Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:23 - ಕನ್ನಡ ಸತ್ಯವೇದವು J.V. (BSI)

23 ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇಡೀ ರಾತ್ರಿ ಆ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕೆಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:23
18 ತಿಳಿವುಗಳ ಹೋಲಿಕೆ  

ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ಆ ಹೊತ್ತು ಸೌರಣೆಯ ದಿವಸವಾಗಿದ್ದದರಿಂದ ಯೆಹೂದ್ಯರು - ಸಬ್ಬತ್‍ದಿನದಲ್ಲಿ ಶವಗಳು ಶಿಲುಬೆಯ ಮೇಲೆ ಇರಬಾರದೆಂದು ಪಿಲಾತನನ್ನು - ಅವರ ಕಾಲುಗಳನ್ನು ಮುರಿಸಿ ಅವರನ್ನು ತೆಗೆಸಿಹಾಕಬೇಕೆಂಬದಾಗಿ ಕೇಳಿಕೊಂಡರು; ಯಾಕಂದರೆ ಆ ಸಬ್ಬತ್‍ದಿನವು ಬಹು ವಿಶೇಷವಾದದ್ದು.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಅವರ ದೇಶವು ಅಶುದ್ಧವಾಗಿ ಹೋದದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸಿದವರನ್ನು ಕಾರಿಬಿಟ್ಟಿತು.


ಶರೀರಸಂಬಂಧವಾಗಿ ಸ್ವಜನರಾಗಿರುವ ನನ್ನ ಸಹೋದರರಿಗೋಸ್ಕರ ನಾನೇ ಸಾಧ್ಯವಾದರೆ ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.


ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರಿಗೆ ಯೆಹೋವನಿಗೋಸ್ಕರ ಬಹಿರಂಗವಾಗಿ ಮರಣದಂಡನೆಯನ್ನು ಮಾಡಿಸಬೇಕು; ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲ್ಯರಿಂದ ತೊಲಗಿಸಬೇಕು ಎಂದು ಹೇಳಿದನು.


ಆಯಿ ಎಂಬ ಊರಿನ ಅರಸನನ್ನು ಸಾಯಂಕಾಲದವರೆಗೂ ಮರದಲ್ಲಿ ನೇತುಹಾಕಿಸಿ ಸೂರ್ಯನು ಅಸ್ತವಿುಸುತ್ತಲೇ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರು ಬಾಗಲಲ್ಲಿ ಹಾಕಿಸಿಬಿಟ್ಟು ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ಕರ್ತನು ಬರುತ್ತಾನೆ.


ಆದದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸುವರು. ಅವರು ಶಾಪಗ್ರಸ್ತರೇ. ಶಾಪಕ್ಕೆ ಕಾರಣವಾದದ್ದನ್ನು ನಿಮ್ಮ ಮಧ್ಯದಿಂದ ತೆಗೆದು ಹಾಕುವವರೆಗೆ ನಾನು ನಿಮ್ಮ ಸಂಗಡ ಬರುವದಿಲ್ಲ. ಎದ್ದು ಜನರನ್ನು ಶುದ್ಧಪಡಿಸು.


ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು. ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಯೆಹೋವನ ಸನ್ನಿಧಿಯಲ್ಲಿ ನೇತುಹಾಕುವೆವು ಎಂದರು. ಅರಸನು - ಆಗಲಿ, ಒಪ್ಪಿಸುತ್ತೇನೆ ಅಂದನು.


ಅದು ಕೇವಲ ಯೆಹೋವನದಾಗುವದಕ್ಕೆ ನಾಶವಾಗತಕ್ಕದ್ದಾಗಿರುವದರಿಂದ ನೀವು ಅಂಥ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟದಿರಬೇಕು.


ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯು ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕೂತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳೂ ಇರುಳಿನಲ್ಲಿ ಕಾಡುಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.


ಇಸ್ರಾಯೇಲ್ಯರು ದೇಶವನ್ನು ಶುದ್ಧಿಮಾಡುವದಕ್ಕಾಗಿ ಏಳು ತಿಂಗಳು ಅವರನ್ನು ಹೂಣುತ್ತಲೇ ಇರುವರು.


ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ


ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.


ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ಮುಟ್ಟಿದಾಗ ಅವನು - ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಲಿನ ಹತ್ತಿರ ಎರಡು ರಾಶಿಗಳಾಗಿ ಹಾಕಬೇಕೆಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು