Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:16 - ಕನ್ನಡ ಸತ್ಯವೇದವು J.V. (BSI)

16 ಆದರೆ ನೀವು ಎಚ್ಚರದಿಂದಿರಬೇಕು; ನೀವು ಭ್ರಾಂತಿಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ನೀವು ಎಚ್ಚರದಿಂದಿರಬೇಕು; ನಿಮ್ಮ ಹೃದಯವು ಮರುಳುಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ ನೀವು ಎಚ್ಚರಿಕೆಯಿಂದಿರಬೇಕು; ಮರುಳುಗೊಂಡು ಸರ್ವೇಶ್ವರ ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಆದ್ದರಿಂದ ಜಾಗರೂಕರಾಗಿರಿ. ಬೇರೆ ದೇವರುಗಳನ್ನು ಸೇವೆಮಾಡಿ ಆರಾಧಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮ್ಮ ಹೃದಯವು ಮರಳುಗೊಂಡು ನೀವು ದಾರಿತಪ್ಪಿ ಬೇರೆ ದೇವರುಗಳನ್ನು ಆರಾಧಿಸಿ ಅಡ್ಡಬೀಳದಂತೆ ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:16
29 ತಿಳಿವುಗಳ ಹೋಲಿಕೆ  

ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ಆದದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋದೇವೆಂದು ಭಯಪಟ್ಟು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ಹೃದಯವು ಮರುಳುಗೊಂಡು ಕೈಯನ್ನು ಬಾಯಿ ಮುದ್ದಾಡಿದ್ದರೆ


ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನವಾಗಿದೆ.


ಎಚ್ಚರಿಕೆಯಾಗಿರ್ರಿ; ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ ಕುಟುಂಬವಾಗಲಿ ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.


ಪ್ರಿಯರಾದ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.


ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ ಇತರ ದೇವರುಗಳನ್ನು ಪೂಜಿಸಿ ಸೇವಿಸಿದರೆ


ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಎಚ್ಚರಿಕೆಯಾಗಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವದರಿಂದ ಭೂನಿವಾಸಿಗಳನ್ನು ಮರುಳುಗೊಳಿಸುತ್ತದೆ; ಅವರಿಗೆ - ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸುತ್ತದೆ.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನವು ಇನ್ನೂ ಇರುವಲ್ಲಿ ನಿಮ್ಮೊಳಗೆ ಯಾವನಾದರೂ ಆ ವಾಗ್ದಾನದ ಫಲವನ್ನು ಹೊಂದದೆ ತಪ್ಪುವವನಾದಾನೋ ಎಂದು ನಾವು ಭಯಪಡೋಣ.


ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.


ಆತನು ಹೇಳಿದ್ದೇನಂದರೆ - ನೀವು ಮೋಸಹೋಗದಂತೆ ನೋಡಿಕೊಳ್ಳಿರಿ. ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು ನಾನು ಕ್ರಿಸ್ತನು ನಾನು ಕ್ರಿಸ್ತನು ಎಂತಲೂ ಆ ಕಾಲ ಹತ್ತಿರವಾಯಿತು ಎಂತಲೂ ಹೇಳುವರು; ಅವರ ಹಿಂದೆ ಹೋಗಬೇಡಿರಿ.


ನಿಮ್ಮ ದೇವರಾದ ಯೆಹೋವನು - ಇವರು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ ಎಂಬದನ್ನು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.


ಹೀಗಿರುವದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.


ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು ಯೆಹೋವನನ್ನು ಅಂಟಿಕೊಂಡು ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ ರಕ್ಷಣೆಯೂ ಸಿಕ್ಕುವದಿಲ್ಲ. ಅವು ವ್ಯರ್ಥವಾದವುಗಳೇ.


ಅವರ ಪಾಪಗಳ ನಿವಿುತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವದಾದರೆ


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.


ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಪದ್ಧತಿಗಳನ್ನು ಅನುಸರಿಸಬಾರದು ನೋಡಿರಿ. ನೀವು - ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರು? ಹಾಗೆಯೇ ನಾವೂ ಸೇವಿಸುವೆವು ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು.


ಅನ್ಯದೇವರುಗಳನ್ನಾಗಲಿ ಇಲ್ಲವೆ ಪೂಜಿಸಬಾರದೆಂದು ಆತನು ನಿಷೇಧಿಸಿರುವ ಸೂರ್ಯಚಂದ್ರನಕ್ಷತ್ರಗಳನ್ನಾಗಲಿ ಸೇವಿಸಿ ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ದುಷ್ಟವಾದದ್ದನ್ನು ನಡಿಸಿದರೆ


ಆ ಜನಾಂಗಗಳಲ್ಲಿ ನಡೆಯುವ ಹೇಯಾಚಾರಗಳನ್ನೂ ಅವರು ಮರ ಕಲ್ಲು ಬೆಳ್ಳಿ ಬಂಗಾರಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ಕಂಡೇ ಕಂಡಿದ್ದೀರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು