Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:16 - ಕನ್ನಡ ಸತ್ಯವೇದವು J.V. (BSI)

16 ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ - ನೀನು ನಿತ್ಯವೂ ಭಜಿಸುವ ದೇವರು ನಿನ್ನನ್ನುದ್ಧರಿಸಲಿ ಎಂದು ಹರಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ರಾಜನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟನು. ಅವರು ದಾನಿಯೇಲನನ್ನು ಸಿಂಹಗಳ ಗುಹೆಯಲ್ಲಿ ಎಸೆದರು. ಅರಸನು ದಾನಿಯೇಲನಿಗೆ, “ನೀನು ಸೇವೆ ಮಾಡುತ್ತಲೇ ಇರುವ ದೇವರು ನಿನ್ನನ್ನು ರಕ್ಷಿಸುವನೆಂದು ನನಗೆ ಗೊತ್ತಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:16
28 ತಿಳಿವುಗಳ ಹೋಲಿಕೆ  

ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.


ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಯೆಹೋವನೇ ಕೆಡುಕರಿಗೆ ಮುಯ್ಯಿತೀರಿಸಲಿ ಎಂದು ಹೇಳಿದನು.


ಅರಸೇ, ನಾವು ಸೇವಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಆವಿಗೆಯೊಳಗಿಂದ, ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು


ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದಾದರೆ ಮರಣದಂಡನೆಯನ್ನು ಬೇಡವೆನ್ನುವದಿಲ್ಲ. ಇವರು ನನ್ನ ಮೇಲೆ ಹೊರಿಸುವ ತಪ್ಪುಗಳಲ್ಲಿ ಒಂದೂ ನಿಜವಲ್ಲದ ಮೇಲೆ ಇವರ ಮೇಲಣ ದಯೆಯಿಂದ ನನ್ನನ್ನು ಒಪ್ಪಿಸಿಕೊಡುವದಕ್ಕೆ ಒಬ್ಬರಿಗೂ ಅಧಿಕಾರವಿಲ್ಲ. ನಾನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎನ್ನಲು


ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವದೇ ಹೊರತು ಒಳ್ಳೇ ಕೆಲಸ ಮಾಡುವವನಿಗೆ ಭಯವೇನೂ ಇಲ್ಲ. ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೇದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗಳಿಕೆಯುಂಟಾಗುವದು;


ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞಾರೂಪವಾಗಿ ವಿಧಿಸುವದು ಒಳ್ಳೇದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ ನಾಯಕ ದೇಶಾಧಿಪತಿ ಮಂತ್ರಿ ಸಂಸ್ಥಾನಾಧ್ಯಕ್ಷರೂ ಆಲೋಚನೆಮಾಡಿಕೊಂಡಿದ್ದಾರೆ.


ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.


ಅದಕ್ಕೆ ಅರಸನಾದ ಚಿದ್ಕೀಯನು - ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡ ಬಂದು ಏನೂ ಮಾಡಬಲ್ಲವನಲ್ಲ ಎಂದು ಹೇಳಲು


ನಾನೋ ನಿಮ್ಮ ಕೈಯಲ್ಲಿದ್ದೇನಲ್ಲಾ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವದನ್ನು ನನಗೆ ಮಾಡಿರಿ.


ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಪೌಲನನ್ನು - ನೀನು ಯೆರೂಸಲೇವಿುಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟವುಂಟೋ? ಎಂದು ಕೇಳಲು


ಎರಡು ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂಬ ಕೋರಿಕೆಯಿಂದ ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟುಹೋದನು.


ಆತನು ನಮ್ಮನ್ನು ಎಂಥ ಭಯಂಕರಮರಣದಿಂದ ತಪ್ಪಿಸಿದನು; ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವವರಾಗಿ ಸಹಕಾರಿಗಳಾಗಿರುವದರಿಂದ ಆತನು ಇನ್ನು ಮೇಲೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿವಿುತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವದು.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ದೊಸಕೊಂಡನು.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು