ದಾನಿಯೇಲ 6:15 - ಕನ್ನಡ ಸತ್ಯವೇದವು J.V. (BSI)15 ಇದನ್ನು ತಿಳಿದು ಆ ಜನರು ಸನ್ನಿಧಿಗೆ ಕೂಡಿಬಂದು - ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇದ್ಯಯರಲ್ಲಿಯೂ ಪಾರಸಿಯರಲ್ಲಿಯೂ ಉಂಟೆಂಬದು ನಿನಗೆ ಗೊತ್ತಿರಲಿ ಎಂದು ಹೇಳಲು ರಾಜನ ಅಪ್ಪಣೆಯಾಯಿತು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದನ್ನು ತಿಳಿದು ಆ ಜನರು ರಾಜನ ಬಳಿಗೆ ಕೂಡಿಬಂದು, “ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ, ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇದ್ಯಯರಲ್ಲಿಯೂ, ಪಾರಸಿಯರಲ್ಲಿಯೂ ಉಂಟೆಂಬುದು ನಿನಗೆ ಗೊತ್ತಿರಲಿ” ಎಂದು ಹೇಳಿದರು. ಇದರಿಂದ ಅನಿವಾರ್ಯವಾಗಿ ರಾಜನು ಅಪ್ಪಣೆ ಕೊಡಲೇ ಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇದನ್ನು ಅರಿತುಕೊಂಡ ಆ ಅಧಿಕಾರಿಗಳು ರಾಜಸನ್ನಿಧಿಗೆ ಮತ್ತೆ ಕೂಡಿಬಂದು, “ಪ್ರಭೂ, ರಾಜರು ವಿಧಿಸಿದ ಯಾವ ನಿಬಂಧನೆಯಾಗಲಿ, ಶಾಸನವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರ ಮೇದ್ಯರಲ್ಲೂ ಪರ್ಷಿಯರಲ್ಲೂ ಉಂಟೆಂಬುದು ತಮಗೆ ತಿಳಿದಿರಬೇಕು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಅವರು ಗುಂಪಾಗಿ ಅರಸನ ಬಳಿಗೆ ಹೋಗಿ, “ಅರಸನೇ, ನೆನಪಿಡು, ಮೇದ್ಯಯರ ಮತ್ತು ಪಾರಸಿಯರ ಶಾಸನದ ಪ್ರಕಾರ ಅರಸನ ಹಸ್ತಾಕ್ಷರದೊಂದಿಗೆ ಹೊರಡಿಸಿದ ರಾಜಾಜ್ಞೆಯನ್ನು ಎಂದಿಗೂ ರದ್ದುಗೊಳಿಸಲಾಗುವುದಿಲ್ಲ; ಅದರಲ್ಲಿ ಬದಲಾವಣೆ ಮಾಡಲಾಗುವುದಿಲ್ಲ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿಬಂದು ಅರಸನಿಗೆ, “ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ, ಆಜ್ಞೆಯಾದರೂ ರದ್ದಾಗಬಾರದು ಎಂಬ ಮೇದ್ಯ ಮತ್ತು ಪಾರಸಿಯರ ನಿಯಮದಲ್ಲಿದೆ ಎಂದು ನಿನಗೆ ತಿಳಿದಿರಬೇಕು,” ಎಂದರು. ಅಧ್ಯಾಯವನ್ನು ನೋಡಿ |