Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:22 - ಕನ್ನಡ ಸತ್ಯವೇದವು J.V. (BSI)

22 ಆತನು ಅಗಾಧವಿಷಯಗಳನ್ನೂ ಗೂಡಾರ್ಥಗಳನ್ನೂ ಬೈಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವದೂ ಆತನಿಗೆ ಗೋಚರ; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಳದಲ್ಲಿ ಅಡಗಿರುವ ರಹಸ್ಯಗಳನ್ನು ಬಲ್ಲವನು ಆತನೇ. ಬೆಳಕು ಆತನಲ್ಲಿಯೇ ಇದೆ. ಆದ್ದರಿಂದ ಕಗ್ಗತ್ತಲೆಯಲ್ಲಿ ಅಡಗಿರುವುದು ಆತನಿಗೆ ಗೋಚರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:22
37 ತಿಳಿವುಗಳ ಹೋಲಿಕೆ  

ಅಗಾಧವಿಷಯಗಳನ್ನು ಕತ್ತಲೊಳಗಿಂದ ಬೈಲಿಗೆ ತಂದು ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು.


ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.


ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ; ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು; ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಇರಲಿ. ಆಮೆನ್.


ಪರಿಶುದ್ಧದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು; ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು ಮಂತ್ರವಾದಿಗಳು ಪಂಡಿತರು ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇವಿುಸಿದನು;


ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.


ರಾಜನು ಕೇಳುವ ಸಂಗತಿಯು ಅತಿಕಷ್ಟವಾದದು; ನರಜನ್ಮದವರ ಮಧ್ಯೆ ವಾಸಿಸದ ದೇವರುಗಳೇ ಹೊರತು ಇನ್ನಾರೂ ರಾಜನ ಸಮ್ಮುಖದಲ್ಲಿ ತಿಳಿಸಲಾರರು ಎಂದು ಉತ್ತರಕೊಟ್ಟರು.


ಇನ್ನು ಯಾವನೂ ಅಲ್ಲ, ನಾನು ಬೆಳಕಿಗೂ ಕತ್ತಲಿಗೂ ಸೃಷ್ಟಿಕರ್ತನು, ಮೇಲನ್ನೂ ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಯಿಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.


ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ; ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ, ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಗ್ರಹಿಸುವೆವು; ಅಥವಾ ಭವಿಷ್ಯತ್ತುಗಳನ್ನು ಅರುಹಿರಿ.


ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿದ್ದೀ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿದ್ದೀ.


ಪಾತಾಳವು ಆತನ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ.


ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.


ನಿಜವಾದ ಬೆಳಕು ಲೋಕಕ್ಕೆ ಬರುವದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ಕಾರಣವೇನಂದರೆ ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ, ಕಿವಿಯಿದ್ದರೂ ಕೇಳುವದಿಲ್ಲ ಮತ್ತು ತಿಳುಕೊಳ್ಳುವದಿಲ್ಲ.


ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.


ಇಗೋ, ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇವೆ; ಅವು ತಲೆದೋರುವದಕ್ಕೆ ಮುಂಚೆ ಅವುಗಳನ್ನು ನಿಮಗೆ ತಿಳಿಸುತ್ತೇನೆ.


ಕಾರ್ಯವು ನಡೆಯುವದಕ್ಕೆ ಮುಂಚೆ [ಇವರಲ್ಲಿ] ಯಾವನು ಅದನ್ನು ಅರುಹಿದ್ದಾನೆ? ಅರುಹಿದ್ದರೆ [ಅವನು ನಿಜ ದೇವರೆಂದು] ನಮಗೆ ಗೊತ್ತಾಗುವದು; ಯಾವನು ಮುಂತಿಳಿಸಿದ್ದಾನೆ? ತಿಳಿಸಿದ್ದರೆ ಅವನನ್ನು ಸತ್ಯವಂತನೆನ್ನುವೆವು. ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವದಿಲ್ಲ.


ಯೋಸೇಫನು - ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನು ಕೊಡಬಲ್ಲನೆಂದು ಹೇಳಿದನು.


ಆಗ ಆ ರಹಸ್ಯವು ರಾತ್ರಿಯ ಸ್ವಪ್ನದಲ್ಲಿ ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ದಾನಿಯೇಲನು ಪರಲೋಕ ದೇವರನ್ನು ಹೀಗೆ ಸ್ತುತಿಸಿದನು -


ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.


ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನೆಂದು ಉತ್ತರಕೊಡುವರು.


ಜ್ಞಾನಿಯ ಹಾಗಿರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವದು.


ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು