Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:10 - ಕನ್ನಡ ಸತ್ಯವೇದವು J.V. (BSI)

10 ಆ ಏಳು ವಾರಗಳಾದನಂತರ ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಏಳು ವಾರಗಳಾದನಂತರ, ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಅವರಿಗಾಗಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಲ್ಲಿ ನಿಮ್ಮ ದೇವರಾದ ಯೆಹೋವನಿಗೆ ವಾರಗಳ ಹಬ್ಬವನ್ನು ಆಚರಿಸಿರಿ. ಅಲ್ಲಿ ನಿಮ್ಮ ವಿಶೇಷ ಕಾಣಿಕೆಗಳನ್ನು ತಂದು ಸಮರ್ಪಿಸಿರಿ. ನಿಮ್ಮ ದೇವರು ನಿಮ್ಮನ್ನು ಎಷ್ಟು ಆಶೀರ್ವದಿಸಿರುತ್ತಾನೆಂದು ಯೋಚಿಸಿ ಅದರ ಪ್ರಕಾರ ನಿಮ್ಮ ಕಾಣಿಕೆಗಳನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ಅರ್ಪಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ವಾರಗಳ ಹಬ್ಬವನ್ನು ಆಚರಿಸಬೇಕು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:10
22 ತಿಳಿವುಗಳ ಹೋಲಿಕೆ  

ನಾನು ಬಂದಾಗ ಹಣ ವಸೂಲುಮಾಡಬೇಕಾದ ಅವಶ್ಯವಾಗದಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದ ಸಂಪಾದನೆಯ ಮೇರೆಗೆ ವಾರವಾರದ ಮೊದಲನೆಯ ದಿನದಲ್ಲಿ ಗಂಟುಮಾಡಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು.


ಈ ಧರ್ಮಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಈ ಕಾರ್ಯವನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ನಡಿಸಬೇಕೆಂದು ಮನಸ್ಸು ಮಾಡುವದರಲ್ಲಿಯೂ ನೀವು ಅವರಿಗಿಂತ ಮೊದಲಿನವರಾದದರಿಂದ ನಮಗೆ ಅಷ್ಟು ಮಾತ್ರ ಹೇಳುವದು ವಿಹಿತವಾಗಿದೆ.


ಆತನು ಒಂದು ವೇಳೆ ಪಶ್ಚಾತ್ತಾಪಪಟ್ಟು ಹಿಂದಿರುಗಿ ನಿಮ್ಮ ದೇವರಾದ ಯೆಹೋವನ ಧಾನ್ಯಪಾನನೈವೇದ್ಯಗಳಿಗೆ ಅನುಕೂಲವಾದ ಸುವರಗಳನ್ನು ದಯಪಾಲಿಸಿ ಹೋದಾನು.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು; ಅದು ವ್ಯಸನವನ್ನು ಸೇರಿಸದು.


675 ಆಡುಕುರಿಗಳು ಯೆಹೋವನಿಗೆ ಬಂದ ಕಪ್ಪ.


ಯುದ್ಧಕ್ಕೆ ಹೋದ ಭಟರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ನೀನು ಐನೂರರಲ್ಲಿ ಒಂದರ ಮೇರೆಗೆ


ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ


ಕುರಿಯನ್ನು ಕೊಡುವದಕ್ಕೆ ಗತಿಯಿಲ್ಲದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನೂ ದೋಷಪರಿಹಾರಕ್ಕಾಗಿ ಒಂದನ್ನೂ ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು.


ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಗಳಿಗೋಸ್ಕರ ಆತನಿಗೆ ಕಾಣಿಕೆಗಳನ್ನು ತಂದುಕೊಟ್ಟ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ಕೊಟ್ಟರು.


ಬೆಳೆ ಕೊಯ್ಯುವದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿ ತಂದೆಯಿಲ್ಲದವರೂ ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಸಬ್ಬತ್‍ದಿನದ ಮಾರಣೆಯ ದಿನ ಮೊದಲುಗೊಂಡು ಅಂದರೆ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು.


[ಪಸ್ಕವಾದ ಏಳು] ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮ ಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡಿಸದೆ ದೇವಾರಾಧನೆಗಾಗಿ ಸಭೆಕೂಡಬೇಕು.


ನಾವು ಈ ಪ್ರಕಾರ ಸ್ವೇಚ್ಫೆಯಿಂದ ಕಾಣಿಕೆಗಳನ್ನು ಸಮರ್ಪಿಸಲು ಶಕ್ತಿಹೊಂದಿದ್ದಕ್ಕೆ ನಾನಾಗಲಿ ನನ್ನ ಪ್ರಜೆಗಳಾಗಲಿ ಎಷ್ಟರವರು? ಸಮಸ್ತವು ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.


ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು ಜನರು ಸ್ವೇಚ್ಫೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನೂ ಯೆಹೋವನಿಗೋಸ್ಕರ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧವಸ್ತು ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು