Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:13 - ಕನ್ನಡ ಸತ್ಯವೇದವು J.V. (BSI)

13 ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಹಿಡತರಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೆಬೂಕದ್ನೆಚ್ಚರನು ಉಗ್ರಕೋಪಗೊಂಡು ಶದ್ರಕ್, ಮೇಶಕ್, ಅಬೇದ್‍ನೆಗೋ ಎಂಬವರನ್ನು ಹಿಡಿದುತರಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಅವನು ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕರೆಸಿದನು. ಅವರನ್ನು ಅರಸನ ಬಳಿಗೆ ಕರೆದುತರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:13
15 ತಿಳಿವುಗಳ ಹೋಲಿಕೆ  

ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ಕಡೆಗೆ ಬೇರೆಮಾಡಿಕೊಂಡು ಆವಿಗೆಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ಇದನ್ನು ಕೇಳಿ ರಾಜನು ಉಗ್ರರೋಷವುಳ್ಳವನಾಗಿ ಬಾಬೆಲಿನ ಸಕಲವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.


ಕೆಲವು ದಿವಸಗಳಾದ ಮೇಲೆ ಫೇಲಿಕ್ಸನು ಯೆಹೂದ್ಯಳಾದ ದ್ರೂಸಿಲ್ಲಳೆಂಬ ಸ್ವಂತ ಹೆಂಡತಿಯೊಂದಿಗೆ ಬಂದು ಪೌಲನನ್ನು ಕರಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.


ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಗಳ ಅಧಿಕಾರಸ್ಥರ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿವಿುತ್ತವಾಗಿ ಅರಸುಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ತೆಗೆದುಕೊಂಡುಹೋಗಿ ಹಿಂಸೆಪಡಿಸುವರು.


ಆದರೆ ಅವರಲ್ಲಿ ದುರ್ಬುದ್ಧಿ ತುಂಬಿದ್ದದರಿಂದ - ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು.


ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದಕ್ಕೂ ಅರಸುಗಳ ಮುಂದಕ್ಕೂ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.


ಕೋಪಿಷ್ಠನು ಜಗಳವನ್ನೆಬ್ಬಿಸುವನು; ಕ್ರೋಧಶೀಲನು ದೋಷಭರಿತನು.


ಕಲ್ಲು ಭಾರ, ಮರಳು ಭಾರ, ಎರಡಕ್ಕಿಂತಲೂ ಮೂಢನ ಕೋಪವು ಬಲು ಭಾರ.


ಮೂರ್ಖತನದಲ್ಲಿ ಮುಣುಗಿರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.


ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಇದರಿಂದ ಕಾಯಿನನು ಬಹು ಕೋಪಗೊಂಡನು; ಅವನ ಮುಖವು ಕಳೆಗುಂದಿತು.


ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್‍ನೆಗೋ ಎಂಬ ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು