Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:8 - ಕನ್ನಡ ಸತ್ಯವೇದವು J.V. (BSI)

8 ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು; ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಹೋತಕ್ಕೆ ಅತ್ಯಧಿಕ ಹುಮ್ಮಸ್ಸು ಬಂದಿತು. ಆದರೆ ಅದು ಪ್ರಾಬಲ್ಯಕ್ಕೆ ಬರುವಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಪ್ರಸಿದ್ಧ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೂ ಚಾಚಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹೋತವು ಬಹಳ ಪ್ರಬಲವಾಯಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಆ ಒಂದು ದೊಡ್ಡ ಕೊಂಬು ಇದ್ದ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ಕೊಂಬುಗಳು ಸ್ಪಷ್ಟವಾಗಿ ಕಾಣಿಸುತ್ತಿದ್ದವು. ಆ ನಾಲ್ಕು ಕೊಂಬುಗಳು ನಾಲ್ಕು ಬೇರೆಬೇರೆ ದಿಕ್ಕುಗಳಲ್ಲಿ ಚಾಚಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ಆ ಹೋತವು ಬಹಳವಾಗಿ ಬಲಗೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು, ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:8
19 ತಿಳಿವುಗಳ ಹೋಲಿಕೆ  

ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು - ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾ ಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.


ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂವಿುಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂವಿುಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿಬೀಸದಂತೆ ಭೂವಿುಯ ಚತುರ್ದಿಕ್ಕುಗಳ ಗಾಳಿಗಳನ್ನು ಹಿಡಿದಿರುವದನ್ನು ಕಂಡೆನು.


ಆ ಕೊಂಬು ಮುರಿದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ ಆ ಜನಾಂಗದೊಳಗಿಂದ ನಾಲ್ಕು ರಾಜ್ಯಗಳು ಏಳುವವು; ಆದರೆ ಮೊದಲನೆಯ ರಾಜನಿಗೆ ಇದ್ದಷ್ಟು ಶಕ್ತಿಯು ಅವುಗಳಿಗೆ ಇರುವದಿಲ್ಲ.


ನಾನು ಗಮನಿಸುತ್ತಿರುವಾಗ ಇಗೋ, ಒಂದು ಹೋತವು ಪಡುವಲಿಂದ ಭೂಮಂಡಲವನ್ನೆಲ್ಲಾ ದಾಟಿಕೊಂಡು ನೆಲವನ್ನು ಸೋಕದೆ ಓಡಿಬಂತು; ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.


ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು;


ಆದರೆ ಅವನು ಬಲಿಷ್ಠನಾದ ಮೇಲೆ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಕ್ಕೆ ಹೋದನು.


ಮತ್ತು ಆತನು ತನ್ನ ದೂತರನ್ನು ಕಳುಹಿಸಿ ತಾನು ಆದುಕೊಂಡವರನ್ನು ಭೂವಿುಯ ಕಟ್ಟ ಕಡೆಯಿಂದ ಆಕಾಶದ ಕಟ್ಟ ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವನು.


ಮತ್ತು ಆತನು ತುತೂರಿಯ ಮಹಾ ಶಬ್ದದಿಂದ ತನ್ನ ದೂತರನ್ನು ಕಳುಹಿಸುವನು. ಅವರು ಆತನು ಆದುಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವರು.


ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ [ನಾಲ್ಕು] ಪಾಲಾಗುವದು; ಅದು ಅವನ ಸಂತತಿಗೆ ಭಾಗವಾಗದು, ಅವನ ಆಳಿಕೆಯಲ್ಲಿ ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು; ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವದು.


ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡೋಣವಾಯಿತು.


ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ - ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;


ನೀನು ನಿನ್ನನ್ನು ಸಂಹರಿಸುವವನೆದುರಿಗೆ ನಾನು ದೇವರು ಎಂದು ಹೇಳುವಿಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ.


ಭೂವಿುಯಲ್ಲಿ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಬಂತು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದಿ.


ಪಂಜರದಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸದ ಫಲವು ತುಂಬಿದೆ; ಇದರಿಂದ ಹೆಚ್ಚಿ ಧನವಂತರಾಗಿದ್ದಾರೆ.


ಸರ್ವಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.


ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.


ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರು ಸೇರದೆ ಇರುವ ರಾಜ್ಯವೇ ಇರದು.


ಅದು ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ ಅದರ ಮೇಲಣ ಕ್ರೋಧದಿಂದುರಿಯುತ್ತಾ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು; ಅದಕ್ಕೆ ಎದುರುಬೀಳಲು ಟಗರಿಗೆ ಏನೂ ಶಕ್ತಿಯಿರಲಿಲ್ಲ; ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದುಹಾಕಿತು; ಟಗರನ್ನು ಅದರ ಕೈಯಿಂದ ಬಿಡಿಸುವ ಪ್ರಾಣಿ ಯಾವದೂ ಇರಲಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು