Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:8 - ಕನ್ನಡ ಸತ್ಯವೇದವು J.V. (BSI)

8 ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನೀವು ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ನಿಮ್ಮ ಮನೆಯ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಿಸಬೇಕು. ಇಲ್ಲದಿದ್ದರೆ ಒಬ್ಬನು ಆ ಮಾಳಿಗೆಯಿಂದ ಬಿದ್ದು, ಅವನ ಜೀವಹತ್ಯದೋಷ ನಿಮ್ಮ ಮನೆಯ ಮೇಲೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನೀವು ಮನೆ ಕಟ್ಟುವಾಗ ಅದರ ಮೇಲ್ಛಾವಣಿಯ ಸುತ್ತಲೂ ಅರ್ಧ ಗೋಡೆಯನ್ನು ಕಟ್ಟಬೇಕು. ಹೀಗೆ ಮಾಡದೆಹೋದರೆ ಯಾರಾದರೂ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಸತ್ತಲ್ಲಿ ಅವನ ಸಾವಿಗೆ ನೀವು ಕಾರಣರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀನು ಹೊಸ ಮನೆಯನ್ನು ಕಟ್ಟಿದಾಗ, ಯಾರೂ ಅದರ ಮೇಲಿನಿಂದ ಬಿದ್ದು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:8
20 ತಿಳಿವುಗಳ ಹೋಲಿಕೆ  

ಜನರು ಗುಂಪಾಗಿದ್ದದರಿಂದ ಅವರು ಆತನ ಹತ್ತಿರಕ್ಕೆ ಸೇರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ದ್ವಾರಮಾಡಿ ಪಾರ್ಶ್ವವಾಯುರೋಗಿಯು ಮಲಗಿದ್ದ ಹಾಸಿಗೆಯನ್ನು ಇಳಿಸಿದರು.


ಯೆರೂಸಲೇವಿುನ ಮನೆಗಳೂ ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲಾ ಹೊಲಸಾಗಿ ತೋಫೆತೆಂಬ ಸ್ಥಳಕ್ಕೆ ಸಮಾನವಾಗುವವು.


ದಿವ್ಯದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ. ನಿನಗೆ ಏನಾಯಿತು? ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದ್ದೇಕೆ?


ಅವನು ಒಂದು ದಿವಸ ಸಂಜೇ ಹೊತ್ತಿನಲ್ಲಿ ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿರುವಾಗ ಅಲ್ಲಿಂದ ಬಹುಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವದನ್ನು ಕಂಡನು.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನದಲ್ಲಿ ಪ್ರಾರ್ಥನೆ ಮಾಡುವದಕ್ಕಾಗಿ ಮಾಳಿಗೆಯನ್ನು ಹತ್ತಿದನು.


ನಾನು ಕತ್ತಲಲ್ಲಿ ನಿಮಗೆ ಹೇಳುವದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.


ಒಬ್ಬನು ಹೊತ್ತಿಸಿದ ಬೆಂಕಿ ಅಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಹತ್ತಿದ್ದರಿಂದ ಮತ್ತೊಬ್ಬನ ದವಸದ ರಾಶಿಗಳಾಗಲಿ ಬೆಳೆಯಾಗಲಿ ಹೊಲವಾಗಲಿ ಸುಟ್ಟುಹೋದರೆ, ಬೆಂಕಿಹೊತ್ತಿಸಿದವನು ಈಡುಕೊಡಬೇಕು.


ಇದಲ್ಲದೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ನಾನು ಅವನ ಮುಂದೆ ಒಡ್ಡಿದ ಆಟಂಕವನ್ನು ಎಡವಿದರೆ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆ ಬಾರವು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.


ನಾನು ದುಷ್ಟನಿಗೆ - ಸತ್ತೇ ಸಾಯುವಿ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವದು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.


ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ಪೂರ್ಣ ಜ್ಞಾನವಿವೇಕಗಳಿಂದ ಕೂಡಿ ಉತ್ತಮ ಕಾರ್ಯಗಳು ಯಾವವೆಂದು ನೀವು ವಿವೇಚಿಸುವವರಾಗಬೇಕೆಂತಲೂ ಕ್ರಿಸ್ತನು ಬರುವ ದಿನದಲ್ಲಿ ನೀವು


ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.


ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸುಂಟಾಗುವದು. ಮತ್ತು ಬಹುಕಾಲ ಬಾಳುವಿರಿ.


ದ್ರಾಕ್ಷೇತೋಟಗಳಲ್ಲಿ ಬೇರೆ ವಿಧವಾದ ಬಿತ್ತನೆ ಮಾಡಬಾರದು; ಹಾಗೆ ಮಾಡಿದರೆ ಆ ಬೆಳೆಯೂ ಮತ್ತು ದ್ರಾಕ್ಷೆಯ ಬೆಳೆಯೂ ಅಂತೂ ಆ ತೋಟದ ಎಲ್ಲಾ ಬೆಳೆಯೂ ದೇವರದಾಗುವದು.


ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೇ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು