Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:1 - ಕನ್ನಡ ಸತ್ಯವೇದವು J.V. (BSI)

1 ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ಮೀಕಾಯೇಲನು ಆ ಕಾಲದಲ್ಲಿ ಏಳುವನು; ಮೊಟ್ಟ ಮೊದಲು ಜನಾಂಗವು ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದಂಥ ಸಂಕಟವು ಸಂಭವಿಸುವದು; ಆಗ ನಿನ್ನ ಜನರೊಳಗೆ ಯಾರ ಹೆಸರುಗಳು [ಜೀವಬಾಧ್ಯರ] ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:1
48 ತಿಳಿವುಗಳ ಹೋಲಿಕೆ  

ಅಯ್ಯೋ, ಆ ದಿನವು ಘೋರವಾದದ್ದು, ಅದಕ್ಕೆ ಎಣೆಯಿಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅದರಿಂದ ಪಾರಾಗುವರು.


ಅಂಥ ಸಂಕಟವು ಲೋಕ ಹುಟ್ಟಿದ್ದು ಮೊದಲುಗೊಂಡು ಇಂದಿನವರೆಗೂ ಆಗಲಿಲ್ಲ. ಇನ್ನು ಮೇಲೆಯೂ ಆಗುವದಿಲ್ಲ.


ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿವಸ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜನ ಸಂಗಡ [ಹೋರಾಡಿ]


(ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು.) ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನು ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ.


ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡುವದಕ್ಕೆ ಹೊರಟರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು,


ಯಾವನ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


ಇದಲ್ಲದೆ ಸತ್ತವರಾದ ದೊಡ್ಡವರೂ ಚಿಕ್ಕವರೂ ಸಿಂಹಾಸನದ ಮುಂದೆ ನಿಂತಿರುವದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಮತ್ತು ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ ಸತ್ತವರಿಗೆ ನ್ಯಾಯತೀರ್ಪಾಯಿತು.


ಜಯಶಾಲಿಗೆ ಹೀಗೆ ಶುಭ್ರವಸ್ತ್ರಗಳನ್ನು ಹೊದಿಸುವರು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಬಿಡದೆ ಅವನು ನನ್ನವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಒಪ್ಪುವೆನು.


ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಮ್ಮ ಹೆಸರುಗಳು ಪರಲೋಕದಲ್ಲಿ ಬರೆದಿರುತ್ತವೆ ಎಂದು ಸಂತೋಷಪಡಿರಿ ಎಂಬದಾಗಿ ಹೇಳಿದನು.


[ಆಹಾ, ನಮ್ಮ ದೇವರು] ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇವಿುಗೆ ಆದಂಥ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಆದರೆ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದಮಾಡಿದಾಗ ಅವನು ಸೈತಾನನ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಕ್ಕೆ ಧೈರ್ಯಗೊಳ್ಳದೆ - ಕರ್ತನು ನಿನ್ನನ್ನು ಖಂಡಿಸಲಿ ಅಂದನು.


ಸತ್ಯ ಸಯುಜನೇ, ಅವರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದವೆ.


ಪರಲೋಕದೊಳಗೆ ಸಕಲ ರಾಜ್ಯತ್ವ ಅಧಿಕಾರ ಮಹತ್ವ ಪ್ರಭುತ್ವಾದಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ತನ್ನ ಬಲಗಡೆಯಲ್ಲಿ ಕೂಡ್ರಿಸಿಕೊಂಡನು.


ಆಮೇಲೆ ಇಸ್ರಾಯೇಲ್ ಜನವೆಲ್ಲಾ ರಕ್ಷಣೆಹೊಂದುವದು. ಇದಕ್ಕೆ ಆಧಾರವಾಗಿ ಶಾಸ್ತ್ರದಲ್ಲಿ - ಬಿಡಿಸುವವನು ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.


ವಿುಥ್ಯಾದರ್ಶನ ಹೊಂದಿ ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈ ಮಾಡುವೆನು; ಅವರು ನನ್ನ ಜನರ ಹಿರೀ ಸಭೆಯಲ್ಲಿ ಸೇರಕೂಡದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗವು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಮತ್ತು ಚೀಯೋನಿನಲ್ಲಿ ಉಳಿದವರು, ಯೆರೂಸಲೇವಿುನಲ್ಲಿ ನಿಂತವರು, ಅಂತು ಜೀವಬಾಧ್ಯರ ಪಟ್ಟಿಯಲ್ಲಿ ಹೆಸರುಬಿದ್ದ ಯೆರೂಸಲೇವಿುನವರೆಲ್ಲರೂ ದೇವರ ಜನರೆನಿಸಿಕೊಳ್ಳುವರು.


ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆಯಲ್ಪಡಲಿ; ಸದ್ಭಕ್ತರ ಹೆಸರಿನ ಸಂಗಡ ಅವರದು ಬರೆಯಲ್ಪಡದಿರಲಿ.


ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆ; ಅದರ ವಿಷಯ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಯಾಕಂದರೆ ಇಸ್ರಾಯೇಲ್ಯರನ್ನು ತಳ್ಳುವದರಿಂದ ಲೋಕವು ದೇವರ ಸಂಗಡ ಸಮಾಧಾನವಾಗುವದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದುಬಂದಂತಾಗುವದಲ್ಲವೇ.


ಸಮುದ್ರಕ್ಕೂ ಅಂದಚಂದದ ಪರಿಶುದ್ಧಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು; ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯಮಾಡರು.


ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ನೀನು ಬಹಳ ಅಸಹ್ಯಕಾರ್ಯಗಳನ್ನು ನಡಿಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ಅದು ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ ಇಗೋ, ಪ್ರಬಲವಾದ ದೊಡ್ಡ ದಂಡು! ಇಂಥದು ಹಿಂದೆಂದೂ ಬಂದಿಲ್ಲ, ಇನ್ನು ಮುಂದೆ ತಲತಲಾಂತರಗಳ ಬಹು ವರುಷಗಳಲ್ಲಿಯೂ ಬರುವದಿಲ್ಲ.


ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು