Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 12:6 - ಕನ್ನಡ ಸತ್ಯವೇದವು J.V. (BSI)

6 ಇವರಲ್ಲಿ ಒಬ್ಬನು - ಈ ಅಪೂರ್ವಕಾರ್ಯಗಳು ಕೊನೆಗಾಣುವದಕ್ಕೆ ಎಷ್ಟು ಕಾಲ ಹಿಡಿಯುವದು ಎಂದು ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದು ನಿಂತಿದ್ದ ಪುರುಷನನ್ನು ಕೇಳಲು ಆ ಪುರುಷನು ಎಡಬಲಕೈಗಳನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇವರಲ್ಲಿ ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡಿದ್ದ ಒಬ್ಬನು, “ಈ ಅಪೂರ್ವ ಕಾರ್ಯಗಳು ಕೊನೆಗಾಣುವುದಕ್ಕೆ ಎಷ್ಟು ಕಾಲ ಹಿಡಿಯುವುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇವರಲ್ಲಿ ಒಬ್ಬನು, ನದಿಯ ನೀರಿನ ಮೇಲ್ಗಡೆ ನಾರಿನ ಹೊದಿಕೆಯನ್ನು ಹೊದ್ದು ನಿಂತಿದ್ದ ದೂತನನ್ನು ನೋಡಿ, “ಈ ಆಶ್ಚರ್ಯಕಾರ್ಯಗಳು ನೆರವೇರಲು ಎಷ್ಟುಕಾಲ ಹಿಡಿಯುವುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾರುಮಡಿಯನ್ನು ಧರಿಸಿದ್ದವನೊಬ್ಬನು ನದಿಯಲ್ಲಿ ನೀರಿನ ಮೇಲೆ ನಿಂತಿದ್ದನು. ಅವರಿಬ್ಬರಲ್ಲಿ ಒಬ್ಬನು, “ಆ ಅದ್ಭುತ ಘಟನೆಗಳು ಸಂಭವಿಸುವದಕ್ಕೆ ಇನ್ನು ಎಷ್ಟು ಕಾಲ ಬೇಕು?” ಎಂದು ಅವನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ನದಿಯ ನೀರಿನ ಮೇಲೆ ನಿಂತು, ನಾರುಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು, “ಈ ಆಶ್ಚರ್ಯದ ಅಂತ್ಯವು ಎಷ್ಟರವರೆಗೆ ಇರುವುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 12:6
16 ತಿಳಿವುಗಳ ಹೋಲಿಕೆ  

ಆಗ ಒಬ್ಬ ದೇವದೂತನು ಮಾತಾಡುವದನ್ನು ಕೇಳಿದೆನು; ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ - ನಿತ್ಯಹೋಮವನ್ನು ನಿಲ್ಲಿಸುವದು, ಭಯಂಕರವಾದ ದೇವದ್ರೋಹಮಾಡುವದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವವು ಎಂದು ಪ್ರಶ್ನೆ ಮಾಡಲು


ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.


ಆಗ - ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು ಎಂದು ಮನುಷ್ಯಧ್ವನಿಯಂಥ ಒಂದು ವಾಣಿಯು ಊಲಾಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು.


ಪರಲೋಕದಲ್ಲಿರುವ ಸೈನ್ಯದವರು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನ ಹಿಂದೆ ಬರುತ್ತಿದ್ದರು.


ಅದರೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು; ಅವರು ಪ್ರಕಾಶವೂ ನಿರ್ಮಲವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು; ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.


ನಮ್ಮ ಆರಾಧನಾಚಿಹ್ನೆಗಳು ಈಗ ಕಾಣುವದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.


ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕೂತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು - ಅದು ಯಾವಾಗ ಆಗುವದು? ನೀನು ಪ್ರತ್ಯಕ್ಷನಾಗುವದಕ್ಕೂ ಯುಗದ ಸಮಾಪ್ತಿಗೂ ಸೂಚನೆಯೇನು? ನಮಗೆ ಹೇಳು ಅನ್ನಲು


ಅದು ಯಾವಾಗ ಆಗುವದು? ಅದೆಲ್ಲಾ ನೆರವೇರುವದಕ್ಕಿರುವಾಗ ಯಾವ ಸೂಚನೆ ತೋರುವದು? ನಮಗೆ ಹೇಳು ಎಂದು ಆತನನ್ನು ಪ್ರತ್ಯೇಕವಾಗಿ ಕೇಳಲು


ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು; ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.


ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ; ಆಗ ನಾನು - ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು ಎಂದು ಪ್ರಶ್ನೆಮಾಡಲು ಅವನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು