Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:27 - ಕನ್ನಡ ಸತ್ಯವೇದವು J.V. (BSI)

27 ಆದಕಾರಣ, ಅರಸೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ - ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು ಎಂದರಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:27
44 ತಿಳಿವುಗಳ ಹೋಲಿಕೆ  

ದೇವರು ಒಂದು ವೇಳೆ ಮನಮರುಗಿ ಹಿಂದಿರುಗಿ ತನ್ನ ಉಗ್ರಕೋಪವನ್ನು ತೊಲಗಿಸಾನು, ನಾವು ನಾಶವಾಗದೆ ಉಳಿದೇವು ಎಂಬದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.


ಆದದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷವಿುಸುವನೋ ಏನೋ ಆತನನ್ನು ಬೇಡಿಕೋ.


ಹೇಗೂ ಒಳಗಿರುವಂಥದನ್ನು ದಾನಾಕೊಡಿರಿ; ಆಗ ಸಕಲವೂ ನಿಮಗೆ ಶುದ್ಧವಾಗಿರುವದು.


ಕಳವು ಮಾಡುವವನು ಇನ್ನು ಮೇಲೆ ಕಳವುಮಾಡದೆ ಕೈಯಿಂದ ಯಾವದೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕಷ್ಟದಲ್ಲಿರುವವರಿಗೆ ಕೊಡುವದಕ್ಕೆ ಅವನಿಂದಾಗುವದು.


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನಸ್ವಭಾವಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಕೃಪಾಸತ್ಯತೆಗಳಿಂದ ಪಾಪನಿವಾರಣೆ; ಯೆಹೋವನ ಭಯಭಕ್ತಿಯಿಂದ ಹಾನಿ ನಿವಾರಣೆ.


ಮೊಟ್ಟ ಮೊದಲು ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲದಿಂದ ತೋರಿಸಿರಿ.


ಮುಟ್ಟಿನ ಹೆಂಗಸನ್ನು ಸೇರದೆ ಯಾರನ್ನೂ ಹಿಂಸಿಸದೆ ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ ಯಾರ ಸೊತ್ತನ್ನೂ ಅಪಹರಿಸದೆ ಹಸಿದವನಿಗೆ ಅನ್ನವಿಕ್ಕಿ ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವದು.


ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು ಎಂದು ಹೇಳಿದನು.


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಅರಸುಗಳ ಮುಂದೆಯೂ ನಿನ್ನ ಕಟ್ಟಳೆಗಳ ವಿಷಯದಲ್ಲಿ ಮಾತಾಡುವೆನು; ನಾಚಿಕೆಪಡುವದಿಲ್ಲ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಪೌಲನು ಸುನೀತಿ ದಯೆ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರಿಸುವೆನು ಎಂದು ಹೇಳಿದನು.


ಆತನು ಒಂದು ವೇಳೆ ಪಶ್ಚಾತ್ತಾಪಪಟ್ಟು ಹಿಂದಿರುಗಿ ನಿಮ್ಮ ದೇವರಾದ ಯೆಹೋವನ ಧಾನ್ಯಪಾನನೈವೇದ್ಯಗಳಿಗೆ ಅನುಕೂಲವಾದ ಸುವರಗಳನ್ನು ದಯಪಾಲಿಸಿ ಹೋದಾನು.


ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.


ನಾನು ಯಾವ ಪಟ್ಟಣಕ್ಕೆ ನಿಮ್ಮನ್ನು ಸಾಗಿಸಿದೆನೋ ಅದರ ಕ್ಷೇಮವನ್ನು ಹಾರೈಸಿ ಅದಕ್ಕಾಗಿ ಯೆಹೋವನನ್ನು ಪ್ರಾರ್ಥಿಸಿರಿ; ಅದರ ಕ್ಷೇಮವೇ ನಿಮ್ಮ ಕ್ಷೇಮ.


ಯೆರೆಮೀಯನು - ನಿನ್ನನ್ನು ಒಪ್ಪಿಸರು; ಜೀಯಾ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಕೊಳ್ಳು; ಕೈಕೊಂಡರೆ ಪ್ರಾಣವುಳಿಯುವದು, ಸುಖವೂ ಆಗುವದು.


ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವ ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಪಡೆಯೋಣ; ಹೀಗೆ ಮಾಡಿದರೆ ಭೂವಿುಯ ಮೇಲೆಲ್ಲಾ ಚದರುವದಕ್ಕೆ ಆಸ್ಪದವಾಗುವದಿಲ್ಲ ಅಂದುಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಸುಣ್ಣಕ್ಕೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


ಈ ಭಾಗ್ಯವು ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗುಂಟಾಯಿತು ಅಂದುಕೊಂಡೀರಿ.


ಆದರೆ ಅವರ ವಿರೋಧಿಗಳು ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು - ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಂಡಾರೆಂದು ನಾನು ಹಿಂದೆಗೆದೆನು ಎಂಬದೇ.


ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ; ದೀನರಲ್ಲಿ ಜ್ಞಾನ.


ಏಕಂದರೆ ಅವನು ತನ್ನೊಳಗೆ - ನನ್ನ ಜ್ಞಾನಭುಜ ಬಲಗಳಿಂದಲೇ ಇದನ್ನು ಮಾಡಿದ್ದೇನೆ, ನಾನೇ ವಿವೇಕಿ; ಜನಾಂಗಗಳ ಎಲ್ಲೆಗಳನ್ನು ಕಿತ್ತು ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ;


ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕೂತುಕೊಳ್ಳುವದಿಲ್ಲ, ಪುತ್ರಶೋಕವನ್ನು ಅನುಭವಿಸುವದಿಲ್ಲ ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು -


ನೀನು ಮಾಡಿದ ಕೇಡಿಗೆ ಭಯಪಡದೆ ನನ್ನನ್ನು ಯಾರೂ ನೋಡರು ಎಂದುಕೊಂಡಿದ್ದೀ; ನಿನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲವೆಂದು ಯೋಚಿಸಿಕೊಂಡಿದ್ದೀ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಫರೋಹನು - ಈ ನದಿಯು ನನ್ನದೇ, ನಾನೇ ಮಾಡಿಕೊಂಡದು ಅಂದುಕೊಂಡ ಕಾರಣ ಐಗುಪ್ತದೇಶವು ಹಾಳುಪಾಳಾಗುವದು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ನೀವು ಹೆಚ್ಚಳಪಡುವದು ಶೂನ್ಯವಾದದ್ದರಲ್ಲಿಯೇ ಸ್ವಬಲದಿಂದ ಕೊಂಬುಗಳನ್ನು ಪಡೆದುಕೊಂಡಿದ್ದೇವಲ್ಲಾ ಅಂದುಕೊಳ್ಳುತ್ತೀರಿ.


ಕೂಡಲೆ ಬಿರುಗಾಳಿಯಂತೆ ಬೀಸುತ್ತಾ ಹಾದುಹೋಗುವರು; ಸ್ವಬಲವೇ ದೇವರು ಎನ್ನುವ ಅಪರಾಧಕ್ಕೆ ಒಳಗಾಗುವರು.


ಈ ನಿನೆವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ - ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಹಕ್ಕೆಯಾಗಿದೆ! ಹಾದುಹೋಗುವವರೆಲ್ಲರೂ ಸಿಳ್ಳುಹಾಕಿ ಕೈಯಾಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು