Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:7 - ಕನ್ನಡ ಸತ್ಯವೇದವು J.V. (BSI)

7 ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ ಕುಲಭಾಷೆಗಳವರು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಂತೆಯೇ ಸಮಸ್ತ ಜನಾಂಗ-ಕುಲ-ಭಾಷೆಗಳವರು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರು ಅದೇ ಸಮಯದಲ್ಲಿ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಆ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅವರು ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಿದರು. ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹವನ್ನು ಎಲ್ಲ ಜನಾಂಗಗಳ, ಭಾಷೆಗಳ ಜನರು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಜನರೆಲ್ಲರು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ಶಬ್ದವನ್ನು ಕೇಳಿದ ಕೂಡಲೇ, ಎಲ್ಲಾ ಪ್ರಜೆಗಳು ಜನಾಂಗಗಳು ವಿವಿಧ ಭಾಷೆಯವರು ಅಡ್ಡಬಿದ್ದು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:7
15 ತಿಳಿವುಗಳ ಹೋಲಿಕೆ  

ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ನೀನು ಕಂಡ ಈ ಮೃಗವು ಮೊದಲು ಇತ್ತು, ಈಗ ಇಲ್ಲ, ಮತ್ತು ಅಧೋಲೋಕದಿಂದ ಏರಿಬಂದು ನಾಶಕ್ಕೆ ಹೋಗುವದು. ಭೂನಿವಾಸಿಗಳೊಳಗೆ ಯಾರಾರ ಹೆಸರುಗಳು ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿರುವದಿಲ್ಲವೋ ಅವರು ಈ ಮೃಗವನ್ನು ನೋಡಿ ಇದು ಮೊದಲು ಇತ್ತು, ಈಗ ಇಲ್ಲ, ಇನ್ನು ಮೇಲೆ ಬರುವದು ಎಂದು ತಿಳಿದು ಆಶ್ಚರ್ಯಪಡುವರು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವದರಿಂದ ಭೂನಿವಾಸಿಗಳನ್ನು ಮರುಳುಗೊಳಿಸುತ್ತದೆ; ಅವರಿಗೆ - ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸುತ್ತದೆ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು; ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು;


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ನಾವು ದೇವರಿಂದ ಹುಟ್ಟಿದವರೆಂದೂ ಲೋಕವೆಲ್ಲವು ಕೆಡುಕನ ವಶದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.


ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆ; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟನು.


ಆಗ ರಾಜನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು ದಾನಿಯೇಲನನ್ನು ಪೂಜಿಸಿ ಅವನಿಗೆ ನೈವೇದ್ಯ ಮಾಡಿ ಧೂಪಹಾಕಬೇಕೆಂದು ಆಜ್ಞಾಪಿಸಿ


ಆಗ ಸಾರುವವನು ಗಟ್ಟಿಯಾಗಿ ಕೂಗಿ - ವಿವಿಧ ಜನಾಂಗ ಕುಲಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ -


ನೀವು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.


ಯಾವನು ಅಡ್ಡಬಿದ್ದು ಪೂಜಿಸುವದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವನು ಎಂದು ಸಾರಿದನು.


ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರುಹೊರಿಸುವದಕ್ಕೆ ಸನ್ನಿಧಿಗೆ ಬಂದು


ಪ್ರಭುವೇ, ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಪೂಜಿಸಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು