Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:2 - ಕನ್ನಡ ಸತ್ಯವೇದವು J.V. (BSI)

2 ಈ ದೇವತೆಗಳನ್ನು ಅವಲಂಬಿಸಿ ಸೇವಿಸೋಣ ಎಂದು ಬೋಧಿಸುತ್ತಾ ಆ ಬೋಧನೆಯನ್ನು ಸ್ಥಾಪಿಸುವದಕ್ಕೆ ಒಂದು ಅದ್ಭುತವನ್ನಾಗಲಿ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಲು ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ‘ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ’ ಎಂದು ಬೋಧಿಸಬಹುದು; ಆ ಬೋಧನೆಯನ್ನು ರುಜುವಾತು ಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಅದ್ಭುತಕಾರ್ಯಗಳನ್ನು ಮಾಡಿತೋರಿಸಬಹುದು. ಆಮೇಲೆ ಅವನು ನಿಮಗೆ ಗೊತ್ತಿಲ್ಲದ ದೇವರನ್ನು ಅನುಸರಿಸಲು ನಿಮಗೆ ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ,” ಎಂದು ಬೋಧಿಸಬಹುದು. ಆ ಬೋಧನೆಯನ್ನು ರುಜುವಾತುಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಸಹ ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:2
16 ತಿಳಿವುಗಳ ಹೋಲಿಕೆ  

ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು ಎಂದು ಹೇಳಿದನು.


ಪ್ರವಾದಿಯು ಯೆಹೋವನ ಮಾತೆಂದು ಹೇಳಿ ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.


ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ ಮಗನಾಗಲಿ ಮಗಳಾಗಲಿ ಪ್ರಾಣಪ್ರಿಯಳಾದ ಹೆಂಡತಿಯಾಗಲಿ ಆಪ್ತವಿುತ್ರನಾಗಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚಿಸಿ -


ಇದಲ್ಲದೆ ಅವನು - ನನ್ನ ಮಾತು ಯೆಹೋವನದೆಂಬದಕ್ಕೆ ವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದು ಹೋಗುವದೇ ಗುರುತಾಗಿರುವದು ಎಂದು ಹೇಳಿದನು.


ಅಲ್ಲಿ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಕೆಲವು ಮಂದಿ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಿ - ಆ ದೇವರುಗಳನ್ನು ಸೇವಿಸೋಣ ಬನ್ನಿ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ


ಆದರೆ ಐಗುಪ್ತದೇಶದ ಜೋಯಿಸರು ತಮ್ಮ ಗುಪ್ತವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವನು ಹೇಳಿದ್ದಂತೆಯೇ ಅವನು ಮೋಶೆ ಆರೋನರ ಮಾತನ್ನು ಕೇಳದೆ ಹೋದನು.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.


ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ ಕೊಚ್ಚಾಟದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ; ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವದಿಲ್ಲ. ಇದು ಯೆಹೋವನ ನುಡಿ.


ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.


ನೀವು ಬಾಬೆಲಿನ ಅರಸನ ಅಡಿಯಾಳಾಗುವದಿಲ್ಲ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು;


ವಿಗ್ರಹಗಳು ನುಡಿಯುವದು ಜೊಳ್ಳು; ಕಣಿಯವರು ಕಾಣುವದು ಸುಳ್ಳು, ತಿಳಿಸುವ ಕನಸುಗಳು ಕಲ್ಪಿತ, ಹೇಳುವ ಸಮಾಧಾನವು ವ್ಯರ್ಥ, ಆದದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು