Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:13 - ಕನ್ನಡ ಸತ್ಯವೇದವು J.V. (BSI)

13 ಆಗ ಒಬ್ಬ ದೇವದೂತನು ಮಾತಾಡುವದನ್ನು ಕೇಳಿದೆನು; ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ - ನಿತ್ಯಹೋಮವನ್ನು ನಿಲ್ಲಿಸುವದು, ಭಯಂಕರವಾದ ದೇವದ್ರೋಹಮಾಡುವದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವವು ಎಂದು ಪ್ರಶ್ನೆ ಮಾಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಮೇಲೆ ಒಬ್ಬ ಪರಿಶುದ್ಧನು ಮಾತನಾಡುವುದನ್ನು ಕೇಳಿದೆನು. ಮಾತನಾಡಿದ ಆತನಿಗೆ ಮತ್ತೊಬ್ಬ ಪರಿಶುದ್ಧನು, “ನಿತ್ಯ ಯಜ್ಞವನ್ನು ನಿಲ್ಲಿಸುವುದೂ, ಹಾಳುಮಾಡುವ ಅಪರಾಧವನ್ನು ತಡೆಯುವುದೂ, ಪರಿಶುದ್ಧ ಸ್ಥಳವನ್ನೂ, ಯೆಹೋವ ದೇವರ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವ ಈ ದರ್ಶನ ನೆರವೇರಲು ಎಷ್ಟು ಕಾಲ ಬೇಕಾಗುವುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:13
38 ತಿಳಿವುಗಳ ಹೋಲಿಕೆ  

ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಅದು ಅನ್ಯಜನರಿಗಾಗಿ ಬಿಟ್ಟದೆ; ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.


ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧವಾರ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತಪ್ರಲಯವು ಅವನನ್ನು ಮುಣುಗಿಸುವ ತನಕ ಹಾಳುಮಾಡುವನು.


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ ನಿತ್ಯಹೋಮವನ್ನು ನೀಗಿಸಿ ಹಾಳುಮಾಡುವ ಅಸಹ್ಯ ವಸ್ತುವನ್ನು ಪ್ರತಿಷ್ಠಿಸುವದು.


ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ಅನಿವಿುಷನಾದ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ -


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.


ನಮ್ಮ ಕರ್ತನಾದ ಯೇಸು ನಿಮ್ಮ ಹೃದಯಗಳನ್ನು ದೃಢಪಡಿಸಿ ತನ್ನ ಎಲ್ಲಾ ಪರಿಶುದ್ಧ ಪರಿವಾರ ಸಮೇತ ಪ್ರತ್ಯಕ್ಷನಾದಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.


ಆದರೆ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳುಕೊಳ್ಳಿರಿ.


ಇದಲ್ಲದೆ ಹಾಳುಮಾಡುವ ಅಸಹ್ಯ ವಸ್ತುವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ) ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ.


ಆದದರಿಂದ ಪ್ರವಾದಿಯಾದ ದಾನಿಯೇಲನು ಹೇಳಿದಂಥ ಹಾಳುಮಾಡುವ ಅಸಹ್ಯ ವಸ್ತುವು ಪವಿತ್ರಸ್ಥಾನದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ)


ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ [ನಿನ್ನ ಸ್ವಾಸ್ತ್ಯವನ್ನು] ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ನಿನ್ನ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ.


ಅದಕ್ಕೆ ನಾನು - ಕರ್ತನೇ, ಇದು ಎಂದಿನ ತನಕ? ಎಂದು ಕೇಳಲು ಆತನು - ಯೆಹೋವನು ಜನರನ್ನು ದೂರ ತೊಲಗಿಸಿ


ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲೇ ಇರಬೇಕೋ?


ಇಂಥವರ ವಿಷಯದಲ್ಲೇ ಆದಾಮನಿಗೆ ಏಳನೆಯ ತಲೆಯವನಾದ ಹನೋಕನು - ಇಗೋ ಕರ್ತನು ಲಕ್ಷಾಂತರ ಪರಿಶುದ್ಧದೂತರನ್ನು ಕೂಡಿಕೊಂಡು


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.


ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಕ್ಕೆ ಓಡಿಹೋಗುವಿರಿ; ಏಕಂದರೆ ಆ ಡೊಂಗರವು ಆಚೆಲಿಗೆ ಮುಟ್ಟಿರುವದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ನನ್ನ ದೇವರಾದ ಯೆಹೋವನು ಸಮಸ್ತ ದೇವದೂತಸಮೇತ ಬರುವನು.


ವಿವರಿಸುವ ದೂತನನ್ನು ಕುರಿತು ಇವು ಏನು ಎಂದು ನಾನು ಕೇಳಿದ್ದಕ್ಕೆ ಅವನು - ಇವು ಯೆಹೂದ ಇಸ್ರಾಯೇಲು ಯೆರೂಸಲೇಮುಗಳನ್ನು ಚದರಿಸಿರುವ ಕೊಂಬುಗಳು ಎಂದು ಉತ್ತರಕೊಟ್ಟನು.


ನಿತ್ಯಹೋಮವು ನೀಗಿಸಲ್ಪಟ್ಟು ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತೊಂಭತ್ತು ದಿನಗಳು ಕಳೆಯಬೇಕು.


ಆಗ ಅವನು ನನಗೆ - ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ವಿುಕ್ಕ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವದು.


ನಾನು ಹತ್ತಿರ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸತ್ಯಾರ್ಥವೇನೆಂದು ವಿಚಾರಿಸಲು


ಅನಿವಿುಷನಾದ ದೇವದೂತನು ಆಕಾಶದಿಂದಿಳಿದು - ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರುಷ ಕಳೆಯುವ ತನಕ ಕಾಡುಮೃಗಗಳ ಸಹವಾಸದ ಗತಿಯು ಬರಲಿ ಎಂದು ಸಾರುವದನ್ನು ರಾಜನಾದ ನೀನು ನೋಡಿದಿಯಲ್ಲಾ;


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ನಮ್ಮ ಆರಾಧನಾಚಿಹ್ನೆಗಳು ಈಗ ಕಾಣುವದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.


ಯೆಹೋವನ ದೂತನು - ನನ್ನ ಹೆಸರನ್ನು ಕೇಳುವದೇಕೆ? ಅದು ಆಶ್ಚರ್ಯಕರವಾದದ್ದು ಅಂದನು.


ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಹೊಳೆದು ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಇಂಥವನೆಂದು ತಂದೆಯೇ ಹೊರತು ಇನ್ಯಾವನೂ ತಿಳಿದವನಲ್ಲ; ತಂದೆ ಇಂಥವನೆಂದು ಮಗನೇ ಹೊರತು ಇನ್ನಾವನೂ ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ ಅಂದನು.


ದೇವರೇ, ವಿರೋಧಿಗಳು ಇನ್ನೆಲ್ಲಿಯತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?


ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವದು.


ಬಹುಮಂದಿ ಮಂದೆಗಾರರು ನನ್ನ ತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವಾಸ್ತ್ಯವನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.


ನನಗೆ ಕೇಳಿಸಿದರೂ ಅರ್ಥವಾಗಲಿಲ್ಲ; ಆಗ ನಾನು - ಎನ್ನೊಡೆಯನೇ, ಈ ಕಾರ್ಯಗಳ ಪರಿಣಾಮವೇನು ಎಂದು ಪ್ರಶ್ನೆಮಾಡಲು ಅವನು -


ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ - ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು