷಿಣರಾಜನ ಕುಮಾರಿಯು ಉತ್ತರದಿಕ್ಕಿನ ರಾಜನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಕ್ಕೆ ಬರುವಳು; ಆದರೂ ತನ್ನ ಭುಜಬಲವನ್ನು ಉಳಿಸಿಕೊಳ್ಳಳು; ಅವನೂ ಅವನ ತೋಳೂ ನಿಲ್ಲವು; ಅವಳೂ ಅವಳನ್ನು ಕರತಂದವರೂ ಪಡೆದವನೂ ತಕ್ಕೊಂಡವನೂ ಆ ಕಾಲದಲ್ಲಿ ನಾಶನಕ್ಕೆ ಈಡಾಗುವರು.


ಅದು ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ ಅದರ ಮೇಲಣ ಕ್ರೋಧದಿಂದುರಿಯುತ್ತಾ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು; ಅದಕ್ಕೆ ಎದುರುಬೀಳಲು ಟಗರಿಗೆ ಏನೂ ಶಕ್ತಿಯಿರಲಿಲ್ಲ; ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದುಹಾಕಿತು; ಟಗರನ್ನು ಅದರ ಕೈಯಿಂದ ಬಿಡಿಸುವ ಪ್ರಾಣಿ ಯಾವದೂ ಇರಲಿಲ್ಲ;


ಅವನು ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ


ದಿಬ್ಬಗಳಿಗೂ ಕತ್ತಿಗಳಿಗೂ [ಅಡ್ಡವಾಗಿ ಗೋಡೆಯನ್ನು ಕಟ್ಟಲು] ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ -


ಚೀಯೋನೆಂಬ ತೋಟದ ಸಾಲುಗಿಡಗಳ ಮೇಲೆ ಬಿದ್ದು ಹಾಳುಮಾಡಿರಿ, ಆದರೆ ನಿರ್ಮೂಲಮಾಡಬೇಡಿರಿ; ಅದರ ರೆಂಬೆಗಳನ್ನು ತೆಗೆದುಹಾಕಿರಿ, ಅವು ಯೆಹೋವನವುಗಳಲ್ಲ.


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನು.


ಆ ಕಾಲದಲ್ಲಿ ಅನೇಕರು ದಕ್ಷಿಣರಾಜನಿಗೆ ಎದುರುನಿಲ್ಲುವರು; ಇದಲ್ಲದೆ ನಿನ್ನ ಜನರಲ್ಲಿ ದುರಾಗ್ರಹಿಗಳು ಕನಸನ್ನು ನಿಜಮಾಡಬೇಕೆಂದು ದಂಗೆ ಏಳುವರು; ಆದರೆ ಬಿದ್ದುಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು