Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:13 - ಕನ್ನಡ ಸತ್ಯವೇದವು J.V. (BSI)

13 ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಪರ್ಣಕುಠೀರಗಳ ಜಾತ್ರೆಯನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಕಣಗಳ ಕೆಲಸ ಮತ್ತು ದ್ರಾಕ್ಷಿಯ ಆಲೆಗಳ ಕೆಲಸ ಮುಕ್ತಾಯವಾಗಿ ನಿಮ್ಮ ಮನೆಗಳಲ್ಲಿ ಅವುಗಳನ್ನು ಶೇಖರಿಸಿದ ಬಳಿಕ ಏಳು ದಿನಗಳ ನಂತರ ನೀವು ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಕಣದ ಕೆಲಸವನ್ನೂ ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಗುಡಾರಗಳ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:13
14 ತಿಳಿವುಗಳ ಹೋಲಿಕೆ  

ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಜಾತ್ರೆಯನ್ನೂ ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ ವರುಷದ ಕೊನೆಯಲ್ಲಿ ಫಲಸಂಗ್ರಹ ಜಾತ್ರೆಯನ್ನೂ ಆಚರಿಸಬೇಕು.


ಪರ್ಣಶಾಲೆಗಳ ಹಬ್ಬವೆಂಬ ಯೆಹೂದ್ಯರದೊಂದು ಜಾತ್ರೆಯು ಸಮೀಪವಾದಾಗ


ಇಸ್ರಾಯೇಲ್ಯರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗೋಸ್ಕರ ಅರಸನ ಬಳಿಗೆ ಕೂಡಿಬಂದರು.


ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ ದಿನಕ್ಕೆ ಇಷ್ಟಿಷ್ಟೆಂಬ ವಿಧಿಗನುಸಾರವಾಗಿ ಪ್ರತಿದಿನವೂ ಸರ್ವಾಂಗಹೋಮಗಳನ್ನರ್ಪಿಸಿದರು.


ಯೆಹೋವನ ಯಜ್ಞವೇದಿಯ ಮೇಲೆ ಮೋಶೆಯ ಆಜ್ಞೆಯಂತೆ ಸಬ್ಬತ್ ದಿವಸ, ಅಮಾವಾಸ್ಯೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆ, ಪಂಚಾಶತ್ತಮದಿನದ ಜಾತ್ರೆ, ಪರ್ಣಶಾಲೆಗಳ ಜಾತ್ರೆ ಎಂಬೀ ಮೂರು ವಾರ್ಷಿಕಜಾತ್ರೆಗಳಲ್ಲಿಯೂ ಆಯಾ ದಿವಸಗಳಿಗೆ ನೇಮಕವಾದ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಿದ್ದನು.


ಪ್ರತಿ ಏಳು ವರುಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ


[ಪಸ್ಕವಾದ ಏಳು] ವಾರಗಳ ಮೇಲೆ ನಡೆಯುವ ಜಾತ್ರೆ ಅಂದರೆ ಗೋದೀ ಬೆಳೆಯ ಪ್ರಥಮ ಸಮರ್ಪಣದ ಸುಗ್ಗಿಜಾತ್ರೆಯನ್ನೂ ಸಂವತ್ಸರದ ಅಂತ್ಯದಲ್ಲಿ ಫಲಸಂಗ್ರಹದ ಜಾತ್ರೆಯನ್ನೂ ಆಚರಿಸಬೇಕು.


ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಪ್ರತ್ಯೇಕಿಸಬೇಕು;


ನಾನಂತು ವಿುಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ ಎಂದು ಖಂಡಿತವಾಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು