Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:8 - ಕನ್ನಡ ಸತ್ಯವೇದವು J.V. (BSI)

8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ನಿಂತುಹೋಗದೆ ಮೇದ್ಯಯರ ಮತ್ತು ಪಾರಸಿಯರ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಊರ್ಜಿತವಾಗುವಂತೆ ಶಾಸನಕ್ಕೆ ಹಸ್ತಾಕ್ಷರಮಾಡು ಎಂದು ಬಿನ್ನವಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ರಾಜರೇ, ಈ ಶಾಸನಕ್ಕೆ ನೀವು ಇದೀಗಲೇ ಹಸ್ತಾಕ್ಷರಗಳಿಂದ ರುಜುಹಾಕಬೇಕು. ಆಗ ಅದು ಮೇದ್ಯದ ಮತ್ತು ಪರ್ಷಿಯದ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದೆ ಊರ್ಜಿತವಾಗುವುದು,” ಎಂದು ವಿನಂತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅರಸನೇ, ಈ ನಿಬಂಧನೆಯನ್ನು ಬರೆದ ಕಾಗದಕ್ಕೆ ನಿನ್ನ ಹಸ್ತಾಕ್ಷರ ಹಾಕಿ ಅದನ್ನು ಶಾಸನವನ್ನಾಗಿ ಮಾಡು. ಹೀಗೆ ಮಾಡಿದರೆ ಶಾಸನವನ್ನು ಬದಲಾಯಿಸಲಾಗುವುದಿಲ್ಲ. ಏಕೆಂದರೆ ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ಎಂದಿಗೂ ರದ್ದಾಗುವದಿಲ್ಲ ಮತ್ತು ಅವುಗಳನ್ನು ಬದಲಾಯಿಸಲಾಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:8
11 ತಿಳಿವುಗಳ ಹೋಲಿಕೆ  

ಇದನ್ನು ತಿಳಿದು ಆ ಜನರು ಸನ್ನಿಧಿಗೆ ಕೂಡಿಬಂದು - ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇದ್ಯಯರಲ್ಲಿಯೂ ಪಾರಸಿಯರಲ್ಲಿಯೂ ಉಂಟೆಂಬದು ನಿನಗೆ ಗೊತ್ತಿರಲಿ ಎಂದು ಹೇಳಲು ರಾಜನ ಅಪ್ಪಣೆಯಾಯಿತು;


ಅರಸನು ಸಮ್ಮತಿಸುವದಾದರೆ ವಷ್ಟಿಯು ತಿರಿಗಿ ಅಹಷ್ವೇರೋಷ್‍ರಾಜನ ಸನ್ನಿಧಿಗೆ ಬರಲೇಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಾಕೆಗೆ ಕೊಡಲಿ.


ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ - ರಾಜನೇ, ಯಾವನಾದರೂ ಮೂವತ್ತು ದಿನಗಳ ತನಕ ನಿನಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ವಿಜ್ಞಾಪನೆಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದಿಯಲ್ಲಾ ಎಂದು ಕೇಳಲು ರಾಜನು - ಹೌದು, ಮೇದ್ಯಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರ ಎಂದು ಉತ್ತರಕೊಟ್ಟನು.


ಅಯ್ಯೋ, ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ ನನ್ನ ಜನರಲ್ಲಿನ ದರಿದ್ರರಿಗೆ ನ್ಯಾಯವನ್ನು ತಪ್ಪಿಸಬೇಕೆಂತಲೂ ವಿಧವೆಯರನ್ನು ಸೂರೆಮಾಡಿ ಅನಾಥರನ್ನು ಕೊಳ್ಳೆಹೊಡೆಯಬೇಕೆಂತಲೂ


ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಅವುಗಳಿಗೆ ರಾಜಮುದ್ರೆಯನ್ನು ಹಾಕಿ ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮುಖಾಂತರ ಕಳುಹಿಸಿದನು.


ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯೂ ಇತ್ತು.


ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಕೂಡದಷ್ಟೆ. ಹೀಗಿರುವದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವದನ್ನು ಅರಸನ ಹೆಸರಿನಲ್ಲಿ ನೀವು ಬರೆಯಿಸಿ ರಾಜ ಮುದ್ರೆಯನ್ನು ಹಾಕಿರಿ ಎಂದು ಹೇಳಿದನು.


ಎಸ್ತೇರಳು ತಿರಿಗಿ ಅರಸನನ್ನು ಮಾತಾಡಿಸುವದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು ಅತ್ತು - ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ಅಪಾಯಗಳನ್ನು ನಿವಾರಿಸಬೇಕೆಂದು ವಿಜ್ಞಾಪಿಸಲು


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.


ಫೆರೇಸ್ ಅಂದರೆ ನಿನ್ನ ರಾಜ್ಯವು ಭಿನ್ನವಾಗಿ ಮೇದ್ಯಯರಿಗೂ ಪಾರಸಿಯರಿಗೂ ಕೊಡಲ್ಪಟ್ಟಿದೆ ಎಂದು ಅರಿಕೆಮಾಡಿದನು.


ಜೀವತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು