Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:3 - ಕನ್ನಡ ಸತ್ಯವೇದವು J.V. (BSI)

3 ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕಂದರೆ ನೀವು [ರೊಟ್ಟಿಗೆ ಹುಳಿಹಾಕುವದಕ್ಕೆ ಅವಕಾಶವಿಲ್ಲದೆ] ಅವಸರದಿಂದ ಐಗುಪ್ತದೇಶವನ್ನು ಬಿಟ್ಟುಬಂದಿರಿ. ಐಗುಪ್ತದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿವಸಗಳವರೆಗೂ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಏಕೆಂದರೆ ನೀವು ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ ಅವಸರದಿಂದ ಈಜಿಪ್ಟನ್ನು ಬಿಟ್ಟುಬಂದಿರಿ. ಈಜಿಪ್ಟ್ ದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ, ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ನೀವು ಏಳು ದಿವಸಗಳವರೆಗೂ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:3
27 ತಿಳಿವುಗಳ ಹೋಲಿಕೆ  

ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿದ್ದಿಲ್ಲ, ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಿಪಡಿಸಿಕೊಂಡಿರಲಿಲ್ಲ.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರ ಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರ ಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲಾ.


ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.


ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಂಗಡ ಊಟಮಾಡಬೇಕು.


ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು; ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಂಗಡ ಊಟಮಾಡಬೇಕು.


ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನಾದ ಯೇಸುವನ್ನೂ ಅನುಸರಿಸುವವರಾದಿರಿ.


ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಬೆಳಗಾಗುವದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.


ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ದಯೆಯೂ ಕನಿಕರವೂ ಉಳ್ಳವನು.


ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ವಿುಶ್ರವಾಯಿತು.


ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ ಎಂದು ಹೇಳಿರಿ ಎಂಬದಾಗಿ ಆಜ್ಞಾಪಿಸಿದನು.


ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.


ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.


ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗಂದರೆ - ನೀವು ನಡುವನ್ನು ಕಟ್ಟಿ ಕೆರವನ್ನು ಮೆಟ್ಟಿಕೊಂಡು ಕೋಲು ಹಿಡಿದು ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು.


ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು; ಇದು ಶಾಶ್ವತವಾದ ನಿಯಮ.


ಹೀಗಿರುವದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ನೀವು ಆಡುಕುರಿಗಳಲ್ಲಾಗಲಿ ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.


ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ; ಯೆಹೋವನು ನಿಮಗೆ ಮುಂಬಲವಾಗಿ ಮುಂದರಿಯುವನು, ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಇರುವನು.


ನೀವು ಅವರಿಗೆ - ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನನ್ನು ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತುಹೋಯಿತೆಂಬದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲವೂ ಸಾಕ್ಷಿಗಳಾಗಿರುವವು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು