Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:22 - ಕನ್ನಡ ಸತ್ಯವೇದವು J.V. (BSI)

22 ಹೀಗಾಗಲು ರಾಜಾಜ್ಞೆಯು ಖಂಡಿತವಾಗಿದದ್ದರಿಂದಲೂ ಆವಿಗೆಯ ಕಾವು ಅತಿತೀಕ್ಷ್ಣವಾಗಿದ್ದದರಿಂದಲೂ ಅಗ್ನಿಜ್ವಾಲೆಯು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಎತ್ತಿಹಾಕಿದವರನ್ನೇ ಸಂಹರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ರಾಜಾಜ್ಞೆಯು ಖಡಾಖಂಡಿತವಾಗಿದ್ದರಿಂದಲೂ ಆವಿಗೆಯ ಕಾವು ಅತಿ ತೀಕ್ಷ್ಣವಾಗಿದ್ದರಿಂದಲೂ ಅಗ್ನಿಕುಂಡವು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಎತ್ತಿ ತಂದವರನ್ನೇ ಭಸ್ಮಮಾಡಿಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಜ್ಞೆಯನ್ನು ಕೊಟ್ಟಾಗ ಅರಸನು ತುಂಬ ಕೋಪದಲ್ಲಿದ್ದನು. ಆದ್ದರಿಂದ ತಕ್ಷಣ ಕುಲುಮೆಯಲ್ಲಿ ಅತಿ ಹೆಚ್ಚು ಬೆಂಕಿಯನ್ನು ಉರಿಸಲಾಯಿತು. ಆ ಜ್ವಾಲೆ ಎಷ್ಟು ಭಯಂಕರವಾಗಿತ್ತೆಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕುಲುಮೆಯಲ್ಲಿ ಎಸೆಯಲು ಹೋದ ಶಕ್ತಿಶಾಲಿಗಳಾದ ಸೈನಿಕರೇ ಅದರ ತಾಪಕ್ಕೆ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅರಸನ ಆಜ್ಞೆಯು ಅವಸರವಾಗಿಯೂ, ಕುಲುಮೆಯು ಬಹು ಉರಿಯಾಗಿಯೂ ಇದ್ದುದರಿಂದ, ಬೆಂಕಿಯ ಜ್ವಾಲೆಯು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಬೆಂಕಿಗೆ ಹಾಕಲು ಎತ್ತಿದ ಆ ಸೈನಿಕರನ್ನೇ ಸಂಹರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:22
10 ತಿಳಿವುಗಳ ಹೋಲಿಕೆ  

ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡು.


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು; ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.


ಐಗುಪ್ತ್ಯರು - ನಾವೆಲ್ಲರು ಸಾಯುತ್ತೇವಲ್ಲಾ ಅಂದುಕೊಂಡು ಇಸ್ರಾಯೇಲ್ಯರನ್ನು ತಮ್ಮ ದೇಶದಿಂದ ತ್ವರೆಯಾಗಿ ಕಳುಹಿಸಿಬಿಡುವದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲಾತ್ಕರಿಸಿದರು.


ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆಮಾಡಿ ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.


ಆಗ ಅವನು ಆ ಹಣವನ್ನು ದೇವಾಲಯದೊಳಗೆ ಬಿಸಾಟುಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡು ಸತ್ತನು.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರುಹೊರಿಸಿದವರನ್ನು ತಂದು ಅವರನ್ನೂ ಅವರ ಹೆಂಡತಿಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು; ಅವರು ಗವಿಯ ಅಡಿಯನ್ನು ಮುಟ್ಟುವದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.


ಈ ರಾಜಾಜ್ಞೆಯು ಏಕೆ ಇಷ್ಟು ತೀಕ್ಷ್ಣ ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.


ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್‍ನೆಗೋ ಎಂಬ ಹೆಸರಿಟ್ಟನು.


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು