Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:19 - ಕನ್ನಡ ಸತ್ಯವೇದವು J.V. (BSI)

19 ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಇಗೋ, ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುವೆನು; ಅದು ಕ್ಲುಪ್ತವಾದ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ದೇವರು ತಮ್ಮ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು - ಅದು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾನು ನಿನಗೆ ಈಗ ದರ್ಶನದ ಅರ್ಥವನ್ನು ವಿವರಿಸುತ್ತೇನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ನಾನು ನಿನಗೆ ಹೇಳುತ್ತೇನೆ. ನಿನ್ನ ದರ್ಶನವು ಅಂತ್ಯಕಾಲದ ಕುರಿತಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು, “ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು, ಆ ದರ್ಶನವು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:19
15 ತಿಳಿವುಗಳ ಹೋಲಿಕೆ  

ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ಯಾಕಂದರೆ ಅವರು ದೇವರ ಅಭಿಪ್ರಾಯವನ್ನು ನೆರವೇರಿಸುವದಕ್ಕೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವದಕ್ಕೂ ದೇವರು ತನ್ನ ವಚನವು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರಿಸಿದನು.


ಆ ಇಬ್ಬರು ರಾಜರು [ಒಬ್ಬರಿಗೊಬ್ಬರು] ಕೇಡಿನ ಮನಸ್ಸುಳ್ಳವರಾಗಿ ಸಹಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತಾಡಿಕೊಳ್ಳುವರು; ಆದರೆ ಏನೂ ಸಾಗದು; ಪರಿಣಾಮವು ಕ್ಲುಪ್ತಕಾಲದಲ್ಲೇ ತಲೆದೋರುವದು.


ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾಲಕ್ಷಣವು ನನಗೆ ಕಾಣಿಸಿತು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು; ಇವು ಕಡೇ ಉಪದ್ರವಗಳು; ಇವುಗಳಲ್ಲಿ ದೇವರ ರೌದ್ರವು ಮುಗಿದಿರುವದು.


ಜನಾಂಗಗಳು ಕೋಪಿಸಿಕೊಂಡವು, ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯ ಬಂದದೆ; ನೀನು ನಿನ್ನ ದಾಸರಾದ ಪ್ರವಾದಿಗಳಿಗೂ ದೇವಜನರಿಗೂ ನಿನ್ನ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು ಲೋಕನಾಶಕರನ್ನು ನಾಶಮಾಡುವಿ ಎಂದು ಆತನನ್ನು ಆರಾಧಿಸಿದರು.


ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು - ಇನ್ನು ಸಾವಕಾಶವಿರುವದಿಲ್ಲ; ಏಳನೆಯ ದೇವದೂತನು ಶಬ್ದ ಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ಸಂಕಲ್ಪವನ್ನು ತನ್ನ ದಾಸರಾದ ಪ್ರವಾದಿಗಳಿಗೆ ಶುಭವರ್ತಮಾನವಾಗಿ ತಿಳಿಸಿದ್ದ ಪ್ರಕಾರ ನೆರವೇರಿಸುವನು ಎಂದು ಹೇಳಿದನು.


ಯೇಸು ಕ್ರಿಸ್ತನ ಪ್ರಕಟನೆಯು. ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ಸೂಚಿಸಿದನು.


ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿನಮುಖನೂ ದ್ವಂದ್ವಾರ್ಥವಚನನಿಪುಣನು ಆದ ಒಬ್ಬ ರಾಜನು ತಲೆದೋರುವನು.


ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು.


ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯವಿುತಕಾಲವು ಬಂದದೆ.


ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು, ಅಂತ್ಯಕಾಲದವರೆಗೆ ಮರೆಯಾಗಿರಲಿ; ಬಹು ಜನರು ಅತ್ತಿತ್ತ ತಿರುಗುವರು, ತಿಳುವಳಿಕೆಯು ಹೆಚ್ಚುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು