Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:18 - ಕನ್ನಡ ಸತ್ಯವೇದವು J.V. (BSI)

18 ಆದರೆ ರಾಜ್ಯವು ಪರಾತ್ಪರನ ಭಕ್ತರಿಗೆ ಲಭಿಸುವದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ದೇವರ ವಿಶೇಷ ಜನರಿಗೆ ಆ ಸಾಮ್ರಾಜ್ಯಗಳು ದೊರೆಯುವವು. ಅವರು ಆ ಸಾಮ್ರಾಜ್ಯವನ್ನು ಶಾಶ್ವತವಾಗಿ ಅನುಭವಿಸುವರು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:18
21 ತಿಳಿವುಗಳ ಹೋಲಿಕೆ  

ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿ; ಅವರು ಭೂವಿುಯ ಮೇಲೆ ಆಳುವರು ಎಂದು ಹೇಳಿದರು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.


ಮಹಾವೃದ್ಧನು ಅಯ್ತಂದು ಪರಾತ್ಪರನ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದು ಕಣ್ಣುಳ್ಳದ್ದಾಗಿ ಬಾಯಿಂದ ಬಡಾಯಿಕೊಚ್ಚಿಕೊಳ್ಳುತ್ತಾ ವಿುಕ್ಕ ಕೊಂಬುಗಳಿಗಿಂತ ಬಿರಸಾಗಿ ನೋಡುತ್ತಾ ಇತ್ತೋ ಆ ಕೊಂಬಿನ ವಿಷಯವಾಗಿಯೂ ಸತ್ಯಾರ್ಥವನ್ನು ತಿಳಿದುಕೊಳ್ಳಬೇಕೆಂದು ಅಪೇಕ್ಷಿಸಿ ವಿಚಾರಿಸಿದೆನು.


[ಅರಸನೇ,] ವಂಶಪಾರಂಪರ್ಯವಾಗಿ ಬಂದ ಸ್ಥಾನದಲ್ಲಿರುವದಕ್ಕೆ ನಿನಗೆ ಮಕ್ಕಳು ಹುಟ್ಟುವರು; ಅವರನ್ನು ದೇಶದಲ್ಲೆಲ್ಲಾ ಅಧಿಕಾರಿಗಳನ್ನಾಗಿ ನೇವಿುಸುವಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ನಾವು ಹೋರಾಡುವದು ಮನುಷ್ಯ ಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.


ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.


ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬದು ನಿಮಗೆ ತಿಳಿಯದೋ? ಲೋಕವು ನಿವ್ಮಿುಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವದಕ್ಕೆ ಅಯೋಗ್ಯರಾಗಿದ್ದೀರೋ?


ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗುವದಿಲ್ಲ; ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು; ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು.


ಜನಾಂಗದವರು ಅವರನ್ನು ಕರತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡುಹೆಣ್ಣಾಳುಗಳನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡಿಸುವರು.


ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ಅವನು ನನಗೆ - ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು;


ಪರಾತ್ಪರನಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನ ಭಕ್ತರನ್ನು ಸವೆಯಿಸಿ ಕಟ್ಟಳೆಯ ಕಾಲಗಳನ್ನೂ ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸುಮಾಡುವನು; ಆ ಭಕ್ತರು ಒಂದುಕಾಲ ಎರಡುಕಾಲ ಅರ್ಧಕಾಲ ಅವನ ಕೈವಶವಾಗಿರುವರು.


ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು; ಆ ಪರ್ವತವು ಮೀಸಲಾಗಿರುವದು; ಯಾಕೋಬನ ವಂಶದವರು ತಮ್ಮ ಸ್ವಾಸ್ತ್ಯಗಳನ್ನು ಅನುಭವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು