Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:8 - ಕನ್ನಡ ಸತ್ಯವೇದವು J.V. (BSI)

8 ವಿಧವಿಧವಾದ ಜೀವಹತ್ಯ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಚರ್ಚೆಗಳು ನಿಮ್ಮ ಊರಲ್ಲಿ ಉಂಟಾದಾಗ, ಸರಿಯಾಗಿ ವಿವೇಚಿಸುವದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ವಿಧವಿಧವಾದ ಜೀವಹತ್ಯ, ಹಕ್ಕುಬಾಧ್ಯತೆ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ, ಚರ್ಚೆಗಳು ನಿಮ್ಮ ಊರಲ್ಲಿ ಉಂಟಾಗಬಹುದು. ಆಗ ಸರಿಯಾಗಿ ವಿವೇಚಿಸುವುದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಿಮ್ಮ ನ್ಯಾಯಸ್ಥಾನದಲ್ಲಿ ನ್ಯಾಯತೀರಿಸಲಾಗದ ಕಷ್ಟದ ಸಮಸ್ಯೆಗಳು ಬರುವವು. ಅವು ಕೊಲೆ ಅಥವಾ ಇಬ್ಬರ ಮಧ್ಯೆ ವಿವಾದವಿರಬಹುದು; ಅಥವಾ ಜಗಳಮಾಡಿ ಗಾಯಗೊಂಡಿರುವ ಪ್ರಕರಣವಾಗಿರಬಹುದು. ನಿಮ್ಮ ಪಟ್ಟಣಗಳ ನ್ಯಾಯಸ್ಥಾನದಲ್ಲಿ ಈ ಪ್ರಕರಣಗಳ ವಿಚಾರಣೆ ನಡಿಸುವಾಗ ಸರಿಯಾದ ಇತ್ಯರ್ಥಮಾಡಿ ತೀರ್ಪುಮಾಡಲು ಕಷ್ಟವಾದಲ್ಲಿ ನೀವು ದೇವರು ಆರಿಸುವ ಸ್ಥಳಕ್ಕೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ಊರುಗಳಲ್ಲಿ ಉಂಟಾದ ವಿವಾದಗಳ ವಿಷಯವಾಗಿ ಅಂದರೆ, ಕೊಲೆಯ ವ್ಯಾಜ್ಯವಾಗಲಿ, ವಾದಿ ಪ್ರತಿವಾದ ವ್ಯಾಜ್ಯವಾಗಲಿ, ಹೊಡೆದಾಟದ ವ್ಯಾಜ್ಯವಾಗಲಿ, ನಿಮಗೆ ನ್ಯಾಯತೀರಿಸುವುದು ಕಷ್ಟವಾದರೆ, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:8
28 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೂ ತಾನು ವಾಸಮಾಡುವದಕ್ಕೂ ನಿಮ್ಮ ಎಲ್ಲಾ ಕುಲಗಳೊಳಗಿಂದ ಆದುಕೊಳ್ಳುವ ಸ್ಥಳದಲ್ಲೇ ನೀವು ಆತನ ದರ್ಶನಕ್ಕಾಗಿ ಕೂಡಬೇಕು.


ಸೇನಾಧೀಶ್ವರ ಯೆಹೋವನು ಇಂತೆನ್ನುತಾನೆ - ನೀನು ಯಾಜಕರ ಹತ್ತಿರ ಹೋಗಿ -


ನ್ಯಾಯವಿಚಾರಿಸುವಾಗ ಮುಖದಾಕ್ಷಿಣ್ಯಮಾಡದೆ ಅಧಿಕರನ್ನೂ ಅಲ್ಪರನ್ನೂ ಸಮನಾಗಿ ತಿಳಿಯಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು ಎಂದು ಹೇಳಿದೆನು.


ಜ್ಞಾನಾನುಸಾರವಾಗಿ ಮಾತಾಡುವದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳಿಕೊಳ್ಳತಕ್ಕದ್ದು .


ವ್ಯಾಜ್ಯವಾಡುವ ಆ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು.


ಆ ಪಟ್ಟಣಗಳ ಸಂಗತಿ ಹೇಗಂದರೆ - ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.


ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯ ಮಾಡಿದವನೆಂದು ನೀವು ನಿರ್ಣಯಿಸಬೇಕು; ಅಂಥವನಿಗೆ ಮರಣಶಿಕ್ಷೆಯಾಗಬೇಕು.


ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.


(ಕಳ್ಳನು ಕನ್ನ ಕೊರೆಯುತ್ತಿರುವಾಗಲೇ ಕೈಗೆ ಸಿಕ್ಕಿ ಕೊಲ್ಲಲ್ಪಟ್ಟರೆ ಅದನ್ನು ನರಹತ್ಯವೆಂದು ಎಣಿಸಕೂಡದು.


ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದುಕೊಂದರೆ ಆ ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು; ಅದರ ಮಾಂಸವನ್ನು ತಿನ್ನಕೂಡದು; ಆ ಎತ್ತಿನ ಒಡೆಯನೋ ನಿರ್ದೋಷಿ.


ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದದರಿಂದ ಅವಳಿಗೆ ಗರ್ಭಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಹೆಂಗಸಿನ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡುತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.


ಒಬ್ಬನು ತನ್ನ ದಾಸನನ್ನಾಗಲಿ ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಸಾಯುವಂತೆ ಮಾಡಿದರೆ ಅವನಿಗೆ ತಕ್ಕ ಶಿಕ್ಷೆ ಯಾಗಬೇಕು.


ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ ಸುಲಭ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.


ಯಾತಕ್ಕೆ ನೀನೊಬ್ಬನೇ ನ್ಯಾಯತೀರಿಸುವದಕ್ಕೆ ಕೂತಿರುತ್ತಿ ಎಂದು ಕೇಳಲು ಮೋಶೆ ಅವನಿಗೆ - ದೇವರ ತೀರ್ಪನ್ನು ತಿಳುಕೊಳ್ಳುವದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ;


ಕಳ್ಳನು ಸಿಕ್ಕದೆಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಏನೋ ಎಂಬದನ್ನು ನಿಶ್ಚಯಿಸುವದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ


ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ವ್ಯಾಜ್ಯವಾಗುವಲ್ಲಿ ಅದನ್ನು ತೀರಿಸಲು ನಿಂತು ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳು ಆಚರಿಸಲ್ಪಡುವಂತೆ ನೋಡಿಕೊಳ್ಳಲಿ.


ನಿಮ್ಮ ಕುಲಗಳಲ್ಲಿ ಯಾವದೋ ಒಂದು ಕುಲದಲ್ಲಿ ಯೆಹೋವನು ಆದುಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡಿಸಬೇಕು.


ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರವಿರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಆದುಕೊಂಡಿದ್ದಾನಲ್ಲ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


ಅವನು ಹೊತ್ತಾರೆಯಲ್ಲೆದ್ದು ಊರುಬಾಗಲ ಬಳಿಯಲ್ಲಿ ನಿಂತುಕೊಳ್ಳುವನು. ಯಾವನಾದರೂ ತನ್ನ ವ್ಯಾಜ್ಯತೀರಿಸಿಕೊಳ್ಳುವದಕ್ಕಾಗಿ ಅರಸನ ಬಳಿಗೆ ಹೋಗುವದನ್ನು ಅಬ್ಷಾಲೋಮನು ಕಂಡರೆ ಅಂಥವನನ್ನು ತನ್ನ ಬಳಿಗೆ ಕರೆದು ನೀನು ಯಾವ ಊರಿನವನು ಎಂದು ಕೇಳುವನು. ಅವನು - ನಿನ್ನ ಸೇವಕನಾದ ನಾನು ಇಸ್ರಾಯೇಲ್ಯರ ಇಂಥ ಕುಲಕ್ಕೆ ಸೇರಿದವನು ಎಂದು ಉತ್ತರ ಕೊಡುವನು.


ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳೂ ಲೌಕಿಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲ್ಯರ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಆಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು