Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:4 - ಕನ್ನಡ ಸತ್ಯವೇದವು J.V. (BSI)

4 ಆ ಪಟ್ಟಣಗಳ ಸಂಗತಿ ಹೇಗಂದರೆ - ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ನಗರಗಳ ವಿವರ ಹೀಗಿದೆ, ಯಾವನಾದರೂ ದ್ವೇಷವಿಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದರೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಆ ಆಶ್ರಯನಗರಗಳ ವಿವರ ಹೀಗಿದೆ: ಯಾವನಾದರು ದ್ವೇಷವಿಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದರೆ, ಅವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಅಂಥಾ ಮನುಷ್ಯನಿಗೆ ಅನ್ವಯಿಸುವ ನಿಯಮಗಳು ಯಾವುವೆಂದರೆ: ಆ ಮನುಷ್ಯನು ಇನ್ನೊಬ್ಬನನ್ನು ಕೊಂದದ್ದು ಆಕಸ್ಮಿಕವಾಗಿರಬೇಕು; ಕೊಲ್ಲಲ್ಪಟ್ಟವನ ಮೇಲೆ ಅವನಿಗೆ ದ್ವೇಷವಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬದುಕಿ ಉಳಿಯಲು ಅಲ್ಲಿ ಓಡಿಹೋಗತಕ್ಕ ಕೊಲೆಪಾತಕನ ವಿವರವೇನೆಂದರೆ, ತಿಳಿಯದೆ ಇಲ್ಲವೆ ಪೂರ್ವ ಕಲ್ಪಿತ ಹಗೆ ಮಾಡದೆ, ತನ್ನ ನೆರೆಯವನನ್ನು ಹೊಡೆದವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:4
12 ತಿಳಿವುಗಳ ಹೋಲಿಕೆ  

ಮೊದಲು ಯಾವ ದ್ವೇಷವೂ ಇಲ್ಲದೆ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ಪಟ್ಟಣಗಳನ್ನು ನೇವಿುಸಿದನು.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು.


ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ನಿನ್ನ ದೇವರಾದ ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿ ಎಂದು ಹೇಳಿದ್ದಾನಷ್ಟೆ ಅಂದರು.


ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗತಕ್ಕ ಮಾರ್ಗವು ನಿಮಗೆ ಗೊತ್ತಾಗುವದು; ಆ ಮಾರ್ಗದಲ್ಲಿ ನೀವು ಮುಂಚೆ ಬರಲಿಲ್ಲವಲ್ಲಾ ಅಂದರು.


ಸತ್ತವನಲ್ಲಿ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲವಲ್ಲಾ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಾನು; ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದುಹಾಕಿಬಿಟ್ಟಾನು.


ಇದಲ್ಲದೆ ಅವನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಲಿಲ್ಲ.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು -


ಅವನು ಸಭೆಯವರಿಂದ ತೀರ್ಪುಹೊಂದುವದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯಸ್ಥಾನಗಳು ನಿಮ್ಮೊಳಗೆ ಇರಬೇಕು.


ನರಹತ್ಯಮಾಡಿದವರು ಆ ಪಟ್ಟಣಗಳಿಗೆ ಓಡಿಹೋಗುವದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಗಳನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ಆ ದೇಶವನ್ನು ಮೂರು ಭಾಗ ಮಾಡಬೇಕು.


ದೃಷ್ಟಾಂತ - ಒಬ್ಬ ಮನುಷ್ಯನು ಕಟ್ಟಿಗೆಯನ್ನು ಕಡಿಯಬೇಕೆಂದು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋಗಿ ಅಲ್ಲಿ ಒಂದು ಮರವನ್ನು ಕಡಿಯಬೇಕೆಂದು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿಯು ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿದ್ದರಿಂದ ಅವನು ಸತ್ತರೆ ಹೊಡೆದವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.


ಆಗ ಆ ಸ್ತ್ರೀಯು - ಸಮೀಪಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು ಎಂದು ಬೇಡಿಕೊಂಡಳು. ಅದಕ್ಕೆ ಅರಸನು - ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡುವದಿಲ್ಲ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು