Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:10 - ಕನ್ನಡ ಸತ್ಯವೇದವು J.V. (BSI)

10 ಆದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ ನಿಮ್ಮ ಸುತ್ತಲು ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ನೀವು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ, ನಿಮ್ಮ ಸುತ್ತಲೂ ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ನೀವು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸೊತ್ತಾಗಿ ಕೊಡುವ ಆ ನಾಡಿನಲ್ಲಿ ಮನೆಮಾಡಿಕೊಂಡಿರುವಾಗ ನಿಮ್ಮ ಸುತ್ತಲು ಶತ್ರುಗಳು ಯಾರೂ ಇಲ್ಲದಂತೆ ಸರ್ವೇಶ್ವರ ಮಾಡುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವು ಜೋರ್ಡನ್ ನದಿಯನ್ನು ದಾಟಿ, ಯೆಹೋವನು ನಿಮಗೆ ಕೊಡುವ ದೇಶದಲ್ಲಿ ವಾಸಿಸುವಿರಿ. ನಿಮ್ಮ ಎಲ್ಲಾ ವೈರಿಗಳಿಂದ ತಪ್ಪಿಸಿ ದೇವರು ನಿಮಗೆ ಸಮಾಧಾನವನ್ನು ಅನುಗ್ರಹಿಸುವನು; ನೀವು ಅಲ್ಲಿ ಸುರಕ್ಷಿತವಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ನೀವು ಯೊರ್ದನ್ ನದಿಯನ್ನು ದಾಟಿದ ಮೇಲೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ, ದೇವರು ಸುತ್ತಲಿರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:10
27 ತಿಳಿವುಗಳ ಹೋಲಿಕೆ  

ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.


ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುತ್ತೀರಲ್ಲಾ.


ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ಹೊಳೆ ದಾಟಿ ಆ ಒಳ್ಳೇ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ ತುದಿಯಲ್ಲಿ ನಿಂತು ಚತುರ್ದಿಕ್ಕುಗಳಲ್ಲಿ ಸುತ್ತಲೂ ಇರುವ ದೇಶವನ್ನು ಕಣ್ಣು ತುಂಬಾ ನೋಡಬಹುದು.


ಬಹುದಿವಸಗಳ ಮೇಲೆ ನಿನಗೆ ಅಪ್ಪಣೆಯಾಗುವದು; ಖಡ್ಗದಿಂದ ನಾಶವಾಗಿ ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ ಅನೇಕ ಜನಾಂಗಗಳೊಳಗಿಂದ ಒಟ್ಟುಗೂಡಿದ [ನನ್ನ] ಜನರ ಮೇಲೆ ಬೀಳುವಿ; ಹೌದು, ಜನಾಂಗಗಳೊಳಗಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರಲು ನೀನು ಅವರ ಮೇಲೆ ಬೀಳುವಿ.


ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ಅಲ್ಲಿ ನಿರ್ಭಯವಾಗಿರುವರು, ಮನೆಗಳನ್ನು ಕಟ್ಟಿಕೊಂಡು ತೋಟಗಳನ್ನು ಮಾಡಿಕೊಂಡು ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರಿಗೆ ನಾನು ದಂಡನೆಮಾಡಿದ ಮೇಲೆ ನಾನೇ ತಮ್ಮ ದೇವರಾದ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.


ಇಗೋ, ನಾನು ಕೋಪರೋಷ ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಅವನಿಗಾಗುವದು.


ನನ್ನ ಮಾತಿಗೆ ಕಿವಿಗೊಡುವವನಾದರೋ ಸ್ವಸ್ಥವಾಗಿರುತ್ತಾ ಯಾವ ಕೇಡಿಗೂ ಭಯಪಡದೆ ಸುರಕ್ಷಿತನಾಗಿರುವನು ಎಂಬದೇ.


ನಾನು ನಿರ್ಭಯವಾಗಿರುವದರಿಂದ ಮಲಗಿಕೊಂಡು ಕೂಡಲೆ ನಿದ್ದೆ ಮಾಡುವೆನು; ಯಾಕಂದರೆ ಯೆಹೋವನೇ, ನಾನು ಯಾವ ಅಪಾಯವೂ ಇಲ್ಲದೆ ಸುರಕ್ಷಿತನಾಗಿರುವಂತೆ ನೀನು ಕಾಪಾಡುತ್ತೀ.


ಸೊಲೊಮೋನನ ಆಳಿಕೆಯಲ್ಲೆಲ್ಲಾ ದಾನ್‍ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲ್ಯರೂ ಯೆಹೂದ್ಯರೂ ತಮ್ಮತಮ್ಮ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


ಅನಂತರ ಸಮುವೇಲನು ವಿುಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ - ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದನೆಂದು ಹೇಳಿ ಅದಕ್ಕೆ ಎಬೆನೆಜೆರೆಂದು ಹೆಸರಿಟ್ಟನು.


ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.


ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲಾ ಯೊರ್ದನಿನ ಆಚೆಗೆ ಸೇರಿದರು.


ಆದಕಾರಣ ಇಸ್ರಾಯೇಲ್ಯರು ಆಕಾಶದಿಂದ ಮಂಜು ಸುರಿದು ಧಾನ್ಯವೂ ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬ್‍ಸಂಭವರು ಸುರಕ್ಷಿತರಾದರು.


ಬೆನ್ಯಾಮೀನ್ ಕುಲದವರ ವಿಷಯದಲ್ಲಿ ಹೀಗಂದನು - ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ನಿವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು.


ಇಸ್ರಾಯೇಲ್ಯರೇ ಕೇಳಿರಿ. ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಈ ಯೊರ್ದನ್ ಹೊಳೆಯನ್ನು ಇಂದು ದಾಟುವವರಾಗಿದ್ದೀರಿ.


ಅದಕ್ಕೆ ಯೆಹೋವನು - ನಾನೇ ನಿಮ್ಮ ಜೊತೆಯಲ್ಲಿ ಬಂದು ನಿಮಗೆ ವಿಶ್ರಾಂತಿಯನ್ನು ಉಂಟುಮಾಡುವೆನು ಅಂದನು.


ಯೆಹೋವನು ಮೋಶೆಯ ಮೂಲಕ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವನು ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಸಾರವಾಗಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ತಾನು ವಾಗ್ದಾನಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿಶ್ರೇಷ್ಠವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ಮಹಾಯಾಜಕ ಎಲ್ಲಾಜಾರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲ್ ಕುಲಾಧಿಪತಿಗಳೂ


ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲಿಯೂ ನಿಮಗೆ ವಿಶ್ರಾಂತಿಯನ್ನು ಅನುಗ್ರಹಿಸಿದ್ದಾನಲ್ಲಾ. ಆತನು ಈ ದೇಶದ ಮೂಲನಿವಾಸಿಗಳನ್ನು ನನ್ನ ಕೈಗೆ ಒಪ್ಪಿಸಿದ್ದಾನೆ. ದೇಶವು ಯೆಹೋವನಿಗೂ ಆತನ ಪ್ರಜೆಗಳಿಗೂ ಸ್ವಾಧೀನವಾಯಿತು ನೋಡಿರಿ.


ನೀನು - ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು ಅಂದುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು