Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:10 - ಕನ್ನಡ ಸತ್ಯವೇದವು J.V. (BSI)

10 ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು - ರಾಜನೇ, ಚಿರಂಜೀವಿಯಾಗಿರು, ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರಾಜನು ಮತ್ತು ಮುಖಂಡರು ಆಡಿದ ಮಾತುಗಳು ರಾಣಿಗೆ ಮುಟ್ಟಲು ಆಕೆಯು ಔತಣದ ಶಾಲೆಗೆ ಬಂದು, “ರಾಜನೇ, ಚಿರಂಜೀವಿಯಾಗಿರು. ನಿನ್ನ ಮನಸ್ಸು ಕಳವಳಗೊಳ್ಳದಿರಲಿ, ನಿನ್ನ ಮುಖ ಕಳೆಗುಂದದಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ರಾಜನೂ ಅವನ ಸಾಮಂತರೂ ಆಡಿದ ಮಾತು ರಾಣಿಗೆ ಮುಟ್ಟಿತು. ಆಕೆ ಔತಣ ಶಾಲೆಗೆ ಬಂದು, “ರಾಜರೇ, ಚಿರಂಜೀವಿಯಾಗಿರಿ! ನಿಮ್ಮ ಮನಸ್ಸು ಕಳವಳಗೊಳ್ಳದಿರಲಿ, ನಿಮ್ಮ ಮುಖ ಕಳೆಗುಂದದಿರಲಿ! ಪರಿಶುದ್ಧ ದೇವರ ಆತ್ಮ ನೆಲೆಸಿರುವ ಒಬ್ಬ ವ್ಯಕ್ತಿ ನಿಮ್ಮ ರಾಜ್ಯದಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ರಾಜನ ತಾಯಿಯು ಆ ಔತಣ ಶಾಲೆಗೆ ಬಂದಳು. ರಾಜನು ಮತ್ತು ಅವನ ಅಧಿಕಾರಿಗಳು ಆಡುತ್ತಿದ್ದ ಮಾತುಗಳನ್ನು ಕೇಳಿ ಅವಳು, “ರಾಜನೇ, ಚಿರಂಜೀವಿಯಾಗಿರು, ಭಯಪಡಬೇಡ. ಭಯದಿಂದ ನಿನ್ನ ಮುಖ ಅಷ್ಟೊಂದು ಬಿಳುಚಿಕೊಳ್ಳಲು ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅರಸನ ಮತ್ತು ಅವನ ಪ್ರಧಾನರ ಮಾತುಗಳನ್ನು ಕೇಳಿ ರಾಣಿಯು ಔತಣದ ಮನೆಗೆ ಬಂದಳು. ಆಗ ಮಾತನಾಡಿ, “ಅರಸನೇ, ನಿರಂತರವಾಗಿ ಬಾಳು! ನಿನ್ನ ಆಲೋಚನೆಗಳು ನಿನ್ನನ್ನು ಕಳವಳಪಡಿಸದಿರಲಿ. ನಿನ್ನ ಮುಖವು ಕಳೆಗುಂದದಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:10
10 ತಿಳಿವುಗಳ ಹೋಲಿಕೆ  

ರಾಜನಾದ ನೆಬೂಕದ್ನೆಚ್ಚರನಿಗೆ - ಅರಸೇ, ಚಿರಂಜೀವಿಯಾಗಿರು!


ಹೀಗೆ ಮುಖ್ಯಾಧಿಕಾರಿಗಳೂ ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ - ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!


ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ - ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು ಎಂದು ಅರಿಕೆಮಾಡಿದರು.


ದಾನಿಯೇಲನು ರಾಜನಿಗೆ - ಅರಸೇ, ಚಿರಂಜೀವಿಯಾಗಿರು!


ನೀವು ನನಗೆ ಮಾಡುವ ಆದರಣೆಯು ಎಷ್ಟು ವ್ಯರ್ಥವಾಗಿದೆ! ನಿಮ್ಮ ಉತ್ತರಗಳಲ್ಲಿ ಉಳಿದಿರುವದು ವಿುತ್ರದ್ರೋಹವೇ.


ನೀವಾದರೋ ಸುಳ್ಳನ್ನು ಮೆತ್ತುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥವೈದ್ಯರೇ.


ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲ ಬಾಳಲಿ ಎಂದಳು.


ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಲಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು