Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:20 - ಕನ್ನಡ ಸತ್ಯವೇದವು J.V. (BSI)

20 ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು ಮಾಂಸಾಹಾರವನ್ನು ಮಾಡುವದಕ್ಕೆ ಇಷ್ಟಪಟ್ಟರೆ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು, “ನಾವು ಮಾಂಸಾಹಾರವನ್ನು ಊಟಮಾಡಬೇಕು” ಎಂದು ನೀವು ಇಷ್ಟಪಟ್ಟರೆ ಮಾಂಸಾಹಾರವನ್ನು ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು ಮಾಂಸಾಹಾರವನ್ನು ಮಾಡುವುದಕ್ಕೆ ಇಷ್ಟಪಟ್ಟರೆ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20-21 “ನಿಮ್ಮ ದೇವರಾದ ಯೆಹೋವನು ನಿಮ್ಮ ದೇಶವನ್ನು ವಿಸ್ತಾರ ಮಾಡುವನು. ಆ ಸಮಯದಲ್ಲಿ ನೀವು ಇರುವ ಸ್ಥಳಗಳು ಆತನು ತನ್ನ ಹೆಸರಿಗಾಗಿ ಆರಿಸಿದ ಸ್ಥಳದಿಂದ ತುಂಬಾ ದೂರವಿರಬಹುದು. ಆಗ ನಿಮಗೆ ಮಾಂಸ ಊಟಮಾಡಲು ಆಸೆಯಾದರೆ ನಿಮ್ಮ ಹಿಂಡಿನಿಂದಾಗಲಿ ಹಟ್ಟಿಯಿಂದಾಗಲಿ ಪ್ರಾಣಿಯನ್ನು ಕೊಂದು ತಿನ್ನಬಹುದು. ನಾನು ತಿಳಿಸುವ ರೀತಿಯಲ್ಲಿ ತಿನ್ನಿರಿ. ನಿಮಗೆ ಬೇಕಾದಾಗಲೆಲ್ಲಾ ಹೀಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆ ನಿಮ್ಮ ಮೇರೆಯನ್ನು ವಿಸ್ತಾರಮಾಡುವರು. ಆಗ ನೀವು, “ಮಾಂಸಾಹಾರವನ್ನು ತಿನ್ನಲು ಇಷ್ಟಪಡುತ್ತೇನೆ,” ಎಂದು ಹೇಳಿದರೆ, ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:20
24 ತಿಳಿವುಗಳ ಹೋಲಿಕೆ  

ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನು ಹೇಳುವ ಮಾರ್ಗದಲ್ಲೇ ಯಾವಾಗಲೂ ನಡೆದರೆ ಆತನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ ತಾನು ನಿಮ್ಮ ಪಿತೃಗಳಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವನು. ಆಗ ಈ ಮೂರು ಪಟ್ಟಣಗಳನ್ನಲ್ಲದೆ ಇನ್ನು ಮೂರು ಪಟ್ಟಣಗಳನ್ನು ಗೊತ್ತುಮಾಡಬೇಕು.


ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳೂ ನಿಮಗಾಗುವವು; ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದವರೆಗೂ ಮತ್ತು ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವದು.


ನಾನು ನಿಮ್ಮ ಎದುರಿನಿಂದ ಅನ್ಯಜನಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ಅಷ್ಟೇ ಅಲ್ಲದೆ ನೀವು ವರುಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂವಿುಯನ್ನು ಅಪಹರಿಸುವದಕ್ಕೆ ಅಪೇಕ್ಷಿಸುವದಿಲ್ಲ.


ನಿನ್ನ ಸಂತತಿಯು ಭೂವಿುಯ ಧೂಳಿನಂತೆ ಅಸಂಖ್ಯವಾಗುವದು; ನೀನು ಪೂರ್ವಪಶ್ಚಿಮದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನ ಮೂಲಕವೂ ನಿನ್ನ ಸಂತತಿಯ ಮೂಲಕವೂ ಭೂವಿುಯ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು.


ಆತನು ಬಾಯಾರಿದವರ ಆಶೆಯನ್ನು ಪೂರೈಸಿ ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.


ಯಾಬೇಚನು ಇಸ್ರಾಯೇಲ್ ದೇವರಿಗೆ - ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ ನನ್ನ ಪ್ರಾಂತವನ್ನು ವಿಸ್ತರಿಸಿ ನಿನ್ನ ಹಸ್ತದಿಂದ ನನ್ನನ್ನು ಹಿಡಿದು ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ರಕ್ಷಿಸಬಾರದೇ ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.


ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗೆ ನೇವಿುಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.


ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.


ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆಮಾಡಿ ದೇವರ ಅತಿಶಯವಾದ ಕೃಪೆಯು ನಿಮ್ಮಲ್ಲಿ ಇರುವದರಿಂದ ನಿಮ್ಮ ಪರಿಚಿತಿಮಾಡಬೇಕೆಂದು ಕೋರುವರು.


ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ; ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.


ಇಗೋ, ನಿನ್ನ ನೇಮಗಳನ್ನು ಪ್ರೀತಿಸುತ್ತೇನೆ; ನಿನ್ನ ನೀತಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.


ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.


ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. [ಆದರೆ ಈಗ] ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿ ಮಾಡುತ್ತೇನೆ.


ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂವಿುಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.


ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ - ಬೇತ್ಲೆಹೇಮ್ ಊರಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವದಾದರೆ ಎಷ್ಟೋ ಒಳ್ಳೇದು ಅಂದನು.


ಅರಸನಾದ ದಾವೀದನು ಅಮ್ನೋನನ ಮರಣದ ವಿಷಯ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ತಿರಿಗಿ ನೋಡುವದಕ್ಕೆ ಬಹಳ ಆತುರಪಟ್ಟನು.


ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು.


ಪೂರಾ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ಓಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ ಅಂದನು.


ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲ್ಯರು ಕೂಡ ತಿರಿಗಿ ಅತ್ತುಕೊಂಡು - ಮಾಂಸವು ನಮಗೆ ಹೇಗೆ ಲಭಿಸೀತು;


ಆದರೆ ತಂದೆಯ ಮನೆಗೆ ಹೋಗುವದಕ್ಕೆ ನಿನಗೆ ಬಹಳ ಆಶೆಯಿರುವದರಿಂದ ಹೋಗಬೇಕಾಯಿತು. ಅದಿರಲಿ; ನನ್ನ ದೇವರುಗಳನ್ನು ಕದ್ದದ್ದು ಯಾಕೆ ಎಂದು ಹೇಳಿದನು.


ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ವ್ಯಸನಪಟ್ಟನು.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕಾಗಿ ಆದುಕೊಂಡ ಸ್ಥಳವು ನಿಮಗೆ ದೂರವಾದರೆ ಆತನು ನಿಮಗೆ ಅನುಗ್ರಹಿಸಿದ ದನಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು