Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:30 - ಕನ್ನಡ ಸತ್ಯವೇದವು J.V. (BSI)

30 ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಪದ್ಧತಿಗಳನ್ನು ಅನುಸರಿಸಬಾರದು ನೋಡಿರಿ. ನೀವು - ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರು? ಹಾಗೆಯೇ ನಾವೂ ಸೇವಿಸುವೆವು ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಟಪದ್ಧತಿಗಳನ್ನು ಅನುಸರಿಸಬಾರದು. ನೀವು, “ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರೋ ಹಾಗೆಯೇ ನಾವೂ ಸೇವಿಸುವೆವು” ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಗ ನೀವು ಭ್ರಮೆಗೊಂಡು, ನಿಮ್ಮ ಮುಂದೆ ನಾಶವಾದವರ ದುಷ್ಟ ಪದ್ಧತಿಗಳನ್ನು ಅನುಸರಿಸದಂತೆ ಜಾಗರೂಕರಾಗಿರಿ; ‘ಈ ನಾಡಿನ ಜನರು ತಮ್ಮ ದೇವರುಗಳನ್ನು ಹೇಗೆ ಪೂಜಿಸುತ್ತಿದ್ದರೋ ಹಾಗೆಯೇ ನಾವೂ ಪೂಜಿಸುವೆವು’ ಎಂದು ಹೇಳಿಕೊಂಡು ಅವರ ದೇವರುಗಳ ಬಗ್ಗೆ ಎಷ್ಟು ಮಾತ್ರವೂ ಕೇಳಿತಿಳಿದುಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅಲ್ಲಿ ವಾಸಿಸುವ ಅನ್ಯಜನರನ್ನು ನೀವು ನಾಶಮಾಡಬೇಕು. ಇಲ್ಲದಿದ್ದಲ್ಲಿ ಅವರು ನಿಮಗೆ ಉರುಲಾಗುವರು; ಅವರ ವಿಗ್ರಹಗಳನ್ನು ಪೂಜಿಸದಂತೆ ಎಚ್ಚರಿಕೆಯಿಂದಿರಿ. ಆ ಸುಳ್ಳುದೇವರುಗಳಿಗೆ ಪ್ರಾರ್ಥಿಸಬೇಡಿ. ‘ಆ ಜನರು ಆ ಸುಳ್ಳುದೇವರುಗಳನ್ನು ಪೂಜಿಸಿದ ಹಾಗೆ ನಾನೂ ಪೂಜಿಸುವೆನು’ ಎಂದು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳಬೇಡಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀವು ಭ್ರಮೆಗೊಂಡು ನಿಮ್ಮ ಮುಂದೆ ನಾಶವಾದವರ ಬಗ್ಗೆ ವಿಚಾರಣೆ ಮಾಡಬೇಡಿರಿ. “ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಪೂಜಿಸಿದವು? ನಾವೂ ಹಾಗೆ ಮಾಡೋಣ,” ಎಂದು ಹೇಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:30
22 ತಿಳಿವುಗಳ ಹೋಲಿಕೆ  

ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟುಮಾತ್ರವೂ ಸಾಗದು.


ಯೆಹೋವನು ಹೀಗೆ ಹೇಳುತ್ತಾನೆ - ಜನಾಂಗಗಳ ಆಚರಣೆಯನ್ನು ಅಭ್ಯಾಸಿಸದಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.


ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರದೆಂದು ಕರ್ತನಲ್ಲಿರುವವನಾಗಿ ನಿಮಗೆ ಖಂಡಿತವಾಗಿ ಹೇಳುತ್ತೇನೆ.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ ನನ್ನನ್ನು ರೇಗಿಸುವ ನೈವೇದ್ಯವನ್ನವರ್ಪಿಸಿ ಸುಗಂಧಹೋಮಮಾಡಿ ಪಾನದ್ರವ್ಯವನ್ನು ಸುರಿದು ಒಪ್ಪಿಸುತ್ತಿದ್ದರು.


ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯಪಡಿಸುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವವು.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ಆತನು ತಮ್ಮ ಪಿತೃಗಳಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿ ವಾಕ್ಯಗಳನ್ನೂ ತಿರಸ್ಕರಿಸಿ ವಿುಥ್ಯಾದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು; ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ ಅವರನ್ನು ಅನುಸರಿಸಿದರು;


ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ನೀವು ವಾಸವಾಗಿದ್ದ ಐಗುಪ್ತದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್‍ದೇಶದ ಆಚರಣೆಗಳನ್ನೂ ನೀವು ಅನುಸರಿಸಬಾರದು; ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು.


ಅವರ ದೇವತೆಗಳನ್ನು ನೀವು ನಮಸ್ಕರಿಸಲೂಬಾರದು, ಪೂಜಿಸಲೂಬಾರದು; ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶನ ಮಾಡಬೇಕು.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ತರುವಾಯ ನೀವು ಅವರ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸವಾಗಿರುವಾಗ


ಯೆಹೋವನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ; ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.


ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧಾಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾದೀರಿ.


ಆದದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡಿಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು.


ಆದರೆ ನೀವು ಎಚ್ಚರದಿಂದಿರಬೇಕು; ನೀವು ಭ್ರಾಂತಿಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಹೇಸಿಗೆ ಕೆಲಸಗಳನ್ನು ಅನುಸರಿಸಲೇಬಾರದು.


ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು ಅದರ ಒಂದು ಚಿತ್ರವನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ ಯಾಜಕನಾದ ಊರೀಯನಿಗೆ ಕಳುಹಿಸಿದನು.


ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ ನನ್ನ ನಿಯಮಗಳನ್ನು ಅನುಸರಿಸದೆ ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು