Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 2:6 - ಕನ್ನಡ ಸತ್ಯವೇದವು J.V. (BSI)

6 ನೀವು ಆ ಕನಸನ್ನೂ ಅದರ ಅಭಿಪ್ರಾಯವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನಬಹುಮಾನಗಳೂ ವಿಶೇಷಸನ್ಮಾನಗಳೂ ಲಭಿಸುವವು; ಆದಕಾರಣ ಆ ಕನಸನ್ನೂ ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ ಎಂದು ಹೇಳಲು ಪಂಡಿತರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಆ ಕನಸನ್ನೂ ಅದರ ಉದ್ದೇಶವನ್ನೂ ತಿಳಿಸಿದ್ದೇ ಆದರೆ ನನ್ನಿಂದ ನಿಮಗೆ ದಾನ ಬಹುಮಾನಗಳೂ ವಿಶೇಷ ಸನ್ಮಾನಗಳೂ ದೊರಕುವುವು. ಆದಕಾರಣ ಆ ಕನಸನ್ನೂ ಅದರ ಉದ್ದೇಶವನ್ನೂ ನನಗೆ ತಿಳಿಸಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ನೀವು ನನಗೆ ನನ್ನ ಕನಸನ್ನೂ ಅದರ ಅರ್ಥವನ್ನೂ ಹೇಳಿದರೆ ಕಾಣಿಕೆಗಳನ್ನೂ ಬಹುಮಾನಗಳನ್ನೂ ಕೊಡುತ್ತೇನೆ ಮತ್ತು ಮಹಾಸನ್ಮಾನವನ್ನು ಮಾಡುತ್ತೇನೆ. ಆದ್ದರಿಂದ ನೀವು ನನಗೆ ಕನಸನ್ನೂ ಅದರ ಅರ್ಥವನ್ನೂ ಹೇಳಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ನೀವು ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಿದರೆ, ದಾನಬಹುಮಾನಗಳನ್ನೂ, ಬಹಳ ಘನತೆಯನ್ನೂ ನನ್ನಿಂದ ಪಡೆಯುವಿರಿ. ಹೀಗಿರಲಾಗಿ ಕನಸನ್ನೂ, ಅದರ ವ್ಯಾಖ್ಯಾನವನ್ನೂ ನನಗೆ ತಿಳಿಸಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 2:6
8 ತಿಳಿವುಗಳ ಹೋಲಿಕೆ  

ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ ಪಂಡಿತ ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ - ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು.


ಬಳಿಕ ರಾಜನು ದಾನಿಯೇಲನನ್ನು ದೊಡ್ಡಸ್ತಿಕೆಗೆ ತಂದು ಅವನಿಗೆ ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟು ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇವಿುಸಿದನು.


ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.


ಆದಕಾರಣ ನಿನ್ನ ಊರಿಗೆ ಹೋಗಿಬಿಡು; ನಿನ್ನನ್ನು ಬಹಳವಾಗಿ ಘನಪಡಿಸುವೆನೆಂದು ಹೇಳಿಕೊಂಡೆನು; ಆದರೆ ನಿನಗೆ ಘನತೆಯುಂಟಾಗದಂತೆ ಯೆಹೋವನು ಅಡ್ಡಿಮಾಡಿದ್ದಾನೆ ಎಂದು ಹೇಳಿದನು.


ಬಾಲಾಕನು ಬಿಳಾಮನನ್ನು ಕಂಡಾಗ - ನಿನ್ನನ್ನು ಅವಸರದಿಂದ ಕರಿಸುವದಕ್ಕೆ ದೂತರನ್ನು ಕಳುಹಿಸಿದೆನಲ್ಲಾ; ನೀನು ಯಾಕೆ ಆಗಲೇ ಬರಲಿಲ್ಲ; ನಿನ್ನನ್ನು ಘನಪಡಿಸುವದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ? ಎಂದು ಹೇಳಿದ್ದಕ್ಕೆ


ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ; ನೀನು ಅಗತ್ಯವಾಗಿ ಬಂದು ಈ ಜನವನ್ನು ನನಗೋಸ್ಕರ ಶಪಿಸಬೇಕೆಂದು ಚಿಪ್ಪೋರನ ಮಗನಾದ ಬಾಲಾಕನು ಹೇಳುತ್ತಾನೆಂದು ತಿಳಿಸಿದರು.


ಮೋವಾಬ್ಯರ ಹಿರಿಯರೂ ವಿುದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದಾಗ ಅವನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು