Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:38 - ಕನ್ನಡ ಸತ್ಯವೇದವು J.V. (BSI)

38 ಆದರೆ ನಿನ್ನ ಶಿಷ್ಯನಾದ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲ್ಯರಿಗೆ ಆ ದೇಶವನ್ನು ಸ್ವಾಧೀನಪಡಿಸುವನು; ಆದದರಿಂದ ಅವನನ್ನು ಧೈರ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ನಿನ್ನ ಮುಂದೆ ನಿಂತಿರುವ ನಿನ್ನ ಸೇವಕನು, ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ಆ ದೇಶವನ್ನು ಸ್ವಾಧೀನಪಡಿಸುವನು. ಆದುದರಿಂದ ಅವನನ್ನು ಧೈರ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಯೇಲರಿಗೆ ಆ ನಾಡನ್ನು ಸ್ವಾಧೀನಪಡಿಸುವನು; ಆದುದರಿಂದ ಅವನನ್ನು ಧೈರ್ಯಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆದರೆ ನಿನ್ನ ಸಹಾಯಕನಾದ ನೂನನ ಮಗನಾದ ಯೆಹೋಶುವನು ಆ ದೇಶವನ್ನು ಪ್ರವೇಶಿಸುವನು. ಯೆಹೋಶುವನನ್ನು ಪ್ರೋತ್ಸಾಹಿಸು; ಯಾಕೆಂದರೆ ಆ ದೇಶವನ್ನು ವಶಪಡಿಸಿಕೊಳ್ಳಲು ಅವನು ಇಸ್ರೇಲರನ್ನು ಮುನ್ನಡೆಸಬೇಕು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನನ್ನು ಧೈರ್ಯಗೊಳಿಸು. ಅವನೇ ಆ ನಾಡನ್ನು ಇಸ್ರಾಯೇಲಿಗೆ ಸ್ವಾಧೀನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:38
20 ತಿಳಿವುಗಳ ಹೋಲಿಕೆ  

ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕೆಂದು ಉತ್ತರ ಕೊಟ್ಟನು.


ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವದಿಲ್ಲ.


ತನ್ನ ಕೆಲಸದಲ್ಲಿ ಚಟುವಟಿಕೆಯಾಗಿರುವವನನ್ನು ನೋಡು; ಇಂಥವನು ರಾಜರನ್ನು ಸೇವಿಸುವನಲ್ಲದೆ ನೀಚರನ್ನು ಸೇವಿಸುವದಿಲ್ಲ.


ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಅಟ್ಟಿ ಅವನಿಗೆ - ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ ಎಂದು ತಿಳಿಸಿದನು.


ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ - ನಾನು ಇಸ್ರಾಯೇಲ್ಯರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು ಎಂದು ಆಜ್ಞಾಪಿಸಿದನು.


ಯೆಹೋವನು ಮೋಶೆಗೆ - ನೀನು ಸಾಯಬೇಕಾದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು ಎಂದು ಆಜ್ಞಾಪಿಸಲಾಗಿ ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.


ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನಷ್ಟೆ; ಆದದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಅವರಲ್ಲಿ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.


ದೇಶವನ್ನು ಸಂಚರಿಸಿ ನೋಡುವದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.


ಎಫ್ರಾಯೀಮ್ ಕುಲದ ನೂನನ ಮಗನಾದ ಹೋಶೇಯ,


ಮನುಷ್ಯರೊಳಗೆ ಒಬ್ಬನು ತನ್ನ ಸ್ನೇಹಿತನೊಡನೆ ಹೇಗೆ ಮಾತಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದನು; ತರುವಾಯ ಮೋಶೆ ಪಾಳೆಯಕ್ಕೆ ತಿರಿಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಹೆಸರುಳ್ಳ ಯೌವನಸ್ಥನಾದ ಅವನ ಶಿಷ್ಯನು ಆ ಡೇರೆಯಲ್ಲೇ ಇದ್ದನು; ಅದರ ಬಳಿಯಿಂದ ಹೋಗಲೇ ಇಲ್ಲ.


ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ಯೆಹೋವನ ಸೇವಕನಾದ ಮೋಶೆಯು ಸತ್ತ ಮೇಲೆ ಯೆಹೋವನು ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ - ನನ್ನ


ಮಾಹಾಯಾಜಕ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ


ಯೆಹೋವನು ಮೋಶೆಯ ಮೂಲಕ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವನು ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಸಾರವಾಗಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ನಾನಂತು ವಿುಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ ಎಂದು ಖಂಡಿತವಾಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು