Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:23 - ಕನ್ನಡ ಸತ್ಯವೇದವು J.V. (BSI)

23 ನನ್ನ ಪಿತೃಗಳ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ವ್ಯಕ್ತಗೊಳಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನನ್ನ ಪಿತೃಗಳ ದೇವಾ, ಮಾಡುವೆ ನಿನ್ನ ಗುಣಗಾನ, ನಿನಗೆ ನನ್ನ ಧನ್ಯವಾದ. ಏಕೆಂದರೆ ನೀನೇ ನನಗೆ ಜ್ಞಾನಶಕ್ತಿಗಳನ್ನು ದಯಪಾಲಿಸಿದಾತ. ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಾತ ನೀನೇ ಹೌದು, ರಾಜ ಬಯಸಿದ ಗುಟ್ಟನ್ನು ನಮಗೆ ವ್ಯಕ್ತಪಡಿಸಿದಾತ ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನನ್ನ ಪೂರ್ವಿಕರ ದೇವರೇ, ನಿನ್ನನ್ನು ಕೊಂಡಾಡಿ ಸ್ತುತಿಸುತ್ತೇನೆ. ನೀನು ನನಗೆ ಜ್ಞಾನವನ್ನೂ ಸಾಮರ್ಥ್ಯವನ್ನೂ ದಯಪಾಲಿಸಿದೆ. ನಾನು ಕೇಳಿದ್ದನ್ನು ಅನುಗ್ರಹಿಸಿದೆ. ಅರಸನ ಕನಸಿನ ಬಗ್ಗೆ ತಿಳಿಸಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:23
33 ತಿಳಿವುಗಳ ಹೋಲಿಕೆ  

ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ ಎಂದನು.


ದೇವರು ಮೋಶೆಗೆ ಮತ್ತೂ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು. ಇದು ಸದಾಕಾಲಕ್ಕೂ ನನ್ನ ಹೆಸರು; ಇದು ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನ ಪ್ರೇರಣೆಯಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಕರ್ತನಾದ ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ರಹಸ್ಯವನ್ನು ತಿಳಿಸದೆ ಏನೂ ಮಾಡನು.


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲಶಾಸ್ತ್ರಗಳಲ್ಲಿಯೂ ವಿದ್ಯೆಗಳಲ್ಲಿಯೂ ಜ್ಞಾನ ವಿವೇಕಗಳನ್ನು ದಯಪಾಲಿಸಿದನು; ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸುವದರಲ್ಲಿ ಪ್ರವೀಣನಾದನು.


ಆ ದಿನದಲ್ಲಿ ನೀನು ಹೇಳುವದೇನಂದರೆ - ಯೆಹೋವನೇ, ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀಯಲ್ಲವೆ.


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ಮಾಡಿದ ಹರಕೆಗಳನ್ನು ಪರಾತ್ಪರನಿಗೆ ಸಲ್ಲಿಸಿರಿ.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಅಳಬೇಡ; ಅಗೋ, ಯೂದಾ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಜಯಹೊಂದಿದನು; ಆತನು ಆ ಸುರುಳಿಯನ್ನೂ ಅದರ ಏಳು ಮುದ್ರೆಗಳನ್ನೂ ಬಿಚ್ಚುವನು ಎಂದು ಹೇಳಿದನು.


ಯೇಸು ಕ್ರಿಸ್ತನ ಪ್ರಕಟನೆಯು. ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ಸೂಚಿಸಿದನು.


ಆಗ ಕಲ್ಲನ್ನು ತೆಗೆದುಹಾಕಿದರು. ಮತ್ತು ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ - ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಿನ್ನನ್ನು ಕೊಂಡಾಡುತ್ತೇನೆ;


ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.


ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನದಿಂದ ಜ್ಞಾನಿಗೆ ಉಂಟಾಗುವ ಬಲವು ಹೆಚ್ಚು.


ಜ್ಞಾನಿಗೆ ತ್ರಾಣ, ಬಲ್ಲವನಿಗೆ ಬಹು ಬಲ.


ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಲಗ್ಗೆ ಹತ್ತಿ ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು.


ಸದ್ಯೋಚನೆಯೂ ಸುಜ್ಞಾನವೂ ಸಾಮರ್ಥ್ಯವೂ ನನ್ನಲ್ಲಿವೆ; ವಿವೇಕವು ನಾನೇ.


ಯೆಹೋವನೇ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿರುವಾತನು ನೀನಲ್ಲವೋ? ನೀನು ಜನಾಂಗಗಳ ಎಲ್ಲಾ ರಾಜ್ಯಗಳನ್ನು ಆಳುವವನಾಗಿರುತ್ತೀ. ನಿನ್ನ ಹಸ್ತದಲ್ಲಿ ಬಲಪರಾಕ್ರಮಗಳಿರುತ್ತವೆ; ನಿನ್ನೆದುರಿನಲ್ಲಿ ಯಾರೂ ನಿಲ್ಲಲಾರರು.


ಆದದರಿಂದ ನಮ್ಮ ದೇವರೇ, ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನಂದರೆ - ನಮ್ಮ ಪಿತೃವಾಗಿರುವ ಇಸ್ರಾಯೇಲನ ದೇವರೇ, ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ವೇದಿಯ ಹತ್ತಿರ ಬಂದು - ಅಬ್ರಹಾಮ್ ಇಸಾಕ್ ಇಸ್ರಾಯೇಲ್ಯರ ದೇವರೇ, ಯೆಹೋವನೇ, ನೀನೋಬ್ಬನೇ ಇಸ್ರಾಯೇಲ್ಯರ ದೇವರಾಗಿರುತ್ತೀ ಎಂಬದನ್ನೂ ನಾನು ನಿನ್ನ ಸೇವಕನಾಗಿರುತ್ತೇನೆಂಬದನ್ನೂ ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬದನ್ನೂ ಈಹೊತ್ತು ತೋರಿಸಿ ಕೊಡು.


ನಮ್ಮ ದೇವರಾದ ಯೆಹೋವನು ನಮ್ಮ ಪಿತೃಗಳ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ; ಆತನು ನಮ್ಮನ್ನು ಕೈಬಿಡದಿರಲಿ, ತಳ್ಳದಿರಲಿ.


ಆಗ ಯೆಹೋವನು ತನ್ನೊಳಗೆ - ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವದು ಸರಿಯೋ?


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳನ್ನುವದಿಲ್ಲ; ಯಜಮಾನನು ಮಾಡುವಂಥದು ಆಳಿಗೆ ತಿಳಿಯುವದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಹೇಳಿದ್ದೇನೆ; ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ನಾನು ಇದನ್ನು ನೋಡಿ, ಬಲಕ್ಕಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರಮಾಡಿ ಅವನ ಮಾತುಗಳನ್ನು ಗಮನಿಸರು ಅಂದುಕೊಂಡೆನು.


ನನ್ನ ಹಿರಿಯರ ದೇವರು, ಅಂದರೆ ಅಬ್ರಹಾಮನ ದೇವರೂ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ಆಗಿರುವಾತನು, ನನ್ನ ಪಕ್ಷದಲ್ಲಿ ಇರದಿದ್ದರೆ ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿ. ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸವನ್ನೂ ನೋಡಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು ಅಂದನು.


ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ.


ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು ನೀನು ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.


ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು