Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:13 - ಕನ್ನಡ ಸತ್ಯವೇದವು J.V. (BSI)

13 ನೀನು ಹೋಗಿ ಅಂತ್ಯದವರೆಗೆ ಇರು; ನೀನು ದೀರ್ಘ ನಿದ್ರೆಯನ್ನು ಹೊಂದಿ ಯುಗಸಮಾಪ್ತಿಯಲ್ಲಿ ಎದ್ದು ನಿನಗಾಗುವ ಸ್ವಾಸ್ತ್ಯದೊಳಗೆ ನಿಲ್ಲುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ಹೋಗಿ ಅಂತ್ಯದ ವರೆಗೆ ವಿಶ್ವಾಸದಿಂದ ಇರು. ನೀನು ದೀರ್ಘನಿದ್ರೆಯನ್ನು ಹೊಂದಿ, ಯುಗದ ಸಮಾಪ್ತಿಯಲ್ಲಿ ಎದ್ದು, ನಿನಗಾಗುವ ಸ್ವತ್ತಿನೊಳಗೆ ನಿಲ್ಲುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀನು ಹೋಗಿ ಅಂತ್ಯದವರೆಗೆ ವಿಶ್ವಾಸದಿಂದಿರು. ನೀನು ‘ದೀರ್ಘನಿದ್ರೆ’ಯನ್ನು ಹೊಂದಿ, ನಿನಗೆ ನಿರ್ಧರಿಸಲಾದ ಸ್ಥಾನವನ್ನು ಪಡೆಯಲು ಯುಗಸಮಾಪ್ತಿಯಲ್ಲಿ ಎದ್ದುಬರುವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ದಾನಿಯೇಲನೇ, ನೀನು ಹೋಗಿ ಕೊನೆಯವರೆಗೆ ನಿನ್ನ ಜೀವನವನ್ನು ಸಾಗಿಸು. ನೀನು ದೀರ್ಘನಿದ್ರೆಯನ್ನು ಪಡೆಯುವೆ. ಅಂತ್ಯಕಾಲದಲ್ಲಿ, ನೀನು ದೀರ್ಘನಿದ್ರೆಯಿಂದ ಎಚ್ಚೆತ್ತು ನಿನ್ನ ಸ್ವಾಸ್ತ್ಯವನ್ನು ಪಡೆಯುವೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನೀನು ಅಂತ್ಯದವರೆಗೂ ನಿನ್ನ ಮಾರ್ಗದಲ್ಲಿ ಹೋಗು. ನೀನು ವಿಶ್ರಮಿಸಿಕೊಳ್ಳುವೆ ಮತ್ತು ದಿನಗಳ ಅಂತ್ಯದಲ್ಲಿ ನಿನಗೆ ಪಾಲಾಗಿ ಇಟ್ಟಿರುವ ಬಾಧ್ಯತೆಯನ್ನು ಸ್ವೀಕರಿಸಲು ಎದ್ದು ಬರುವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:13
16 ತಿಳಿವುಗಳ ಹೋಲಿಕೆ  

ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನ ಮಾರ್ಗಗಳಲ್ಲಿ ನಡೆದು ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವಿ; ಈ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು; ಬಹು ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ಯೇಸು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವಾಗ ನನ್ನನ್ನು ಹಿಂಬಾಲಿಸಿರುವ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.


ನನ್ನ ಪಾಲೂ ಪಾನವೂ ಯೆಹೋವನೇ; ನೀನೇ ನನ್ನ ಸ್ವಾಸ್ತ್ಯವನ್ನು ಭದ್ರಗೊಳಿಸುತ್ತೀ.


ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಆದದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲೂ ಪಾಪಾತ್ಮರು ನೀತಿವಂತರ ಸಭೆಯಲ್ಲೂ ನಿಲ್ಲುವದಿಲ್ಲ.


ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು, ಅಂತ್ಯಕಾಲದವರೆಗೆ ಮರೆಯಾಗಿರಲಿ; ಬಹು ಜನರು ಅತ್ತಿತ್ತ ತಿರುಗುವರು, ತಿಳುವಳಿಕೆಯು ಹೆಚ್ಚುವದು.


ಅದಕ್ಕೆ ಯೆಹೋವನು - ನಾನೇ ನಿಮ್ಮ ಜೊತೆಯಲ್ಲಿ ಬಂದು ನಿಮಗೆ ವಿಶ್ರಾಂತಿಯನ್ನು ಉಂಟುಮಾಡುವೆನು ಅಂದನು.


ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು