Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:1 - ಕನ್ನಡ ಸತ್ಯವೇದವು J.V. (BSI)

1 ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಿಗೆ ಹಾಸಿಗೆಯ ಮೇಲೆ ಸ್ವಪ್ನವಾಯಿತು, ಅವನ ಮನಸ್ಸಿನಲ್ಲಿ ಕನಸುಬಿತ್ತು; ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಒಂದು ಕನಸು ಕಂಡನು. ಅವನ ಮನಸ್ಸಿಗೆ ಒಂದು ದೃಶ್ಯ ಕಾಣಿಸಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ಈ ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಕನಸನ್ನೂ, ದರ್ಶನಗಳನ್ನೂ ಕಂಡು, ತನ್ನ ಕನಸಿನ ತಾತ್ಪರ್ಯವನ್ನು ಬರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:1
34 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ರಹಸ್ಯವನ್ನು ತಿಳಿಸದೆ ಏನೂ ಮಾಡನು.


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು, ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;


ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಮಾಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.


ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲಶಾಸ್ತ್ರಗಳಲ್ಲಿಯೂ ವಿದ್ಯೆಗಳಲ್ಲಿಯೂ ಜ್ಞಾನ ವಿವೇಕಗಳನ್ನು ದಯಪಾಲಿಸಿದನು; ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಗ್ರಹಿಸುವದರಲ್ಲಿ ಪ್ರವೀಣನಾದನು.


ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.


ಆದದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.


ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು - ನಿನಗಾದ ದರ್ಶನವನ್ನು ಬರೆ; ಓದುವವರು ಶೀಘ್ರವಾಗಿ ಓದುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತು.


ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು, ಅವನನ್ನು ಆತನ ಸನ್ನಿಧಿಗೆ ತಂದರು.


ನೆಬೂಕದ್ನೆಚ್ಚರನು ತನ್ನ ಆಳಿಕೆಯ ಎರಡನೆಯ ವರುಷದಲ್ಲಿ ಕನಸುಕಂಡು ತತ್ತರಗೊಂಡನು,


ಅವರು ಬಂದಾಗ ಆತನು - ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಕಾಣಿಸಿಕೊಳ್ಳುವೆನು, ಇಲ್ಲವೆ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಅಲ್ಲಿ ದೇವರು ರಾತ್ರಿಯ ಸ್ವಪ್ನದಲ್ಲಿ ಇಸ್ರಾಯೇಲನನ್ನು - ಯಾಕೋಬನೇ, ಯಾಕೋಬನೇ ಎಂದು ಕರೆಯಲು, ಅವನು - ಇದ್ದೇನೆ ಅಂದನು.


ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ - ಆ ಏಳು ಗುಡುಗುಗಳು ನುಡಿದದ್ದನ್ನು ನೀನು ಬರೆಯದೆ ಗುಪ್ತವಾಗಿಡು ಎಂದು ಹೇಳುವ ಆಕಾಶವಾಣಿಯನ್ನು ಕೇಳಿದೆನು.


ಹೊಗಳಿಕೊಳ್ಳುವದು ವಿಹಿತವಲ್ಲದಿದ್ದರೂ ಅದು ನನಗೆ ಅವಶ್ಯವಾಗಿದೆ. ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನು ಕುರಿತೂ ತಿಳಿಯಪಡಿಸಿದ ರಹಸ್ಯಗಳನ್ನು ಕುರಿತೂ ಹೇಳುತ್ತೇನೆ.


ಪೂರ್ವದಲ್ಲಿ ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಗ್ರಂಥಗಳು ಬರೆಯಲ್ಪಟ್ಟವು.


ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳಿಕೆಯ ಮೂರನೆಯ ವರುಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು.


ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರ, ಹೆದರಿಸುವಂಥದು, ಅಧಿಕಬಲವುಳ್ಳದ್ದು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು; ಅದು ನುಂಗುತ್ತಾ ಚೂರುಚೂರು ಮಾಡುತ್ತಾ ವಿುಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು; ಅದು ಮುಂಚಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು; ಅದಕ್ಕೆ ಹತ್ತು ಕೊಂಬುಗಳಿದ್ದವು.


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ;


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ಸೇರಿಕೊಂಡಿರುವಾಗ ಮೂವತ್ತನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ಒಡೆದು ನನಗೆ ದೇವದರ್ಶನಗಳು ಉಂಟಾದವು.


ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ನುಡಿಯಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರಳಿಯಲ್ಲಿ ಬರೆದನು.


ಅವನ ದೇಶಕ್ಕೆ ಕಾಲವು ಹತ್ತರಿಸುವ ತನಕ ಸಕಲ ಜನಾಂಗಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.


[ಯೆಹೋವನು ನನಗೆ ಹೀಗೆ ಹೇಳಿದನು] - ನೀನೀಗ ಮನೆಗೆ ಹೋಗಿ ಈ ಮಾತು ಮುಂದಿನ ಕಾಲದಲ್ಲಿ ಶಾಶ್ವತ ಸಾಕ್ಷಿಯಾಗಿರುವಂತೆ ಇವರೆದುರಿಗೆ ಹಲಿಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ.


ಆಮೇಲೆ ಯೆಹೋವನು ನನಗೆ - ದೊಡ್ಡ ಹಲಿಗೆಯನ್ನು ತೆಗೆದುಕೊಂಡು ಸಾಧಾರಣ ಲಿಪಿಯಿಂದಲೇ ವಿಷಯಸೂಚಕವಾದ ಈ ಪದವನ್ನು ಬರೆ - ಮಹೇರ್ ಶಾಲಾಲ್ ಹಾಷ್ ಬಜ್ [ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ];


ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ ನನಗೆ


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ಆಗ ಯೆರೆಮೀಯನು ಇನ್ನೊಂದು ಸುರಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂಥಾ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.


ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂತು. ತೆಂಕಲಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡವು ಕಾಣಿಸಿತು.


ರಾಜನು ಬೇಲ್ತೆಶಚ್ಚರನೆಂಬ ಅಡ್ಡ ಹೆಸರಿನ ದಾನಿಯೇಲನನ್ನು - ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸಬಲ್ಲೆಯಾ ಎಂದು ಕೇಳಿದನು.


ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ಅನಿವಿುಷನಾದ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು