Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:1 - ಕನ್ನಡ ಸತ್ಯವೇದವು J.V. (BSI)

1 ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬೆಲ್ ಸಂಸ್ಥಾನದ ದೂರಾ ಎಂಬ ಬೈಲಿನಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರಾಜ ನೆಬೂಕದ್ನೆಚ್ಚರನು 27 ಮೀಟರ್ ಎತ್ತರದ 3 ಮೀಟರ್ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬಿಲೋನ್ ಸಂಸ್ಥಾನದ ‘ದೂರಾ’ ಎಂಬ ಬಯಲಿನಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅರಸನಾದ ನೆಬೂಕದ್ನೆಚ್ಚರನು ಒಂದು ಬಂಗಾರದ ವಿಗ್ರಹವನ್ನು ಮಾಡಿಸಿದ್ದನು. ಆ ವಿಗ್ರಹವು ಅರವತ್ತು ಮೊಳ ಎತ್ತರವಾಗಿತ್ತು. ಆರು ಮೊಳ ಅಗಲವಾಗಿತ್ತು. ಆ ವಿಗ್ರಹವನ್ನು ಬಾಬಿಲೋನ್ ಪ್ರಾಂತ್ಯದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:1
29 ತಿಳಿವುಗಳ ಹೋಲಿಕೆ  

ಮರಕ್ಕೆ ಎಚ್ಚತ್ತುಕೋ, ಜಡವಾದ ಕಲ್ಲಿಗೆ ಎದ್ದೇಳು ಎಂದು ಅಪ್ಪಣೆಕೊಡುವವನ ಗತಿಯನ್ನು ಅಯ್ಯೋ, ಏನು ಹೇಳಲಿ! ಇಂಥ ಬೊಂಬೆಯು ಬೋಧಿಸೀತೇ? ಇಗೋ, ಅದಕ್ಕೆ ಬೆಳ್ಳಿಬಂಗಾರವು ಹೊದಗಿಸಿದೆ, ಅದರೊಳಗೆ ಶ್ವಾಸವೇನೂ ಇಲ್ಲ.


ಮನುಷ್ಯಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.)


ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿನಲ್ಲಿ ಬೆಳ್ಳಿಯನ್ನು ತೂಗಿ ಅಕ್ಕಸಾಲಿಗನಿಗೆ ಕೊಟ್ಟು ಕೂಲಿಗೊತ್ತುಮಾಡಿ ದೇವರನ್ನು ಮಾಡಿಸಿ ಅದಕ್ಕೆ ಎರಗಿ ಪೂಜೆಮಾಡುವರು.


ನನ್ನ ಅಪ್ಪಣೆಯಿಲ್ಲದೆ ರಾಜರನ್ನು ಕಲ್ಪಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ; ತಮ್ಮ ಬೆಳ್ಳಿ ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬದನ್ನು ನೀವು ನೋಡುತ್ತೀರಿ, ಕೇಳುತ್ತೀರಿ.


ನಾವು ದೇವರ ಸಂತಾನದವರಾಗಿದ್ದ ಮೇಲೆ ದೈವವು ಮನುಷ್ಯನ ಶಿಲ್ಪವಿದ್ಯೆಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.


ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿಕಣ್ಣು ಕಪಟಗಳಿಗಾಗಿ ಬಿಸಾಟುಬಿಟ್ಟು


ಅನ್ಯಜನಗಳ ವಿಗ್ರಹಗಳು ಬೆಳ್ಳಿಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.


ಬಹಳವಾಗಿ ಆಲೋಚಿಸಿ ಕಡೆಯಲ್ಲಿ ಬಂಗಾರದ ಎರಡು ಬಸವ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲ್ಯರಿಗೆ - ನೀವು ಜಾತ್ರೆಗಾಗಿ ಯೆರೂಸಲೇವಿುಗೆ ಹೋದದ್ದು ಸಾಕಾಯಿತು; ಇಗೋ, ನಿಮ್ಮನ್ನು ಐಗುಪ್ತದಿಂದ ಕರತಂದ ದೇವರುಗಳು ಇಲ್ಲಿರುತ್ತವೆ ಎಂದು ಹೇಳಿ


ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;


ಬಳಿಕ ರಾಜನು ದಾನಿಯೇಲನನ್ನು ದೊಡ್ಡಸ್ತಿಕೆಗೆ ತಂದು ಅವನಿಗೆ ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟು ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇವಿುಸಿದನು.


ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವು ಊಫಜಿನಿಂದಲೂ ಸಾಗಿಬರುತ್ತವೆ; ನೀಲಧೂಮ್ರವಸ್ತ್ರಗಳು ಅವುಗಳ ಉಡುಪಾಗಿವೆ; ಇವೆಲ್ಲಾ ಕುಶಲರ ಕೌಶಲ್ಯ.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ ಎರಕದ ನಿಮ್ಮ ಬೊಂಬೆಗಳ ಬಂಗಾರದ ಮುಲಾಮನ್ನೂ ನೀವು ಹೊಲಸು ಮಾಡಿ ಆ ವಿಗ್ರಹಗಳನ್ನು - ತೊಲಗಿ ಎಂದು ಹೊಲೆಯಂತೆ ಬಿಸಾಟುಬಿಡುವಿರಿ.


ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಯೆಹೋವನಿಗೆ ಹೇಯವಾದದ್ದು.


ಆಗ ಮೋಶೆ ಯೆಹೋವನ ಬಳಿಗೆ ತಿರಿಗಿ ಹೋಗಿ - ಅಯ್ಯೋ ಅಯ್ಯೋ, ಈ ಜನರು ಮಹಾಪಾಪವನ್ನು ಮಾಡಿದ್ದಾರೆ; ಚಿನ್ನದ ದೇವರನ್ನು ಮಾಡಿಕೊಂಡಿದ್ದಾರೆ. ಆದರೂ ನೀನು ಕರುಣವಿಟ್ಟು ಅವರ ಪಾಪವನ್ನು ಕ್ಷವಿುಸಬೇಕು.


ಆದದರಿಂದ ನೀವು ಬೆಳ್ಳಿಬಂಗಾರಗಳಿಂದ ದೇವರುಗಳನ್ನು ಮಾಡಿಕೊಂಡು ನನ್ನ ಜೊತೆಯಲ್ಲಿ ಸೇರಿಸಕೂಡದು.


ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ; ಅವರು ದೆವ್ವಗಳ ಪೂಜೆಯನ್ನೂ ಬಂಗಾರ ಬೆಳ್ಳಿ ತಾಮ್ರ ಕಲ್ಲು ಮರ ಇವೇ ಮುಂತಾದವುಗಳಿಂದ ಮಾಡಲ್ಪಟ್ಟು ನೋಡಲಾರದೆ ಕೇಳಲಾರದೆ ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.


ಬಳಿಕ ರಾಜನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತಪದವಿಗೆ ತಂದನು.


ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.


ಹಾಗೆ ಅವರನ್ನು ಹಿಡತರಲು ನೆಬೂಕದ್ನೆಚ್ಚರನು ಅವರಿಗೆ - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರೇ, ನೀವು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವದು ಬೇಕೆಂದೇ ಮಾಡಿದ್ದೋ?


ದ್ರಾಕ್ಷಾರಸವನ್ನು ಕುಡಿದು ಬಂಗಾರಬೆಳ್ಳಿ ತಾಮ್ರಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.


ತನ್ನ ಧಾನ್ಯದ್ರಾಕ್ಷಾರಸತೈಲಗಳು ನನ್ನಿಂದ ದೊರೆತವುಗಳೆಂದೂ ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿ ಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು; ದಾನಿಯೇಲನೋ ಅರಮನೆಯಲ್ಲಿ ನಿಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು