Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:21 - ಕನ್ನಡ ಸತ್ಯವೇದವು J.V. (BSI)

21 ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಸತ್ತುಬಿದ್ದ ಯಾವ ಪ್ರಾಣಿಯನ್ನಾಗಲೀ ತಿನ್ನಬಾರದು. ನಿಮ್ಮ ಊರಲ್ಲಿರುವ ಪರದೇಶಿಗೆ ಕೊಡಿರಿ. ಅವನು ತಿನ್ನಬಹುದು, ಅಥವಾ ಆ ಸತ್ತ ಪ್ರಾಣಿಯನ್ನು ಪರದೇಶಿಗೆ ಮಾರಬಹುದು. ಆದರೆ ನೀವು ತಿನ್ನಬಾರದು. ಯಾಕೆಂದರೆ ನೀವು ಯೆಹೋವನ ಜನರಾಗಿದ್ದೀರಿ; ಆತನ ಸ್ವಕೀಯ ಪ್ರಜೆಗಳಾಗಿದ್ದೀರಿ. ಆಡಿನ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ತಾನೇ ಸತ್ತ ಯಾವುದನ್ನೂ ತಿನ್ನಬಾರದು. ನಿಮ್ಮ ಊರಲ್ಲಿರುವ ಅನ್ಯನಿಗೆ ತಿನ್ನಲು ಕೊಡಬಹುದು ಇಲ್ಲವೆ ಪರದೇಶದವನಿಗೆ ಮಾರಬಹುದು. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಕುದಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:21
19 ತಿಳಿವುಗಳ ಹೋಲಿಕೆ  

ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಉತ್ಕೃಷ್ಟವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಭೂವಿುಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ಯಾಕಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಜನರೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವದಕ್ಕೆ ಆದುಕೊಂಡಿದ್ದಾನಲ್ಲಾ.


ಅದು ಅವನ ಜೀವನವಷ್ಟೆ. ತಾನಾಗಿ ಸತ್ತುಬಿದ್ದದ್ದನ್ನಾಗಲಿ ಕಾಡುಮೃಗದಿಂದ ಕೊಲ್ಲಲ್ಪಟ್ಟದ್ದನ್ನಾಗಲಿ ತಿಂದು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ನಾನು ಯೆಹೋವನು.


ತಾನಾಗಿ ಸತ್ತು ಬಿದ್ದದ್ದನ್ನಾಗಲಿ ಕಾಡುಮೃಗಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾದರೂ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.


ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ. ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಅರಿಕೆಮಾಡಲು


ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು ಎಂದು ಬರೆದದೆಯಲ್ಲಾ.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ಹಾದರವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ರಕ್ತವನ್ನೂ ವಿಸರ್ಜಿಸಬೇಕೆಂದು ನಾವು ಅವರಿಗೆ ಕಾಗದವನ್ನು ಬರೆದು ಅಪ್ಪಣೆಕೊಡೋಣ.


ಆಕಾಶದ ಕಡೆಗೆ ಎತ್ತಿಕೊಂಡು - ಶಾಶ್ವತ ಜೀವಸ್ವರೂಪನಾಣೆ, ಒಂದುಕಾಲ ಎರಡುಕಾಲ ಅರ್ಧಕಾಲ ಕಳೆಯಬೇಕು; ದೇವರ ಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು ಎಂಬದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಅವನು ಪ್ರಬಲನಾಗುವನು, ಆದರೆ ಬಲದಿಂದಲ್ಲ; ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು ಇಷ್ಟಾರ್ಥವನ್ನು ತೀರಿಸಿಕೊಳ್ಳುವನು; ಬಲಿಷ್ಠರನ್ನೂ ದೇವರ ಜನರನ್ನೂ ಧ್ವಂಸಮಾಡುವನು.


ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನವೂ ಆಗಿರುವಿರಿ. ಇವೇ ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದ ಮಾತುಗಳು ಎಂದನು.


ಆ ಹೆಣದಲ್ಲಿ ಸ್ವಲ್ಪವಾಗಿ ತಿಂದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಯಾಕಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನವಾಗುವದಕ್ಕೆ ಆದುಕೊಂಡನು.


ರೆಕ್ಕೆಯುಳ್ಳವುಗಳಲ್ಲಿ ಶುದ್ಧಜಾತಿಯವುಗಳನ್ನು ಮಾತ್ರ ತಿನ್ನಬಹುದು.


ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.


ಅದೇ ಮೇರೆಗೆ ನಿಮ್ಮ ಕುರಿದನಗಳ ಚೊಚ್ಚಲುಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿವಸ ಆ ಮರಿ ತಾಯಿಯ ಹತ್ತಿರ ಇರಲಿ; ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು