Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:34 - ಕನ್ನಡ ಸತ್ಯವೇದವು J.V. (BSI)

34 ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆಮೇಲೆ ಬಹುಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು. ಆ ಮೇಲೆ ಬಹಳ ಮಂದಿ ನಯವಾದ ನುಡಿಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಹೀಗಾಗುವಾಗ ಅವರಿಗೆ ಅಲ್ಪಸ್ವಲ್ಪ ಸಹಾಯ ದೊರೆಯುವುದು. ಆ ಬಳಿಕ ಬಹುಮಂದಿ ನಯನವಿರಾದ ಮಾತುಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆ ಜ್ಞಾನಿಗಳಾದ ಯೆಹೂದ್ಯರು ಶಿಕ್ಷೆಗೊಳಗಾದಾಗ ಅವರಿಗೆ ಸ್ವಲ್ಪ ಸಹಾಯ ಸಿಕ್ಕುವದು. ಆದರೆ ಜ್ಞಾನಿಗಳಾದ ಆ ಯೆಹೂದ್ಯರನ್ನು ಸೇರಿಕೊಳ್ಳುವ ಅನೇಕ ಯೆಹೂದ್ಯರು ಕಪಟಿಗಳಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು, ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:34
22 ತಿಳಿವುಗಳ ಹೋಲಿಕೆ  

ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರ್ರಿ. ಅವರು ಕುರೀವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುತ್ತಾರೆ; ಆದರೆ ಒಳಗೆ ನೋಡಿದರೆ ಅವರು ಹಿಡುಕೊಂಡು ಹೋಗುವ ತೋಳಗಳೇ.


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂವಿುಗೆ ಬಿದ್ದಿರುವದನ್ನು ಕಂಡು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವದಕ್ಕೆ ಅಟ್ಟಿಸಿಕೊಂಡು ಹೋದನು.


ಆದರೆ ನಿನ್ನ ಮೇಲೆ ಒಂದು ತಪ್ಪುಹೊರಿಸಬೇಕಾಗುತ್ತದೆ; ಅದೇನಂದರೆ ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ಸೇರಿಸುತ್ತಿರುವಲ್ಲಿ ನೀನು ಅವಳನ್ನು ತಡೆಯದೆ ಬಿಟ್ಟಿರುವದೇ.


ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.


ಮನುಷ್ಯನಾಗಿ ಬಂದಿರುವ ಯೇಸು ಕ್ರಿಸ್ತನನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಯೇಸುವನ್ನು ಒಪ್ಪದವನು ಮೋಸಗಾರನೂ ಕ್ರಿಸ್ತವಿರೋಧಿಯೂ ಆಗಿದ್ದಾನೆ.


ಅವರು ಲೋಕದಿಂದ ಹುಟ್ಟಿದವರಾಗಿದ್ದಾರೆ; ಈ ಕಾರಣದಿಂದ ಅವರು ಲೋಕಪ್ರೇರಿತರಾಗಿ ಮಾತಾಡುತ್ತಾರೆ. ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.


ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಗಳುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲರಾದ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.


ಸಭೆಗೆ ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋದರರು ಅಲ್ಲಿ ಇದ್ದದರಿಂದ ಬಲಾತ್ಕಾರ ನಡೆದೀತೆಂಬ ಭಯವಿತ್ತು. ಅವರು ನಮ್ಮನ್ನೂ ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.


ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು ನೆಮ್ಮದಿಯ ಕಾಲದಲ್ಲಿ ಬಂದು ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ನಿಬಂಧನದ್ರೋಹಿಗಳು ಅವನ ನಯನುಡಿಗಳಿಂದ ಕೆಟ್ಟುಹೋಗುವರು; ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು