Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:37 - ಕನ್ನಡ ಸತ್ಯವೇದವು J.V. (BSI)

37 ಅರಸೇ, ನೀನು ರಾಜಾಧಿರಾಜ, ಪರಲೋಕದೇವರು ನಿನಗೆ ರಾಜ್ಯಬಲಪರಾಕ್ರಮ ವೈಭವಗಳನ್ನು ದಯಪಾಲಿಸಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನೀವು ರಾಜಾಧಿರಾಜರು, ಪರಲೋಕ ದೇವರು ನಿಮಗೆ ರಾಜ್ಯಬಲ, ಪರಾಕ್ರಮ ಹಾಗು ವೈಭವಗಳನ್ನು ದಯಪಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:37
32 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವ, ರಥ, ರಾಹುತ, ಬಹುಜನಪರಿವಾರ ಇವುಗಳಿಂದ ಕೂಡಿದವನನ್ನಾಗಿ ನಾನು ಬಡಗಲಿಂದ ತೂರಿನ ಮೇಲೆ ಬರಮಾಡುವೆನು.


ಅರಸೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಈ ರಾಜ್ಯಮಹತ್ವಮಾನ ಸನ್ಮಾನಗಳನ್ನು ದಯಪಾಲಿಸಿದನು;


ಕಸ್ದೀಯರ ನಗರಿಯೇ, ಮೌನವಾಗಿ ಕೂತುಕೋ, ಕತ್ತಲೊಳಗೆ ಹೊಗು, ನೀನು ಇನ್ನು ರಾಜ್ಯಗಳ ರಾಣಿ ಎನಿಸಿಕೊಳ್ಳೆ.


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ರಾಜಾಧಿರಾಜನಾದ ಅರ್ತಷಸ್ತನು ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ಇತ್ಯಾದಿ.


ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು ತನಗೋಸ್ಕರ ಯೆಹೂದ ದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಅವರ ಸ್ವರವು ನನಗೆ ಕೇಳಿಸಿತು; ಅವರು ಮಹಾ ಶಬ್ದದಿಂದ - ವಧಿತನಾದ ಕುರಿಯಾದಾತನು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನ ಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಹೇಳಿದರು.


ಕರ್ತನೇ, ನಮ್ಮ ದೇವರೇ, ನೀನು ಪ್ರಭಾವ ಮಾನ ಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಸಮಸ್ತವನ್ನು ಸೃಷ್ಟಿಸಿದಾತನು ನೀನೇ; ಎಲ್ಲವು ನಿನ್ನ ಚಿತ್ತದಿಂದಲೇ ಇದ್ದವು, ನಿನ್ನ ಚಿತ್ತದಿಂದಲೇ ನಿರ್ಮಿತವಾದವು ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾರೆ.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಅದು ಜನಾಂಗಗಳೊಳಗೆ ವಿುಂಡರನ್ನು ಸಂಪಾದಿಸಿದರೂ ಅದನ್ನು ನಾನು ಈಗ ಸೆರೆಕೂಡುವೆನು; ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವದು.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು;


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲುಮೇಯುವದೇ ನಿನಗೆ ಗತಿಯಾಗುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನ್ನ ತಿಳುವಳಿಕೆಗೆ ಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು ಎಂದು ಆಕಾಶವಾಣಿಯಾಯಿತು.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು.


ಆತನ ಮಹತ್ತುಗಳು ಎಷ್ಟೋ ಅತಿಶಯ! ಆತನ ಅದ್ಭುತಗಳು ಎಷ್ಟೋ ವಿಶೇಷ! ಆತನ ರಾಜ್ಯವು ಶಾಶ್ವತರಾಜ್ಯ, ಆತನ ಆಳಿಕೆಯು ತಲತಲಾಂತರಕ್ಕೂ ನಿಲ್ಲುವದು.


ಏಕಂದರೆ ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾವು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಸೇವಿಸೇ ಸೇವಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ ಎಂದು ಹೇಳು.


ಅದು ಅಂದುಕೊಳ್ಳುವದೇನಂದರೆ - ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೆ.


ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.


ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ ತನಗೋಸ್ಕರ ಯೆಹೂದದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಹೋಗಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು ಎಂದು ಪ್ರಕಟಿಸಿದನು.


ಅವನು ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.


ಅವನೊಡನೆ ಪ್ರೀತಿಯಿಂದ ಮಾತಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಣ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇವಿುಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ರಾಜನೇ, ನೀನು ಕಂಡದು ಆಹಾ, ಅದ್ಭುತ ಪ್ರತಿಮೆ; ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆಯು ನಿನ್ನೆದುರಿಗೆ ನಿಂತಿತ್ತು; ಭಯಂಕರವಾಗಿ ಕಾಣಿಸಿತು;


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು