Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:48 - ಕನ್ನಡ ಸತ್ಯವೇದವು J.V. (BSI)

48 ಬಳಿಕ ರಾಜನು ದಾನಿಯೇಲನನ್ನು ದೊಡ್ಡಸ್ತಿಕೆಗೆ ತಂದು ಅವನಿಗೆ ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟು ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಬಳಿಕ ರಾಜನು ದಾನಿಯೇಲನನ್ನು ದೊಡ್ಡ ಪದವಿಗೆ ಏರಿಸಿದನು. ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟನು. ಬಾಬಿಲೋನಿನ ಸಂಸ್ಥಾನವನ್ನೆಲ್ಲ ಅವನಿಗೆ ಅಧೀನಪಡಿಸಿ ಬಾಬಿಲೋನಿನ ಎಲ್ಲಾ ವಿದ್ವಾಂಸರಿಗೂ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ತರುವಾಯ ಅರಸನು ದಾನಿಯೇಲನಿಗೆ ತನ್ನ ರಾಜ್ಯದಲ್ಲಿ ಬಹುಮುಖ್ಯವಾದ ಉದ್ಯೋಗವನ್ನು ಕೊಟ್ಟನು. ಅಮೂಲ್ಯವಾದ ಕಾಣಿಕೆಗಳನ್ನೂ ಕೊಟ್ಟನು. ನೆಬೂಕದ್ನೆಚ್ಚರನು ದಾನಿಯೇಲನನ್ನು ಬಾಬಿಲೋನ್ ಸಂಸ್ಥಾನದ ಅಧಿಪತಿಯನ್ನಾಗಿ ಮಾಡಿದನು. ಬಾಬಿಲೋನಿನ ಎಲ್ಲಾ ವಿದ್ವಾಂಸರ ಮುಖ್ಯಸ್ಥನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:48
22 ತಿಳಿವುಗಳ ಹೋಲಿಕೆ  

ನೀವು ಆ ಕನಸನ್ನೂ ಅದರ ಅಭಿಪ್ರಾಯವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನಬಹುಮಾನಗಳೂ ವಿಶೇಷಸನ್ಮಾನಗಳೂ ಲಭಿಸುವವು; ಆದಕಾರಣ ಆ ಕನಸನ್ನೂ ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಲು ಪಂಡಿತರು -


ಪರಿಶುದ್ಧದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು; ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು ಮಂತ್ರವಾದಿಗಳು ಪಂಡಿತರು ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇವಿುಸಿದನು;


ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬದು ನನಗೆ ಗೊತ್ತು. ಆದದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.


ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.


ನೀನೋ ಗೂಢಾರ್ಥಗಳನ್ನು ವಿವರಿಸಿ ಗುಂಜುಗಂಟುಗಳನ್ನು ಬಿಚ್ಚಬಲ್ಲವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ನಿನ್ನನ್ನು ರಾಜ್ಯದ - ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.


ಬಳಿಕ ರಾಜನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತಪದವಿಗೆ ತಂದನು.


ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ; ರಾಜನೇ, ಇವರು ನಿನ್ನನ್ನು ಲಕ್ಷಿಸುವದಿಲ್ಲ, ನಿನ್ನ ದೇವರುಗಳನ್ನು ಸೇವಿಸುವದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವದಿಲ್ಲ ಎಂದು ಅರಿಕೆಮಾಡಲು


ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬೆಲ್ ಸಂಸ್ಥಾನದ ದೂರಾ ಎಂಬ ಬೈಲಿನಲ್ಲಿ ನಿಲ್ಲಿಸಿದನು.


ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತಾಡುವೆನು; ಯೆಹೋವನ ಮಾರ್ಗವೂ ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಮ್ಮನವಾಗಿ [ತಮ್ಮ ಹೆಗಲ] ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.


ಅವನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಐನೂರು ಜೋಡಿ ಎತ್ತುಗಳೂ ಐನೂರು ಹೆಣ್ಣು ಕತ್ತೆಗಳೂ ಅನೇಕಾನೇಕ ಸೇವಕರೂ ಇದ್ದದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವಾಸ್ತ್ಯವುಳ್ಳವನಾಗಿದ್ದನು.


ಅರಾಮ್ಯರ ಅರಸನಿಗೆ ನಾಮಾನನೆಂಬೊಬ್ಬ ಸೇನಾಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದದರಿಂದ ಅರಸನು ಇವನನ್ನು ಮಹಾಪುರುಷನೆಂದೂ ಸನ್ಮಾನಯೋಗ್ಯನೆಂದೂ ಎಣಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.


ಇವನು ಎಂಭತ್ತು ವರುಷದ ಮುದುಕನು. ಇವನು ಬಹುಶ್ರೀಮಂತನಾಗಿದ್ದದರಿಂದ ದಾವೀದನು ಮಹನಯಿವಿುನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.


ಕರ್ಮೆಲಿನಲ್ಲಿ ಸ್ವಾಸ್ತ್ಯವಿದ್ದಂಥ ಒಬ್ಬ ಮನುಷ್ಯನು ಮಾವೋನಿನಲ್ಲಿ ವಾಸಿಸುತ್ತಿದ್ದನು; ಅವನ ಹೆಸರು ನಾಬಾಲ;


ಅವರು - ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ! ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು; ಇದಲ್ಲದೆ ಅವನ ಕುಟುಂಬಕ್ಕೆ ಸರ್ವಮಾನ್ಯವನ್ನು ಕೊಡುವನು ಎಂದು ಮಾತಾಡಿಕೊಳ್ಳುತ್ತಿದ್ದರು.


ಆದಕಾರಣ ನಿನ್ನ ಊರಿಗೆ ಹೋಗಿಬಿಡು; ನಿನ್ನನ್ನು ಬಹಳವಾಗಿ ಘನಪಡಿಸುವೆನೆಂದು ಹೇಳಿಕೊಂಡೆನು; ಆದರೆ ನಿನಗೆ ಘನತೆಯುಂಟಾಗದಂತೆ ಯೆಹೋವನು ಅಡ್ಡಿಮಾಡಿದ್ದಾನೆ ಎಂದು ಹೇಳಿದನು.


ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ ಪಂಡಿತ ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ - ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.


ಆಗ ದಾನಿಯೇಲನಾದ ನಾನು ಬೆಂಡಾಗಿ ಕೆಲವು ದಿವಸ ಕಾಯಿಲೆಬಿದ್ದೆನು; ಆಮೇಲೆ ಎದ್ದು ರಾಜಕಾರ್ಯವನ್ನು ನಡಿಸಿದೆನು; ಆ ಕನಸಿಗೆ ಬೆಚ್ಚಿಬೆರಗಾದೆನು; ಅದು ಯಾರಿಗೂ ತಿಳಿಯಲಿಲ್ಲ.


ಆದದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರತರುವ ಹಾಗೆ ಆಜ್ಞಾಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು