Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:30 - ಕನ್ನಡ ಸತ್ಯವೇದವು J.V. (BSI)

30 ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂತಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದುಬರಲಿ ಎಂದು ಈ ರಹಸ್ಯವು ನನಗೆ ವ್ಯಕ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾನೇ ಎಲ್ಲಾ ಮನುಷ್ಯರಿಗಿಂತ ಹೆಚ್ಚು ಬುದ್ಧಿವಂತನಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದು ಬರಲಿ ಎಂದು ಈ ರಹಸ್ಯವು ನನಗೂ ಪ್ರಕಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆ ಗುಟ್ಟನ್ನು ನನಗೂ ವ್ಯಕ್ತಪಡಿಸಿದ್ದಾರೆ. ನಾನು ಎಲ್ಲ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನು ಎಂದೇನೂ ಅಲ್ಲ. ಆ ಕನಸಿನ ಉದ್ದೇಶ ರಾಜರಾದ ತಮಗೆ ಗೋಚರವಾಗಿ ನಿಮ್ಮ ಮನದಾಲೋಚನೆಗಳು ನಿಮಗೆ ಅರ್ಥವಾಗಲಿ ಎಂದು ನನಗೂ ವ್ಯಕ್ತಪಡಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದೇವರು ರಹಸ್ಯವನ್ನು ನನಗೂ ತಿಳಿಸಿದ್ದಾನೆ! ದೇವರು ನನಗೆ ತಿಳಿಸಿರುವುದು ನಾನು ಬೇರೆಯವರಿಗಿಂತ ಹೆಚ್ಚು ಬುದ್ಧಿವಂತನೆಂದಲ್ಲ. ಆದರೆ ಅರಸನಾದ ನಿನಗೆ ಇದರ ಅರ್ಥ ತಿಳಿಯಲಿ ಎಂಬ ಉದ್ದೇಶದಿಂದ ದೇವರು ನನಗೆ ತಿಳಿಸಿದ್ದಾನೆ. ಇದರಿಂದ ನಿನ್ನ ಮನಸ್ಸಿನ ಯೋಚನೆಗಳ ವಿಷಯ ನಿನಗೆ ತಿಳಿದುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂದಲ್ಲದಿದ್ದರೂ, ಕನಸಿನ ಅರ್ಥವು ಅರಸನಾದ ನಿನಗೆ ಗೋಚರವಾಗಿ, ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದುಬರಲೆಂದು ನನಗೆ ಪ್ರಕಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:30
16 ತಿಳಿವುಗಳ ಹೋಲಿಕೆ  

ಯೋಸೇಫನು - ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನು ಕೊಡಬಲ್ಲನೆಂದು ಹೇಳಿದನು.


ಪೇತ್ರನು ಇದನ್ನು ನೋಡಿ ಜನರಿಗೆ - ಇಸ್ರಾಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯಪಡುತ್ತೀರಿ? ನೀವು ನಮ್ಮ ಮೇಲೆ ದೃಷ್ಟಿಯಿಟ್ಟು ನೋಡುವದೇನು? ನಾವು ಸ್ವಂತ ಶಕ್ತಿಯಿಂದಾಗಲಿ ದೇವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.


ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹುಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಸ್ತೋತ್ರವನ್ನು ಉಂಟುಮಾಡುವದು.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ಕರ್ತನು ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡಿದ್ದಾನೆ.


[ಕರ್ತನು] ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.


ಇಗೋ, ಪರ್ವತಗಳನ್ನು ರೂಪಿಸಿ ವಾಯುವನ್ನು ಸೃಷ್ಟಿಸಿ ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂವಿುಯ ಉನ್ನತಪ್ರದೇಶಗಳಲ್ಲಿ ನಡೆಯುವಾತನಿಗೆ ಸೇನಾಧೀಶ್ವರದೇವರಾದ ಯೆಹೋವನೆಂಬದೇ ನಾಮಧೇಯ.


ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು; ದಾನಿಯೇಲನೋ ಅರಮನೆಯಲ್ಲಿ ನಿಂತನು.


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲಶಾಸ್ತ್ರಗಳಲ್ಲಿಯೂ ವಿದ್ಯೆಗಳಲ್ಲಿಯೂ ಜ್ಞಾನ ವಿವೇಕಗಳನ್ನು ದಯಪಾಲಿಸಿದನು; ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸುವದರಲ್ಲಿ ಪ್ರವೀಣನಾದನು.


ನನ್ನ ಸೇವಕನಾದ ಯಾಕೋಬಿಗಾಗಿ, ನಾನು ಆದುಕೊಂಡ ಇಸ್ರಾಯೇಲಿಗಾಗಿ ಹೆಸರುಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಬಿರುದನ್ನು ದಯಪಾಲಿಸಿದ್ದೇನೆ.


ನಾನು ಕೂತುಕೊಳ್ಳುವದೂ ಏಳುವದೂ ನಿನಗೆ ಗೊತ್ತದೆ; ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತೀ;


ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು