Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:24 - ಕನ್ನಡ ಸತ್ಯವೇದವು J.V. (BSI)

24 ಆ ಹತ್ತು ಕೊಂಬುಗಳ ವಿಷಯವೇನಂದರೆ ಆ ರಾಜ್ಯದಲ್ಲಿ ಹತ್ತುಮಂದಿ ಅರಸರು ಉಂಟಾಗುವರು; ಅವರ ತರುವಾಯ ಮತ್ತೊಬ್ಬನು ತಲೆದೋರುವನು; ಅವನು ಮುಂಚಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಅದುವಿುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಹತ್ತು ಕೊಂಬುಗಳ ವಿಷಯವೇನೆಂದರೆ ಆ ರಾಜ್ಯದಲ್ಲಿ ಹತ್ತು ಮಂದಿ ಅರಸರು ಉಂಟಾಗುವರು, ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮೊದಲಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಸದೆಬಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ಹತ್ತು ಕೊಂಬುಗಳು ಅದೇ ರಾಜ್ಯವನ್ನು ಆಳುವ ಹತ್ತುಮಂದಿ ಅರಸರು. ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮುಂಚಿನ ಅರಸರಿಗಿಂತ ವಿಲಕ್ಷಣವಾಗಿರುವನು, ಆ ಮೂವರು ಅರಸರನ್ನು ಸದೆಬಡಿದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಹತ್ತು ಕೊಂಬುಗಳು ಈ ನಾಲ್ಕನೆಯ ರಾಜ್ಯದ ಹತ್ತು ಜನ ಅರಸರನ್ನು ಸೂಚಿಸುತ್ತವೆ. ಆ ಹತ್ತು ಜನ ಅರಸರ ತರುವಾಯ ಮತ್ತೊಬ್ಬ ಅರಸನು ಬರುವನು. ಅವನು ತನಗಿಂತಲೂ ಮುಂಚೆ ರಾಜ್ಯಭಾರ ಮಾಡಿದ ಅರಸರಿಗಿಂತ ಭಿನ್ನನಾಗಿರುವನು. ಅವನು ಬೇರೆ ಅರಸರುಗಳಲ್ಲಿ ಮೂವರನ್ನು ಸೋಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆ ಹತ್ತು ಕೊಂಬುಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸರು. ಅನಂತರ ಇನ್ನೊಬ್ಬ ಅರಸನು ಹುಟ್ಟುವನು. ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:24
13 ತಿಳಿವುಗಳ ಹೋಲಿಕೆ  

ನಾಲ್ಕನೆಯ ಮೃಗದ ವಿಷಯವಾಗಿಯೂ ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ


ಸಮುದ್ರದಿಂದ ಮೃಗವು ಏರಿಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಮಕುಟಗಳೂ ತಲೆಗಳ ಮೇಲೆ ದೇವದೂಷಣನಾಮಗಳೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು;


ರಾಜನು ಮನಸ್ಸುಬಂದ ಹಾಗೆ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಉಬ್ಬಿ ದೇವಾಧಿದೇವನನ್ನು ವಿುತಿಮೀರಿ ದೂಷಿಸಿ [ನಿಮ್ಮ ಮೇಲಿನ] ದೇವೋಗ್ರವು ತೀರುವ ತನಕ ವೃದ್ಧಿಯಾಗಿರುವನು; ದೈವಸಂಕಲ್ಪವು ನೆರವೇರಲೇಬೇಕು.


ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು. ಅಲ್ಲಿ ನಾನು ರಕ್ತವರ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು; ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ತುಂಬಿದ್ದವು.


ಅದೇನಂದರೆ ಕೆಂಪಾದ ಮಹಾ ಘಟಸರ್ಪವಿತ್ತು; ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಮಕುಟಗಳಿದ್ದವು.


ಆಗ ಅವನು ನನಗೆ - ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ವಿುಕ್ಕ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವದು.


ಹೆಜ್ಜೆಗಳಲ್ಲಿ ಮತ್ತು ಬೆರಳುಗಳಲ್ಲಿ ಒಂದಂಶವು ಕುಂಬಾರನ ಮಣ್ಣೂ ಒಂದಂಶವು ಕಬ್ಬಿಣವೂ ಆಗಿದ್ದದ್ದನ್ನು ನೀನು ನೋಡಿದ ಪ್ರಕಾರ ಆ ರಾಜ್ಯವು ಭಿನ್ನಭಿನ್ನವಾಗಿರುವದು; ಜೇಡಿಮಣ್ಣಿನೊಂದಿಗೆ ಕಬ್ಬಿಣವು ವಿುಶ್ರವಾಗಿದ್ದದ್ದನ್ನು ನೀನು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲವು ಸೇರಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು