Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:17 - ಕನ್ನಡ ಸತ್ಯವೇದವು J.V. (BSI)

17 ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯನುಸಾರ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪ್ರತಿಯೊಬ್ಬನು ತನಗೆ ಸರ್ವೇಶ್ವರ ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತಿಗೆ ಅನುಸಾರ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರತಿಯೊಬ್ಬನೂ ಯೆಹೋವನು ತನ್ನನ್ನು ಆಶೀರ್ವದಿಸಿದ ಮೇರೆಗೆ ಆತನಿಗೆ ಕಾಣಿಕೆಯನ್ನರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:17
10 ತಿಳಿವುಗಳ ಹೋಲಿಕೆ  

ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ಆ ಏಳು ವಾರಗಳಾದನಂತರ ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.


ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.


ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು. ಊರೀಮ್ ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬದಾಗಿ ದೇಶಾಧಿಪತಿಯು ತೀರ್ಪುಮಾಡಿದನು.


ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿಯೂ ಪಂಚಾಶತ್ತಮದಿನದ ಜಾತ್ರೆಯಲ್ಲಿಯೂ ಪರ್ಣಶಾಲೆಗಳ ಜಾತ್ರೆಯಲ್ಲಿಯೂ ಅಂತು ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಕೂಡದು.


ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇವಿುಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.


ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಶಕ್ತಿಯಿದ್ದಷ್ಟು ಸೇರು [ಗೋದಿ ಹಿಟ್ಟನ್ನೂ] ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.


ನಾವು ಈ ಪ್ರಕಾರ ಸ್ವೇಚ್ಫೆಯಿಂದ ಕಾಣಿಕೆಗಳನ್ನು ಸಮರ್ಪಿಸಲು ಶಕ್ತಿಹೊಂದಿದ್ದಕ್ಕೆ ನಾನಾಗಲಿ ನನ್ನ ಪ್ರಜೆಗಳಾಗಲಿ ಎಷ್ಟರವರು? ಸಮಸ್ತವು ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು