Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:25 - ಕನ್ನಡ ಸತ್ಯವೇದವು J.V. (BSI)

25 ಪರಾತ್ಪರನಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನ ಭಕ್ತರನ್ನು ಸವೆಯಿಸಿ ಕಟ್ಟಳೆಯ ಕಾಲಗಳನ್ನೂ ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸುಮಾಡುವನು; ಆ ಭಕ್ತರು ಒಂದುಕಾಲ ಎರಡುಕಾಲ ಅರ್ಧಕಾಲ ಅವನ ಕೈವಶವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ ಅವನ ಕೈವಶವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:25
36 ತಿಳಿವುಗಳ ಹೋಲಿಕೆ  

ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಗರುಡಪಕ್ಷಿಯ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಒಂದು ಕಾಲ, ಎರಡು ಕಾಲ, ಅರ್ಧಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.


ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ಆಕಾಶದ ಕಡೆಗೆ ಎತ್ತಿಕೊಂಡು - ಶಾಶ್ವತ ಜೀವಸ್ವರೂಪನಾಣೆ, ಒಂದುಕಾಲ ಎರಡುಕಾಲ ಅರ್ಧಕಾಲ ಕಳೆಯಬೇಕು; ದೇವರ ಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು ಎಂಬದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರುವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ಪ್ರವಾದಿಗಳ ರಕ್ತವೂ ದೇವಜನರ ರಕ್ತವೂ ಭೂವಿುಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.


ನಾಲ್ಕನೆಯ ಮೃಗದ ವಿಷಯವಾಗಿಯೂ ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!


ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಲ್ಲಿ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದರ ದೆಸೆಯಿಂದ ಮುಂಚಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು; ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.


ಆ ಸ್ತ್ರೀಯು ದೇವಜನರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿ ಕೊಟ್ಟು ಹತರಾದವರ ರಕ್ತವನ್ನೂ ಕುಡಿದು ಮತ್ತಳಾಗಿರುವದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ತೋರಿಬರುತ್ತದೆ.


ಅನಂತರ ಉತ್ತರರಾಜನು ಬಹು ಆಸ್ತಿಯನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು; ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವದು; ಅವನು ಮಾಡುವಷ್ಟು ಮಾಡಿ ಮತ್ತೆ ಸ್ವದೇಶವನ್ನು ಸೇರುವನು.


ಅವರು ದೇವಜನರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ; ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ಕೇಳಿದೆನು.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲು ಮೇಯುವದೇ ನಿನಗೆ ಗತಿಯಾಗುವದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನಗೆ ತಿಳಿದುಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು.


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡುಮೃಗಗಳೊಂದಿಗೆ ವಾಸಿಸುವಿ, ದನಗಳಂತೆ ಹುಲ್ಲುಮೇಯುವದೇ ನಿನಗೆ ಗತಿಯಾಗುವದು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬದು ನಿನ್ನ ತಿಳುವಳಿಕೆಗೆ ಬರುವದರೊಳಗೆ ಏಳು ವರುಷ ನಿನಗೆ ಹೀಗೆ ಕಳೆಯುವದು ಎಂದು ಆಕಾಶವಾಣಿಯಾಯಿತು.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ; ಯಾಕಂದರೆ ಮೊದಲು ಮತಭ್ರಷ್ಟತೆಯು ಉಂಟಾಗಿ ಅಧರ್ಮಸ್ವರೂಪನು ಬೈಲಿಗೆ ಬಂದ ಹೊರತು ಆ ದಿನವು ಬರುವದಿಲ್ಲ.


ಅವನು ತೆಗೆದುಬಿಡಲ್ಪಟ್ಟ ಕೂಡಲೆ ಆ ಅಧರ್ಮಸ್ವರೂಪನು ಕಾಣಬರುವನು; ಅವನನ್ನು ಯೇಸು ಕರ್ತನು ತನ್ನ ಬಾಯ ಉಸುರಿನಿಂದ ಕೊಲ್ಲುವನು, ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ಸಂಹರಿಸುವನು.


ಧಗಧಗನೆ ಉರಿಯುವ ಆವಿಗೆಯ ಬಾಯಿಯ ಬಳಿಗೆ ಹೋಗಿ - ಪರಾತ್ಪರದೇವರ ಸೇವಕರಾದ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರೇ ಬನ್ನಿ, ಹೊರಗೆ ಬನ್ನಿ, ಎಂದು ಕೂಗಲು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರು ಬೆಂಕಿಯೊಳಗಿಂದ ಹೊರಟು ಬಂದರು.


ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಪರಾತ್ಪರದೇವರು ನನ್ನ ವಿಷಯದಲ್ಲಿ ನಡಿಸಿರುವ ಮಹತ್ತುಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬದು ನನಗೆ ವಿಹಿತವಾಗಿ ತೋರಿಬಂದಿದೆ.


ಇದು ಅನಿವಿುಷರ ತೀರ್ಮಾನ, ದೇವರ ತೀರ್ಪು; ಪರಾತ್ಪರನು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇವಿುಸುತ್ತಾನೆಂಬದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು ಎಂದು ಸಾರಿದನು.


ಆದರೆ ರಾಜ್ಯವು ಪರಾತ್ಪರನ ಭಕ್ತರಿಗೆ ಲಭಿಸುವದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ಅವನು ಇವನಿಗೆ - ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರರವರೆಗೆ ನಡೆಯುವವು; ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆಯಾಗುವದು ಎಂದು ಹೇಳಿದನು.


ಅತ್ತಿತ್ತ ತಿರುಗಿಕೊಳ್ಳುತ್ತಾರೆ, ಮೇಲಕ್ಕೆ ಮಾತ್ರ ತಿರುಗಿಕೊಳ್ಳುವದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ; ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿವಿುತ್ತ ಖಡ್ಗಹತರಾಗಿ ಬೀಳುವರು; ಅವರ ಪತನವು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವದು.


ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ತೆಂಕಲಲ್ಲಿಯೂ ಮೂಡಲಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.


ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿ


ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧವಾರ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತಪ್ರಲಯವು ಅವನನ್ನು ಮುಣುಗಿಸುವ ತನಕ ಹಾಳುಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು