Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:35 - ಕನ್ನಡ ಸತ್ಯವೇದವು J.V. (BSI)

35 ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು; ಅದರಿಂದ ಜನರು ಶೋಧಿಸಲ್ಪಟ್ಟು ಶುದ್ಧಹೊಂದಿ ಶುಭ್ರರಾಗುವರು; ಅಂತ್ಯವು ಕ್ಲುಪ್ತಕಾಲದಲ್ಲೇ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅಂತ್ಯಕಾಲದವರೆಗೆ ಬುದ್ಧಿವಂತ ನಾಯಕರಲ್ಲಿ ಕೆಲವರು ಸಾವಿಗೆ ತುತ್ತಾಗುವರು. ಇದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ಕ್ಲುಪ್ತಕಾಲದಲ್ಲೇ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಜ್ಞಾನಿಗಳಾದ ಕೆಲವು ಯೆಹೂದ್ಯರು ತಪ್ಪುಗಳನ್ನು ಮಾಡಿ ಬಿದ್ದುಹೋಗುವರು. ಆದರೆ ಹಿಂಸೆ ನಡೆಯಬೇಕು. ಏಕೆಂದರೆ ಅಂತ್ಯಕಾಲ ಬರುವವರೆಗೆ ಅವರು ದೃಢಚಿತ್ತರೂ ಶುದ್ಧರೂ ನಿಷ್ಕಳಂಕರೂ ಆಗಬೇಕು. ಸರಿಯಾದ ಸಮಯಕ್ಕೆ ಅಂತ್ಯಕಾಲ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇದಲ್ಲದೆ ಅಂತ್ಯಕಾಲದವರೆಗೆ ಜ್ಞಾನಿಗಳನ್ನು ಶೋಧಿಸುವುದಕ್ಕೂ ಅದರಲ್ಲಿ ಅನೇಕರು ಬೀಳುವರು; ಏಕೆಂದರೆ ಇದು ನೇಮಕವಾದ ಸಮಯದಲ್ಲಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:35
34 ತಿಳಿವುಗಳ ಹೋಲಿಕೆ  

ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು; ಹೃದಯಗಳನ್ನು ಶೋಧಿಸುವವನು ಯೆಹೋವನೇ.


ನನ್ನ ಸಹೋದರರೇ, ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟುಮಾಡುತ್ತದೆಂದು ತಿಳಿದು ನೀವು ನಾನಾವಿಧವಾದ ಕಷ್ಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ಎಣಿಸಿರಿ.


ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳಲು ಅವನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿ ದಕ್ಷಿಣರಾಜನ ಮೇಲೆ ರಭಸವಾಗಿ ಬಿದ್ದು ನಾಡುನಾಡುಗಳಲ್ಲಿ ನುಗ್ಗಿ ತುಂಬಿತುಳುಕಿ ಹರಡಿಕೊಳ್ಳುವನು.


ಅದು ನಕ್ಷತ್ರಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ ಆ ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.


ಯಾಕಂದರೆ ಅವರು ದೇವರ ಅಭಿಪ್ರಾಯವನ್ನು ನೆರವೇರಿಸುವದಕ್ಕೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವದಕ್ಕೂ ದೇವರು ತನ್ನ ವಚನವು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರಿಸಿದನು.


ಆಗ ದೂತನಾದ ಮತ್ತೊಬ್ಬನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ - ಭೂವಿುಯ ಪೈರು ಮಾಗಿ ಒಣಗಿದೆ; ಕೊಯ್ಯುವ ಕಾಲ ಬಂತು; ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ ಎಂದು ಮಹಾ ಶಬ್ದದಿಂದ ಕೂಗಿದನು.


ಆದದರಿಂದ ಉಳಿದ ಶಿಷ್ಯರು - ನಾವು ಸ್ವಾವಿುಯನ್ನು ನೋಡಿದ್ದೇವೆ ಎಂದು ಅವನಿಗೆ ಹೇಳಿದರು. ಅದಕ್ಕೆ ಅವನು - ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಿಮ್ಮ ಮಾತನ್ನು ನಂಬುವದೇ ಇಲ್ಲ ಅಂದನು.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲಕೊಡುವ ಹಾಗೆ ಅದನ್ನು ಶುದ್ಧಿಮಾಡುತ್ತಾನೆ.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.


ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು, ಅಂತ್ಯಕಾಲದವರೆಗೆ ಮರೆಯಾಗಿರಲಿ; ಬಹು ಜನರು ಅತ್ತಿತ್ತ ತಿರುಗುವರು, ತಿಳುವಳಿಕೆಯು ಹೆಚ್ಚುವದು.


ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ ಅವರು ಬಹು ದಿವಸ ಕತ್ತಿ ಬೆಂಕಿ ಸೆರೆಸೂರೆಗಳಿಗೆ ಸಿಕ್ಕಿಬೀಳುತ್ತಿರುವರು.


ಕ್ಲುಪ್ತಕಾಲದಲ್ಲಿ ಪುನಃ ದಕ್ಷಿಣದೇಶದ ಮೇಲೆ ನುಗ್ಗುವನು; ಆದರೆ ಮೊದಲು ಆದಂತೆ ಎರಡನೆಯ ಸಲ ಆಗದು.


ಆ ಇಬ್ಬರು ರಾಜರು [ಒಬ್ಬರಿಗೊಬ್ಬರು] ಕೇಡಿನ ಮನಸ್ಸುಳ್ಳವರಾಗಿ ಸಹಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತಾಡಿಕೊಳ್ಳುವರು; ಆದರೆ ಏನೂ ಸಾಗದು; ಪರಿಣಾಮವು ಕ್ಲುಪ್ತಕಾಲದಲ್ಲೇ ತಲೆದೋರುವದು.


ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧವಾರ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತಪ್ರಲಯವು ಅವನನ್ನು ಮುಣುಗಿಸುವ ತನಕ ಹಾಳುಮಾಡುವನು.


ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲದ್ದೇ.


ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬರಲು ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು; ನನಗೆ ಅವನು - ನರಪುತ್ರನೇ, ಇದು ಮಂದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂದು ಹೇಳಿದನು.


ಆದದರಿಂದ ಅವನ ದೇಶದಲ್ಲುಂಟಾದ ಅದ್ಭುತದ ವಿಷಯವನ್ನು ವಿಚಾರಿಸುವದಕ್ಕಾಗಿ ಬಾಬೆಲಿನ ಪ್ರಭುಗಳ ರಾಯಭಾರಿಗಳು ಅವನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವದಕ್ಕೂ ಅವನ ಸರ್ವಾಂತರ್ಯವನ್ನು ತಿಳುಕೊಳ್ಳುವದಕ್ಕೂ ಅವನನ್ನು ಕೈಬಿಟ್ಟನು.


ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣ ಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇವಿುಗೆ ಹೋದನು.


ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿಮಾಡಿ ಅಶೇರವೆಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಇನ್ನು ಪ್ರತಿಷ್ಠಿಸದೆ ಹೋದರೆ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವದು, ಮತ್ತು ಅವರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದೇ.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು; ಬಹು ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು