Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:5 - ಕನ್ನಡ ಸತ್ಯವೇದವು J.V. (BSI)

5 ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:5
34 ತಿಳಿವುಗಳ ಹೋಲಿಕೆ  

ಹೊರಗಿನವರನ್ನು ಕುರಿತು ತೀರ್ಪುಮಾಡುವವನು ದೇವರು. ಆ ದುಷ್ಟನನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.


ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು - ಖಡ್ಗದಿಂದಲೂ ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು ಎಂದು ಹೇಳುತ್ತೇನೆ.


ಯಾವನಾದರೂ ಸ್ವದೇಶದವನಾದ ಇಸ್ರಾಯೇಲ್ಯನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಮಾರಿಬಿಟ್ಟದ್ದಾಗಲಿ ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.


ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಾಯೇಲ್ಯರೊಳಗೆ ದುರಾಚಾರವನ್ನು ನಡಿಸಿದ್ದರಿಂದ ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ತರಿಸಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.


ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ತರುವಾಯ ಜನರೆಲ್ಲರೂ ಹಾಕಲಿ. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯು ಕ್ರಿಸ್ತನನ್ನು ನಂಬದ ಹಾಗೆ ಪ್ರಯತ್ನಿಸಿದನು. ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದೇ ಅರ್ಥ.


ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ - ನೀನುಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತೀ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿವಿುತ್ತ ಅವನನ್ನು ಇರಿದುಬಿಡುವರು.


ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.


ಆಗ ಎಲೀಯನು ಅವರಿಗೆ - ಬಾಳನ ಪ್ರವಾದಿಗಳೆಲ್ಲರನ್ನೂ ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್‍ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಹಾಗೆ ಮಾಡಿದರೆ ಅವರು ನಿಮ್ಮ ಮಕ್ಕಳನ್ನು ಯೆಹೋವನ ಸೇವೆಯಿಂದ ತಪ್ಪಿಸಿ ಇತರ ದೇವರುಗಳನ್ನು ಪೂಜಿಸುವದಕ್ಕೆ ತಿರುಗಿಸಾರು; ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶ ಮಾಡುವನು.


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶ ಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂಬಾರದು ನಮಸ್ಕರಿಸಲೂಬಾರದು.


ಆ ಶಿಕ್ಷೆಯನ್ನು ನಡಿಸುವಾಗ ತಪ್ಪು ಕಂಡವನೇ ಮೊದಲು ಕೈಹಾಕಬೇಕು;


ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಿ ಅದರಲ್ಲಿರುವ ಎಲ್ಲಾ ಜನರನ್ನೂ ದನಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು.


ಆ ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲುಗಳಿಂದ ಕೊಲ್ಲಬೇಕು.


ಈಗ ಗಿಬೆಯ ಊರಲ್ಲಿರುವ ಆ ನೀಚರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲ್ಯರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ ಎಂದು ಹೇಳಿಸಿದರು.


ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ.


ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು; ಆತನನ್ನೇ ಸೇವಿಸಬೇಕು; ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.


ನಾವು [ಸತ್ತವರಿಗೋಸ್ಕರ] ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇವಿುಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.


ಈವರೆಗೆ ಹೇಗೋ ಹಾಗೆಯೇ ಇನ್ನು ಮುಂದಕ್ಕೂ ನಿಮ್ಮ ದೇವರಾದ ಯೆಹೋವನನ್ನೇ ಹೊಂದಿಕೊಂಡಿರ್ರಿ.


ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು ವಿಧೇಯರಾಗಿ ಆತನನ್ನು ಸೇವಿಸುತ್ತಾ ತಪ್ಪದೆ ಆತನ ಮಾತು ಕೇಳುವವರಾಗಿ ಆತನನ್ನೇ ಹೊಂದಿಕೊಂಡಿರುವದಾದರೆ ಎಷ್ಟೋ ಒಳ್ಳೇದು.


ದೇವರ ಮನುಷ್ಯನು ಹಿಂದಿರುಗಿಕೊಂಡು ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.


ತನ್ನ ಸ್ಥಳದಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣ ಮಾಡಿದನು.


ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು