Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:10 - ಕನ್ನಡ ಸತ್ಯವೇದವು J.V. (BSI)

10 ಅನೇಕರು ತಮ್ಮನ್ನು ಶುದ್ಧೀಕರಿಸಿ ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅನೇಕ ಜನರು ಶುದ್ಧೀಕರಿಸಲ್ಪಡುವರು; ಅವರು ತಮ್ಮನ್ನು ತಾವು ಶುಭ್ರಗೊಳಿಸಿಕೊಳ್ಳುವರು. ಆದರೆ ದುಷ್ಟರು ದುಷ್ಟರಾಗಿಯೇ ಉಳಿಯುವರು. ಆ ದುಷ್ಟರು ಈ ಸಂಗತಿಗಳನ್ನು ಅರಿತುಕೊಳ್ಳುವದಿಲ್ಲ. ಜ್ಞಾನಿಗಳು ಇವೆಲ್ಲವನ್ನು ಅರಿತುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:10
37 ತಿಳಿವುಗಳ ಹೋಲಿಕೆ  

ಅನ್ಯಾಯ ಮಾಡುವವನು ಇನ್ನೂ ಅನ್ಯಾಯಮಾಡಲಿ; ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿಯನ್ನು ಅನುಸರಿಸಲಿ; ಪವಿತ್ರನು ತನ್ನನ್ನು ಇನ್ನೂ ಪವಿತ್ರಮಾಡಿಕೊಳ್ಳಲಿ.


ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು; ಅದರಿಂದ ಜನರು ಶೋಧಿಸಲ್ಪಟ್ಟು ಶುದ್ಧಹೊಂದಿ ಶುಭ್ರರಾಗುವರು; ಅಂತ್ಯವು ಕ್ಲುಪ್ತಕಾಲದಲ್ಲೇ ಆಗುವದು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.


ದೇವರಿಂದ ಹುಟ್ಟಿದವನು ದೇವರ ಮಾತುಗಳನ್ನು ಕೇಳುತ್ತಾನೆ. ನೀವು ದೇವರಿಂದ ಹುಟ್ಟದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ಆತನು ಅವರಿಗೆ - ಎಲಾ, ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯರೇ,


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.


ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಂಡಿತ್ಯವನ್ನು ಹೊಂದುವನು, ವಿವೇಕಿಯು [ಮತ್ತಷ್ಟು] ಉಚಿತಾಲೋಚನೆಯುಳ್ಳವನಾಗುವನು.


ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.


ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ ಅವರು ಬಹು ದಿವಸ ಕತ್ತಿ ಬೆಂಕಿ ಸೆರೆಸೂರೆಗಳಿಗೆ ಸಿಕ್ಕಿಬೀಳುತ್ತಿರುವರು.


ಆದರೆ ಅದರ ಸುತ್ತಣ ಜವುಗು ನೆಲವೂ ಸವುಳುಹೊಂಡಗಳೂ ಸಿಹಿಯಾಗುವದಿಲ್ಲ, ಅವು ಉಪ್ಪಿನ ಗಣಿಯಾಗುವವು.


ಪರಲೋಕದಲ್ಲಿರುವ ಸೈನ್ಯದವರು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನ ಹಿಂದೆ ಬರುತ್ತಿದ್ದರು.


ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿಸೋಣವಾಗಿತ್ತು. ಆ ನಾರುಮಡಿ ಅಂದರೆ ದೇವಜನರ ಸತ್ಕಾರ್ಯಗಳೇ.


ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರಮಾಡಿಕೊಳ್ಳದೆ ತಮ್ಮ ಕಷ್ಟಗಳ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕ ದೇವರನ್ನು ದೂಷಿಸಿದರು.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಆ ತಂದೆಗಳು ಕೆಲವು ದಿವಸಗಳ ಪ್ರಯೋಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ಅದಕ್ಕೆ ಪಿಲಾತನು - ಹಾಗಾದರೆ ನೀನು ಅರಸನು ಹೌದಲ್ಲವೇ ಅಂದನು. ಯೇಸು ಅವನಿಗೆ - ನನ್ನನ್ನು ಅರಸನೆಂದು ನೀನೇ ಹೇಳಿದ್ದೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಹೇಳುವದಕ್ಕೋಸ್ಕರ ಹುಟ್ಟಿದವನು, ಅದಕ್ಕೋಸ್ಕರವೇ ಈ ಲೋಕಕ್ಕೆ ಬಂದಿದ್ದೇನೆ. ಸತ್ಯಪರರೆಲ್ಲರು ನನ್ನ ಮಾತಿಗೆ ಕಿವಿಕೊಡುತ್ತಾರೆ ಎಂದು ಉತ್ತರಕೊಟ್ಟನು.


ಆತನು ಅವರಿಗೆ - ದೇವರ ರಾಜ್ಯದ ಗುಟ್ಟು ನಿಮಗೇ ಕೊಟ್ಟಿದೆ; ಹೊರಗಿನವರಿಗೆ ಎಲ್ಲವೂ ಸಾಮ್ಯದ ಮರೆಯಲ್ಲಿವೆ.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು; ಬಹು ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮುಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗಿರುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ಕೆಟ್ಟವರಿಂದಲೇ ಕೇಡು ಎಂಬದಾಗಿ ಹಿರಿಯರ ಗಾದೆಯುಂಟಷ್ಟೆ; ನಾನು ನಿನಗೆ ವಿರೋಧವಾಗಿ ಕೈಯೆತ್ತುವದಿಲ್ಲ.


ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು