Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:22 - ಕನ್ನಡ ಸತ್ಯವೇದವು J.V. (BSI)

22 ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಆ ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:22
37 ತಿಳಿವುಗಳ ಹೋಲಿಕೆ  

ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು;


ಆಗ ಪೇತ್ರನು ಎಚ್ಚರವಾಗಿ - ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿದುಬಂದಿದೆ ಅಂದುಕೊಂಡನು.


ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ನಾನಂತು ಯೆಹೋವನನ್ನು ಎದುರು ನೋಡುವೆನು; ನನ್ನ ರಕ್ಷಕನಾದ ದೇವರನ್ನು ಕಾದುಕೊಳ್ಳುವೆನು; ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು,


ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.


ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ.


ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಗೂ ತಪ್ಪಿಸುವನು ಎನ್ನಲು ಸೌಲನು ದಾವೀದನಿಗೆ - ಹೋಗು; ಯೆಹೋವನು ನಿನ್ನ ಸಂಗಡ ಇರಲಿ ಎಂದು ಹೇಳಿ


ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೇಶದಿಂದ ಬಿಡುಗಡೆಮಾಡಿಸಿದ್ದೂ ಇದನ್ನೆಲ್ಲಾ ತಾವು ತಿಳಿದೇ ಇದ್ದೀರಷ್ಟೆ. ಈಗ ನಾವು ತಮ್ಮ ರಾಜ್ಯದ ಕಟ್ಟ ಕಡೆಯ ಹತ್ತಿರವಿರುವ ಕಾದೇಶೆಂಬ ಊರಲ್ಲಿದ್ದೇವೆ.


ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು -


ಅದನ್ನು ಕೇಳಿ ರಾಜನು ಬಹು ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಶಿಷ್ಟರಿಗೆ ಶುಭವೇ ಎಂದು ಹೇಳಿರಿ, ಅವರು ತಮ್ಮ ಸುಕೃತಫಲವನ್ನು ಅನುಭವಿಸುವರಷ್ಟೆ.


ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ; ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.


ಯೆಹೋವನೇ, ಕೈ ಬಿಡಬೇಡ; ನನ್ನ ದೇವರೇ, ದೂರವಾಗಿರಬೇಡ.


ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುತ್ತಾನೆ.


ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದನು; ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು


ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನ ಸನ್ನಿಧಿಗೆ ಕೇಳಿಸಿತು.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಸುಮಾರು ಮೂರು ಗಂಟೆಗೆ ಯೇಸು - ಏಲೀ, ಏಲೀ, ಲಮಾ ಸಬಕ್ತಾನೀ, ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.


ಯೆಹೋವನೇ, ನಾನು ನಿಷ್ಕಳಂಕನೆಂದು ಕೈಗಳನ್ನು ತೊಳೆದುಕೊಂಡವನಾಗಿ


ನನ್ನ ಸ್ವಾವಿುಯು ತನ್ನ ಸೇವಕನನ್ನು ಈ ಪ್ರಕಾರ ಹಿಂಸಿಸುವದೇಕೆ? ನಾನೇನು ಮಾಡಿದೆನು? ಯಾವ ಪಾಪಕ್ಕೆ ಕೈಹಾಕಿದೆನು?


ನಾನು ಇಬ್ರಿಯದೇಶಸ್ಥನು; ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನೇನೂ ತಪ್ಪಿಲ್ಲದವನಾಗಿ ಸೆರೆಯಲ್ಲಿ ಬಿದ್ದೆನು ಅಂದನು.


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ - ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ ನಿನ್ನ ಸೇವಕರಿಗಾಗಲಿ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?


ಹೀಗಿರಲು ಮುಖ್ಯಾಧಿಕಾರಿಗಳೂ ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು; ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ ಯಾವ ತಪ್ಪನ್ನೂ ಕಾಣಲಾರದೆ ಹೋದರು; ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ ಅಕ್ರಮವಾಗಲಿ ಸಿಕ್ಕಲಿಲ್ಲ.


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞಾರೂಪವಾಗಿ ವಿಧಿಸುವದು ಒಳ್ಳೇದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ ನಾಯಕ ದೇಶಾಧಿಪತಿ ಮಂತ್ರಿ ಸಂಸ್ಥಾನಾಧ್ಯಕ್ಷರೂ ಆಲೋಚನೆಮಾಡಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು