Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:3 - ಕನ್ನಡ ಸತ್ಯವೇದವು J.V. (BSI)

3 ನಿಮ್ಮ ದೇವರಾದ ಯೆಹೋವನು - ಇವರು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ ಎಂಬದನ್ನು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪೂರ್ಣ ಹೃದಯದಿಂದ, ಪೂರ್ಣ ಮನಸ್ಸಿನಿಂದ ಪ್ರೀತಿಸುತ್ತೀರೊ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಂಥ ಮನುಷ್ಯನಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸುತ್ತೀರೋ ಇಲ್ಲವೋ ಎಂದು ನಿಮ್ಮನ್ನು ಪರೀಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:3
21 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ನಿಮ್ಮಲ್ಲಿ ಇಂಥಿಂಥವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯಗಳೂ ಇರುವದು ಅವಶ್ಯವೇ.


ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.


ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವದರಿಂದ ಭೂನಿವಾಸಿಗಳನ್ನು ಮರುಳುಗೊಳಿಸುತ್ತದೆ; ಅವರಿಗೆ - ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸುತ್ತದೆ.


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಅದೇ ಕಾರಣದಿಂದ ದೇವರು ಅಸತ್ಯನಡಿಸುವ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಆ ಸುಳ್ಳನ್ನು ನಂಬುವದಕ್ಕೆ ಅವರನ್ನು ಬಿಡುತ್ತಾನೆ.


ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಪ್ರಿಯರಾದ ಮಕ್ಕಳೇ, ನೀವಂತೂ ದೇವರಿಂದ ಹುಟ್ಟಿದವರಾಗಿದ್ದೀರಿ; ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಹೆಚ್ಚಿನವನಾಗಿರುವದರಿಂದ ನೀವು ಆ ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ.


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ನೂಕಿಸಿಕೊಂಡು ಹೋಗುವವರ ಹಾಗಿರಬಾರದು.


ಇದನ್ನು ಆಜ್ಞಾರೂಪವಾಗಿ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯೂ ಯಥಾರ್ಥವಾದದ್ದೆಂಬದನ್ನು ಪರೀಕ್ಷೆಯಿಂದ ತಿಳಿದುಕೊಳ್ಳಬೇಕೆಂದು ಹೇಳುತ್ತೇನೆ.


ಆ ಸಭೆಯವರು ಥೆಸಲೋನಿಕದವರಿಗಿಂತ ಸದ್ಗುಣವುಳ್ಳವರಾಗಿದ್ದು ದೇವರ ವಾಕ್ಯವನ್ನು ಶುದ್ಧಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಏನೋ ಎಂಬ ವಿಷಯದಲ್ಲಿ ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದರು.


ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.


ಅದಕ್ಕೆ ಮೋಶೆ - ಭಯಪಡಬೇಡಿರಿ. ದೇವರು ನಿಮ್ಮನ್ನು ಪರೀಕ್ಷಿಸಬೇಕೆಂತಲೂ ತನಗೆ ಭಯಪಟ್ಟು ನೀವು ಪಾಪವನ್ನು ಮಾಡದೆ ಇರಬೇಕೆಂತಲೂ ಬಂದಿದ್ದಾನೆ ಅಂದನು.


ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು ಅಂದನು.


ಆತನ ಕಟ್ಟಳೆಗಳನ್ನು ಕೈಕೊಂಡು ಸಂಪೂರ್ಣಮನಸ್ಸಿನಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.


ದೇವರ ಮನುಷ್ಯನು ಹಿಂದಿರುಗಿಕೊಂಡು ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು