Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 11:37 - ಕನ್ನಡ ಸತ್ಯವೇದವು J.V. (BSI)

37 ಅವನು ತನ್ನ ಪಿತೃಗಳ ದೇವರುಗಳನ್ನಾಗಲಿ ಸ್ತ್ರೀಯರು ಮೋಹಿಸುವ ದೇವರನ್ನಾಗಲಿ ಯಾವ ದೇವರನ್ನಾಗಲಿ ಲಕ್ಷಿಸನು. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅವನು ತನ್ನ ಪೂರ್ವಿಕರ ದೇವರುಗಳನ್ನಾಗಲಿ, ಸ್ತ್ರೀಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನಾಗಲಿ ಲಕ್ಷಿಸುವುದಿಲ್ಲ. ಎಲ್ಲಾ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅವನು ತನ್ನ ಪೂರ್ವಜರ ದೇವರನ್ನಾಗಲಿ, ಮಹಿಳೆಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನೇ ಆಗಲಿ, ಲಕ್ಷಿಸನು. ಎಲ್ಲ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ಆ ಉತ್ತರದ ರಾಜನು ಅವನ ಪೂರ್ವಿಕರು ಪೂಜಿಸಿದ ದೇವರುಗಳನ್ನೂ ಸ್ತ್ರೀಯರು ಪೂಜಿಸುವ ವಿಗ್ರಹಗಳನ್ನೂ ಲಕ್ಷಿಸನು. ಅವನು ಯಾವ ದೇವರನ್ನೂ ಲಕ್ಷಿಸನು. ಅದಕ್ಕೆ ಬದಲಾಗಿ ಅವನು ತನ್ನನ್ನು ತಾನು ಹೊಗಳಿಕೊಳ್ಳುವನು; ತನ್ನನ್ನು ಎಲ್ಲ ದೇವರುಗಳಿಗಿಂತಲೂ ಶ್ರೇಷ್ಠನೆಂದು ತೋರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅವನು ತನ್ನ ಪಿತೃಗಳ ದೇವರನ್ನಾಗಲೀ, ಸ್ತ್ರೀಯರಿಂದ ಅಪೇಕ್ಷಿಸಿದವರನ್ನಾಗಲೀ ಅವನು ಲಕ್ಷಿಸುವುದಿಲ್ಲ, ಯಾವ ದೇವರನ್ನೂ ಲಕ್ಷಿಸುವುದಿಲ್ಲ; ಆದರೆ ಅವನು ಎಲ್ಲವುಗಳಿಗಿಂತ ಹೆಚ್ಚಿ, ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 11:37
14 ತಿಳಿವುಗಳ ಹೋಲಿಕೆ  

ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ನೀನು ನಿನ್ನ ಮನಸ್ಸಿನಲ್ಲಿ - ನಾನು ಆಕಾಶಕ್ಕೆ ಹತ್ತಿ ಉತ್ತರದಿಕ್ಕಿನ ಕಟ್ಟಕಡೆಯಿರುವ ಸುರಗಣ ಪರ್ವತದಲ್ಲಿ ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಮೇಲೆ ಏರಿಸಿ ಆಸೀನನಾಗುವೆನು;


ಅವರನ್ನು ಮರುಳುಗೊಳಿಸಿ ಮದುವೆಯಾಗಬಾರದೆಂತಲೂ ಇಂಥಿಂಥ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು. ಆದರೆ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಸಕಲ ವಿಧವಾದ ಆಹಾರವನ್ನೂ ಉಂಟುಮಾಡಿದನು.


ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ, ಸದ್ದಿಲ್ಲದೆ ಮೊರೆಯಿಡು,


ನಾನು ನನ್ನ ನಲ್ಲನವಳೇ, ಅವನ ಆಶೆಯು ನನ್ನ ಮೇಲೇ ಇದೆ.


ನಿಮ್ಮಲ್ಲಿ ಯಾವನಾದರೂ ಸೆರೆಯವರಲ್ಲಿ ಸುಂದರಸ್ತ್ರೀಯನ್ನು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ


ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ ಮನೆ ಗಂಡಾಳು ಹೆಣ್ಣಾಳು ಎತ್ತು ಕತ್ತೆ ಮುಂತಾದ ಯಾವದನ್ನೂ ಆಶಿಸಬಾರದು.


ಆಮೇಲೆ ಸ್ತ್ರೀಗೆ - ನೀನು ಗರ್ಭಿಣಿಯಾಗಿರುವ ಕಾಲದಲ್ಲಿ ಬಹು ಸಂಕಟಪಡಬೇಕೆಂದು ನಾನು ನೇವಿುಸಿದ್ದೇನೆ; ಕಷ್ಟದಿಂದಲೇ ಮಕ್ಕಳನ್ನು ಹೆರುವಿ; ಗಂಡನ ಮೇಲೆ ನಿನಗೆ ಆಶೆಯಿರುವದು; ಅವನು ನಿನಗೆ ಒಡೆಯನಾಗುವನು. ಎಂದು ಹೇಳಿದನು.


ನೀವು ಇದರ ಹಣ್ಣನ್ನು ತಿಂದಾಗಲೇ ನಿಮ್ಮ ಕಣ್ಣುಗಳು ತೆರೆಯುವವು; ನೀವು ದೇವರಂತೆ ಆಗಿ ಒಳ್ಳೇದರ ಕೆಟ್ಟದ್ದರ ಭೇದವನ್ನು ಅರಿತವರಾಗುವಿರಿ; ಇದು ದೇವರಿಗೆ ಚೆನ್ನಾಗಿ ಗೊತ್ತುಂಟು ಅಂದಿತು.


ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿ


ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.


ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪಿತೃಗಳಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ ರತ್ನಗಳಿಂದಲೂ ಅಮೂಲ್ಯವಸ್ತುಗಳಿಂದಲೂ ಸೇವಿಸುವನು.


ಉನ್ನತ ಮೇಘಮಂಡಲದ ಮೇಲೆ ಏರಿ ಉನ್ನತೋನ್ನತನಿಗೆ ಸರಿಸಮಾನನಾಗುವೆನು ಅಂದುಕೊಂಡಿದ್ದೆಯಲ್ಲಾ!


ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು